Hamas: ಹಮಾಸ್ ದಾಳಿಗೆ ಭಾರತ- ಮಧ್ಯಪ್ರಾಚ್ಯ ಕಾರಿಡಾರ್ ಕಾರಣ!- ಜೋ ಬೈಡೆನ್
Team Udayavani, Oct 26, 2023, 9:50 PM IST
ವಾಷಿಂಗ್ಟನ್: ಇಸ್ರೇಲ್ ವಿರುದ್ಧ ಅ.7ರಂದು ಹಮಾಸ್ ಉಗ್ರರು ಏಕಾಏಕಿ ದಾಳಿ ನಡೆಸಲು ಉದ್ದೇಶಿತ ಭಾರತ-ಮಧ್ಯಪ್ರಾಚ್ಯ- ಐರೋಪ್ಯ ಒಕ್ಕೂಟ- ಆರ್ಥಿಕ ಕಾರಿಡಾರ್ (ಐಎಂಇಇಸಿ) ಕಾರಣವಾಗಿರುವ ಸಾಧ್ಯತೆ ಇದೆ. ಹೀಗೆಂದು ಹೇಳಿರುವುದು ಅಮೆರಿಕ ಅಧ್ಯಕ್ಷ ಜೋ ಬೈಡೆನ್.
ಅಮೆರಿಕ ಪ್ರವಾಸದಲ್ಲಿ ಇರುವ ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್ ಅವರ ಜತೆಗೆ ವಾಷಿಂಗ್ಟನ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಬೈಜೆನ್ ಈ ಶಂಕೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ನಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಚೀನಾ ಕೈಗೊಂಡ ಬೆಲ್ಟ್ ಆ್ಯಂಡ್ ರೋಡ್ ಇನಿಶಿಯೇಟಿವ್ (ಬಿಆರ್ಐ)ಗೆ ಪರ್ಯಾಯವಾಗಿ ಈ ಯೋಜನೆಯನ್ನು ಘೋಷಿಸಲಾಗಿತ್ತು.
“ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿರುವ ದಾಳಿಗೆ ನವದೆಹಲಿಯಲ್ಲಿ ನಡೆದಿದ್ದ ಜಿ20 ರಾಷ್ಟ್ರಗಳ ಸಮ್ಮೇಳನದಲ್ಲಿ ಐಎಂಇಇಸಿ ಬಗ್ಗೆ ಘೋಷಣೆ ಮಾಡಲಾಗಿತ್ತು. ಹೀಗಾಗಿ, ಉಗ್ರರು ದಾಳಿ ನಡೆಸಲು ಅದೂ ಒಂದು ಕಾರಣವಾಗಿರುವ ಸಾಧ್ಯತೆ ಇದೆ. ನನ್ನ ಹೇಳಿಕೆಗೆ ಸಾಕ್ಷ್ಯಗಳೇನೂ ಇಲ್ಲ. ನನ್ನ ಮನಸ್ಸಿಗೆ ತೋಚಿದ್ದನ್ನು ಹೇಳಿದ್ದೇನೆ. ಇಸ್ರೇಲ್ ವಿಚಾರದಲ್ಲಿ ನಾವು ಸಾಧಿಸಿರುವ ಪ್ರಗತಿ ಮತ್ತು ಪ್ರಾದೇಶಿಕ ಏಕೀಕರಣದಲ್ಲಿ ಬಹಳಷ್ಟನ್ನು ಸಾಧಿಸಿದ್ದನ್ನು ತಡೆಯಲಾರದೆ ಈ ಕೃತ್ಯ ನಡೆದಿರುವ ಸಾಧ್ಯತೆಗಳು ಇವೆ’ ಎಂದು ಬೈಡೆನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Abu Dhabi: ಅಬುಧಾಬಿಯಲ್ಲಿ ಬಿಯರ್ ಅಂಗಡಿ!
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?
ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ