Tragedy: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ… ಇಬ್ಬರು ಮೃತ್ಯು, ಏಳು ಮಂದಿಗೆ ಗಾಯ
Team Udayavani, Oct 25, 2023, 2:40 PM IST
ವಾಡಿ: ಕಾರು ಪಲ್ಟಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಏಳು ಜನರಿಗೆ ಗಂಭೀರ ಗಾಯಗಳಾದ ಘಟನೆ ಮಂಗಳವಾರ ಮಧ್ಯ ರಾತ್ರಿ 11:30ರ ವೇಳೆ ಚಿತ್ತಾಪುರ ತಾಲೂಕಿನ ಹಳಕರ್ಟಿ-ಲಾಡ್ಲಾಪುರ ಗ್ರಾಮಗಳ ನಡುವಿನ ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ಸಂಭವಿಸಿದೆ.
ರಮೇಶ ಜೀವ್ಲಾ ಪವಾರ (45) ಮತ್ತು ದಯಾನಂದ ದೇವಸಿಂಗ್ (8) ಮೃತಪಟ್ಟವರು. ಸಂತೋಷ ಹೀರಾ ಪವಾರ, ಅನುಶಾಬಾಯಿ ಹೀರೂ ಪವಾರ, ವೆಂಕಟೇಶ ಹೀರೂ ಪವಾರ, ದಿನೇಶ ಹೀರೂ ಪವಾರ, ಯುವರಾಜ ಹೀರೂ ಪವಾರ, ಸಂಗೀತಾಬಾಯಿ ರಮೇಶ ಪವಾರ, ದೇವಸಿಂಗ್ ಕಿಶನ ಪವಾರ ಗಾಯಗೊಂಡವರು. ಇವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಶಹಾಬಾದ ನಗರಸಭೆ ವ್ಯಾಪ್ತಿಯ ನಿಜಾಮ್ ಬಾಜಾರ್ ಬಡಾವಣೆಯ ನಿವಾಸಿಗಳಾಗಿದ್ದಾರೆ.
ದಸರಾ ಹಬ್ಬದ ನಿಮಿತ್ತ ಇವರೆಲ್ಲರೂ ಯಾದಗಿರಿ ಗಡಿ ಭಾಗದ ಯರಗೋಳ ಗ್ರಾಮ ಸಮೀಪದ ನಿಂಗಸಳ್ಳಿ ತಾಂಡಾದ ಸಂಬಂಧಿಕರ ಮನೆಗೆ ಹಬ್ಬದೂಟಕ್ಕೆಂದು ಒಟ್ಟಿಗೆ ಕಾರಿನಲ್ಲಿ ಹೋಗಿದ್ದರು. ಊಟ ಮುಗಿಸಿಕೊಂಡು ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟರೆ, ಎಳು ಜನರು ಗಂಭಿರವಾಗಿ ಗಾಯಗೊಂಡಿದ್ದರು. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ತಿರುಮಲೇಶ ಕುಂಬಾರ ಹಾಗೂ ಸಿಬ್ಬಂದಿಗಳು, ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿಲಾಗುತ್ತಿದೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: National Icon: ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್ಕುಮಾರ್ ರಾವ್ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು
Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ