Odisha: ಗಾಯಗೊಂಡ ತಂದೆಯ ಚಿಕಿತ್ಸೆಗಾಗಿ 35 ಕಿ.ಮೀ. ಸೈಕಲ್ ರಿಕ್ಷಾ ತುಳಿದ ಮಗಳು
Team Udayavani, Oct 27, 2023, 1:35 PM IST
ಭುವನೇಶ್ವರ: ಗಾಯಗೊಂಡ ತಂದೆಯನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಚಿಕಿತ್ಸೆ ನೀಡಲು 14 ವರ್ಷದ ಮಗಳು ಬರೋಬ್ಬರಿ 35 ಕಿಲೋ ಮೀಟರ್ ದೂರದ ವರೆಗೆ ಸೈಕಲ್ ರಿಕ್ಷಾವನ್ನು ತುಳಿದು ಆಸ್ಪತ್ರೆಗೆ ಕರೆತಂದ ಘಟನೆ ಒಡಿಶಾದ ಭದ್ರಕ್ನಲ್ಲಿ ಬೆಳಕಿಗೆ ಬಂದಿದೆ.
ಈ ಘಟನೆ ನಡೆದಿರುವುದು ಅಕ್ಟೋಬರ್ 23 ರಂದು ಇದೀಗ ವಿಚಾರ ದೇಶದಾದ್ಯಂತ ಹರಿದಾಡುತ್ತಿದೆ. ತಂದೆಯ ಚಿಕಿತ್ಸೆಗಾಗಿ ಮಗಳೇ ಸೈಕಲ್ ರಿಕ್ಷಾ ತುಳಿದು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಇದೀಗ ಸುದ್ದಿಯಾಗುತ್ತಿದೆ.
ಏನಿದು ಪ್ರಕರಣ:
ಭದ್ರಾಕ್ ಜಿಲ್ಲೆಯ ನಾಡಿಗನ್ ಗ್ರಾಮದ ನಿವಾಸಿಯಾಗಿರುವ 14 ವರ್ಷದ ಸುಜಾತಾ ಸೇಥಿ. ಕೆಲ ದಿನಗಳ ಹಿಂದೆ ಸುಜಾತಾ ತಂದೆ ಶಂಭುನಾಥ್ ಯಾವುದೋ ಜಗಳದಲ್ಲಿ ಗಾಯಗೊಂಡಿದ್ದರು. ಅಕ್ಟೋಬರ್ 23 ರಂದು ಸುಜಾತಾ ಗಾಯಗೊಂಡ ತಂದೆಯನ್ನು ಸೈಕಲ್ ರಿಕ್ಷಾದಲ್ಲಿ ಕೂರಿಸಿಕೊಂಡು 14 ಕಿ.ಮೀ ದೂರದಲ್ಲಿರುವ ಧಮ್ನಗರ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಶಂಬುನಾಥ್ ಅವರಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದುದರಿಂದ ಆಸ್ಪತ್ರೆ ವೈದ್ಯರು ಭದ್ರಾಕ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲು ಸಲಹೆ ನೀಡಿದರು.
ವೈದ್ಯರ ಸಲಹೆಯಂತೆ ತಂದೆಯನ್ನು ಸುಜಾತಾ ಧಮ್ನಗರ್ ಆಸ್ಪತ್ರೆಗೆಯಿಂದ ಭದ್ರಾಕ್ ಜಿಲ್ಲಾ ಆಸ್ಪತ್ರೆಗೆ ತನ್ನ ಸೈಕಲ್ ರಿಕ್ಷಾದಲ್ಲಿ ಕುಳ್ಳಿರಿಸಿ 35 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾಳೆ. ಇಲ್ಲಿ ತಪಾಸಣೆ ನಡೆಸಿದ ವೈದ್ಯರು ಅಗತ್ಯ ಔಷಧಿಗಳನ್ನು ನೀಡಿ ಒಂದು ವಾರದ ಬಳಿಕ ಮತ್ತೆ ಆಸ್ಪತ್ರೆಗೆ ಬರುವಂತೆ ಹೇಳಿದ್ದಾರೆ.
ವೈದ್ಯರ ಸೂಚನೆಯಂತೆ ಚಿಕಿತ್ಸೆ ಕೊಡಿಸಿ ಬಳಿಕ ಮತ್ತೆ 35 ಕಿಲೋಮೀಟರ್ ದೂರದಲ್ಲಿರುವ ತನ್ನ ಮನೆಗೆ ಸೈಕಲ್ ರಿಕ್ಷಾ ತುಳಿದು ಮನೆ ತಲುಪಿದ್ದಾಳೆ. ಈ ವೇಳೆ ರಸ್ತೆಯಲ್ಲಿ ಬಾಲಕಿ ತಂದೆಯನ್ನು ಕರೆತರುವ ವೇಳೆ ರಸ್ತೆಯದ್ದ ಕೆಲವರು ಬಾಲಕಿಯನ್ನು ವಿಚಾರಿಸಿದ್ದಾರೆ ಈ ವೇಳೆ ಆಕೆ ತಂದೆಗೆ ಚಿಕಿತ್ಸೆ ನೀಡಬೇಕು ಹಾಗೆ ಅವರನ್ನು ವಾಹನದ ಮೂಲಕ ಕರೆದುಕೊಂಡು ಹೋಗಲು ನನ್ನ ಬಳಿ ಹಣ ಇರಲಿಲ್ಲ ಹಾಗಾಗಿ ಸೈಕಲ್ ರಿಕ್ಷಾದಲ್ಲೇ ಕರೆದುಕೊಂಡು ಹೋಗಲು ನಿರ್ಧರಿಸಿದೆ ಎಂದು ಹೇಳಿದ್ದಾಳೆ.
ವಯಸ್ಸಾದ ತಂದೆ ತಾಯಿಯನ್ನು ಮನೆಯಿಂದ ಹೊರಹಾಕುವ ಕಾಲದಲ್ಲಿ ಈ ಬಾಲಕಿ ತನ್ನ ತಂದೆಯ ಚಿಕಿತ್ಸೆಗೆ ಅಷ್ಟೊಂದು ದೂರ ಸೈಕಲ್ ರಿಕ್ಷಾ ತುಳಿದು ಚಿಕಿತ್ಸೆ ಕೊಡಿಸಿರುವುದು ನಿಜಕ್ಕೂ ಶ್ಲಾಘನೀಯ.
ಇದನ್ನೂ ಓದಿ: IndiaVsAustralia T20 Series: ಟೀಂ ಇಂಡಿಯಾದ ಪ್ರಮುಖರಿಗಿಲ್ಲ ಚಾನ್ಸ್, ಕೋಚ್ ಕೂಡಾ ಬದಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ