Kalaburagi; ಎರಡು ವರ್ಷದಿಂದ ನಡೆಯದ ಕೆಡಿಪಿ ಸಭೆ: ಸಂಸದ ಡಾ. ಜಾಧವ್ ಆಕ್ರೋಶ
Team Udayavani, Oct 26, 2023, 3:32 PM IST
ಕಲಬುರಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ಕಳೆದ ಎರಡು ವರ್ಷಗಳಿಂದ ನಡೆಯದೆ ಇರುವುದಕ್ಕೆ ಸಂಸದ ಡಾ. ಉಮೇಶ ಜಾಧವ್ ಆಕ್ರೋಶ ವ್ಯಕ್ತಪಡಿಸಿದರು.
ಎರಡು ವರ್ಷಗಳಿಂದ ನಡೆಯದ ದಿಶಾ ಸಭೆ ಕೊನೆಗೆ ಅಕ್ಟೋಬರ್ 27 ರಂದು ನಿಗದಿಯಾಗಿ ತದನಂತರ ದಿಢೀರನೆ ಮುಂದೂಡಲ್ಪಟ್ಟಿರುವುದು ನಿಜಕ್ಕೂ ಹಳಿ ತಪ್ಪಿದ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ಪಾತಾಳಕ್ಕೆ ತಳ್ಳುವಂತಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಟೀಕಿಸಿದರು.
ದಿಶಾ ಸಭೆಗೆ ಸಂಸದರೇ ಅಧ್ಯಕ್ಷರು. ಆದರೆ ನಿಯಮವಾಳಿ ಪ್ರಕಾರ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರೇ ದಿಶಾ ಸಮಿತಿ ಸಭೆ ಅಧ್ಯಕ್ಷರಾಗಿದ್ದಾರೆ. ಆದರೆ ಕಳೆದೆರಡು ವರ್ಷದಿಂದ ಸಭೆ ನಡೆಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಹಾಗೂ ಕಾಮಗಾರಿ ಪೂರ್ಣಗೊಳ್ಳುವಲ್ಲಿ ಕೇಂದ್ರದ ಪಾತ್ರ ಏನೆಂಬುದನ್ನು ಅರಿಯಲು ದಿಶಾ ಸಭೆಯೇ ಸೂಕ್ತ ಪರಿಹಾರವಾಗಿದೆ. ಪ್ರಮುಖವಾಗಿ ದಿಶಾ ಸಭೆ ಕರೆದಲ್ಲಿ ಎಲ್ಲ ಅಧಿಕಾರಿಗಳು ಬರುತ್ತಾರೆ. ದಿಶಾ ಸಭೆಗೆ ಎಲ್ಲ ಇಲಾಖೆಗಳು ಬರುತ್ತವೆ. ಆದರೆ ಸಭೆ ನಡೆಸಲು ದೊಡ್ಡ ನಾಯಕರಿಗೆ ಪುರುಸೊತ್ತು ಸಿಕ್ತಾ ಇಲ್ಲ. ಹೀಗಾಗಿ ಅಭಿವೃದ್ಧಿ ಎಂಬುದು ಹಳಿ ತಪ್ಪುತ್ತಿದೆ. ಅಧಿಕಾರಿಗಳಿಗೆ ಹೆದರಿಕೆ ಇಲ್ಲ ಎನ್ನುವಂತಾಗಿದೆ. ಜನ ಸಾಮಾನ್ಯರು ತಮ್ಮೆದುರು ಅಳಲು ತೋಡಿಕೊಳ್ಳುತ್ತಾರೆ. ಈ ಬಗ್ಗೆ ಸಭೆಯಲ್ಲಿ ಧ್ವನಿ ಎತ್ತಬೇಕೆಂದರೆ ದಿಶಾ ಸಭೆಯೇ ಕರೆಯುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ವಿದ್ಯುತ್ ಸಮಸ್ಯೆ, ರಸ್ತೆ ಗಳ ನಿರ್ಮಾಣ ವಾಸ್ತವಿಕತೆ, ಹದಗೆಟ್ಟ ಕಾನೂನು ವ್ಯವಸ್ಥೆ, ಹೆಚ್ಚಳಗೊಂಡ ಅನೈತಿಕ ಚಟುವಟಿಕೆಗಳ ಕುರಿತಾಗಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷತೆಯ ಕೆಡಿಪಿ ಸಭೆ ಸಹ ನಡೆಸುತ್ತಿಲ್ಲ. ಈ ಬಗ್ಗೆ ಚರ್ಚಿಸಲು ಕೆಡಿಪಿ ಸಭೆ ಕರೆಯುವಂತೆ ತಾವು ಆಗ್ರಹಿಸಿದರೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲಹೆ ನೀಡಿ ಒತ್ತಾಯಿಸಿದರೆ, ಕೆಡಿಒ ಸಭೆ ನಡೆಸದಿದ್ದಕ್ಕೆ ಬಿಜೆಪಿಯವರು ಸಭೆ ನಡೆಯುವಂತಾಗಲು ಬೇಕಿದ್ದರೆ ಕೋರ್ಟ್ ಗೆ ಹೋಗಿ ಎಂದು ವ್ಯಂಗ್ಯವಾಡಿರುವುದು ಶೋಭೆ ತರುವಂತದ್ದಲ್ಲ ಡಾ. ಜಾಧವ್ ಟೀಕಿಸಿದರು.
ಪಶ್ಚಿಮ ಬಂಗಾಳವಾದ ಕಲಬುರಗಿ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ ಪುರಸ್ಕೃತ ಕಾಮಗಾರಿಗಳ ಪರಿಶೀಲನೆ ಮಾಡುವ ದಿಶಾ ಸಭೆಯು ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುವುದೇ ಇಲ್ಲ. ಅದೇ ತರಹ ಕಲಬುರಗಿಯಾಗಿದೆ ಎಂದು ಸಂಸದ ಡಾ. ಜಾಧವ್ ವಾಗ್ದಾಳಿ ನಡೆಸಿದರು.
ದೂರು: ದಿಶಾ ಸಮಿತಿ ಸಭೆ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಸಭೆಗೆ 15 ದಿನ ಮೊದಲೇ ಜಿಲ್ಲಾ ಪಂಚಾಯತ್ ಸಿಇಒ ಅವರು ನೋಟಿಸ್ ನೀಡಬೇಕು. ಈಗಲಾದರೂ ಶೀಘ್ರ ಸಭೆ ನಡೆಸುವಂತೆ ಸಿಇಒ ಅವರ ಗಮನಕ್ಕೆ ತರಲಾಗಿದೆ. ಆದರೂ ನಿಗದಿತವಾಗಿ ಸಭೆ ನಡೆಯದಿರುವ ಕುರಿತಾಗಿ ಸಂಬಂಧಪಟ್ಟವರಿಗೆ ದೂರಶಿಕ್ಷಣ ಸಲ್ಲಿಸುವುದಾಗಿ ಡಾ. ಜಾಧವ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಯಾವುದನ್ನು ಟೀಕಿಸುತ್ತಾರೆಯೋ ಅದಕ್ಕಷ್ಟೇ ಉತ್ತರ ನೀಡಿದ್ದೇನೆ. ಬಾಲ್ ಹಾಕಿದ್ದಕ್ಕೆ ಬ್ಯಾಟ್ ದಿಂದ ಉತ್ತರ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮನ್ನು ಗೌರವದಿಂದ ಮಾತನಾಡುತ್ತಾರೆ. ಇವರು ಹೇಗೆ ಮಾತನಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಭೀಕರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿ ಜನ ಗೂಳೆ ಹೋಗುತ್ತಿದ್ದಾರೆ. ತೊಗರಿ ಸಂಪೂರ್ಣ ನಾಶವಾಗಿದೆ. ಅಭಿವೃದ್ಧಿ ಕುಂಠಿತವಾಗಿವೆ. ಹೀಗಾಗಿ ಕಲಬುರಗಿಯಲ್ಲೇ ಠಿಕಾಣಿ ಹೂಡಿ ಸ್ಪಂದಿಸಬೇಕು. ಅದನ್ನು ಬಿಟ್ಟು ಬೆಳಿಗ್ಗೆ ವಿಮಾನ ಮೂಲಕ ಬಂದು ಸಂಜೆ ಹೋದರೆ ಹೇಗೆ? ಜನ ಇದನ್ನೆಲ್ಲಾ ಮತ್ತೆ ಅರಿಯುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
Revenge: 13 ವರ್ಷದ ಬಾಲಕಿ ಕುತ್ತಿಗೆಗೆ ಚೂರಿ ಇರಿತ ! ಅತ್ಯಾಚಾರಕ್ಕೆ ಅತ್ಯಾಚಾರದ ಪ್ರತಿಕಾರ?
Chincholi: ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು,ಪುತ್ರನಿಗೆ ಗಂಭೀರ ಗಾಯ
Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ
ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್ ಜಾರಿ
Sakaleshpura ಪಿಕಪ್ ಪಲ್ಟಿ: ಕಕ್ಯಪದವಿನ ಯುವಕ ಸಾವು
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ