Kunigal: ಬರದ ತಾಲೂಕಿಗೆ ಹರಿದ ಹೇಮೆ ನೀರು : ಶಾಸಕರಿಂದ ನಾಲೆ ಪರಿಶೀಲನೆ   

ರೈತರ, ಜನರ ಹಿತ ಕಾಯುವೆ : ಡಾ.ರಂಗನಾಥ್ 

Team Udayavani, Oct 29, 2023, 3:23 PM IST

9-kunigal

ಕುಣಿಗಲ್: ಮೂಡಲ್ ಕುಣಿಗಲ್ ದೊಡ್ಡಕೆರೆಗೆ ಎರಡನೇ ಭಾರಿ ಹೇಮಾವತಿ ನೀರು ಹರಿದ ಹಿನ್ನಲೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿಯ ನಾಲೆಯನ್ನು ಶಾಸಕ ಡಾ.ಹೆಚ್.ಡಿ.ರಂಗನಾಥ್ ಪರಿಶೀಲನೆ ನಡೆಸಿದರು.

ಕುಣಿಗಲ್ ತಾಲೂಕಿಗೆ ಈ ವರ್ಷದಲ್ಲಿ ಎರಡನೇ ಭಾರಿ ಹೇಮಾವತಿ ನೀರು ಹರಿದ ಕಾರಣ ಶಾಸಕ ಡಾ.ಹೆಚ್.ಡಿ.ರಂಗನಾಥ್ ಇಲ್ಲಿನ ಕುರುಡಿಹಳ್ಳಿ ಹೇಮಾವತಿ ನಾಲೆ ಬಳಿ ಭೇಟಿ ನೀಡಿ ನೀರು ಬರುವಿಕೆಯನ್ನು ಪರಿಶೀಲಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಭಾರಿ ಮುಂಗಾರು ಮತ್ತು ಹಿಂಗಾರು ಮಳೆ ಕೈ ಕೊಟ್ಟ ಪರಿಣಾಮ ತಾಲೂಕು ಬರಕ್ಕೆ ತುತ್ತಾಗಿದೆ. ರೈತರ ಕೃಷಿಗೆ ಹಾಗೂ ಜನ -ಜಾನುವಾರಗಳ ಕುಡಿಯುವ ನೀರಿಗೆ ತೊಂದರೆಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾನು ಮತ್ತು ಸಂಸದ ಡಿ.ಕೆ.ಸುರೇಶ್ ನೀರಾವರಿ ಸಲಹ ಸಮಿತಿ ಸಭೆಯಲ್ಲಿ ಹೇಮಾವತಿ ಕೊನೆ ಭಾಗದಲ್ಲಿ ಕುಣಿಗಲ್ ತಾಲೂಕಿಗೆ ಹೇಮಾವತಿ ನೀರು ಹರಿಸುವಂತೆ ಮನವಿ ಮಾಡಿದೆವು ಎಂದರು.

ಮನವಿಗೆ ಸ್ಪಂದಿಸಿದ ನೀರಾವರಿ ಸಲಹ ಸಮಿತಿ ಅಧ್ಯಕ್ಷ ಹಾಗೂ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎರಡನೇ ಭಾರಿ ತಾಲೂಕಿಗೆ ನೀರು ಹರಿಸಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

10 ದಿನ ನೀರು: ನಾಲೆಯಲ್ಲಿ 350 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಈ ನೀರು 10 ದಿನಗಳ ಕಾಲ ಹರಿಯಲಿದೆ. ಇದರಿಂದ ಕುಣಿಗಲ್ ದೊಡ್ಡಕೆರೆ, ಕೊತ್ತಗೆರೆ ಹಾಗೂ ಗುನ್ನಾಗರೆ ಕೆರೆಗಳಿಗೆ ಸದ್ಯಕ್ಕೆ ನೀರು ತುಂಬಿಸಲಾಗುತ್ತಿದೆ, ಬಳಿಕ ಎಡಿಯೂರು ಸೇರಿದಂತೆ ಎಲ್ಲಾ ಸಣ್ಣ ಪುಟ್ಟ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಹಲವು ತಾಲೂಕುಗಳು ಬರಗಾಲಕ್ಕೆ ತುತ್ತಾಗಿದೆ. ಹರೆ ಮಲೆನಾಡು ಹಾಸನ ಜಿಲ್ಲೆಯಲ್ಲಿ ಮಳೆ ಕೈ ಕೊಟ್ಟ ಕಾರಣ ಗೂರೂರು ಜಲಾಶಯಕ್ಕೆ ಸಾಕಷ್ಟು ನೀರು ಹರಿದಿಲ್ಲ. ಜಲಾಶಯದಲ್ಲಿ ಲಭ್ಯವಿರುವ ನೀರು ಜನ ಜಾನುವಾರಗಳಿಗೆ, ಕುಡಿಯುವ ನೀರಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದಕ್ಕೆ ರೈತರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕರು ಮನವಿ ಮಾಡಿದರು.

ಜನರ ಹಿತ ಕಾಯುವೆ: ತಾಲೂಕಿನ ಇತಿಹಾಸದಲ್ಲೇ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸತತ ಎರಡನೇ ಭಾರಿ ಯಾವೊಬ್ಬರು ಜಯಗಳಿಸಿರುವುದಿಲ್ಲ, ಆದರೆ ಕ್ಷೇತ್ರದ ಮತದಾರರು ನನ್ನ ಮೇಲೆ, ಸಂಸದ ಡಿ.ಕೆ.ಸುರೇಶ್ ಹಾಗೂ ಕಾಂಗ್ರೆಸ್ ಸರ್ಕಾರದ ಮೇಲೆ ವಿಶ್ವಾಸ ಇಟ್ಟು ಎರಡನೇ ಭಾರಿ ನನ್ನಗೆ ಅತ್ಯದಿಕ ಮತ ನೀಡಿ ದಾಖಲೆ ಅಂತರದಲ್ಲಿ ಗೆಲ್ಲಿಸಿದ್ದಾರೆ. ಅವರ ಋಣವನ್ನು ಕ್ಷೇತ್ರದ ಅಭಿವೃದ್ದಿ ಮಾಡುವ ಮೂಲಕ ತೀರಿಸಲು ಪ್ರಯತ್ನಿಸುತ್ತೇನೆ ಎಂದರು.

ಸರ್ಕಾರ ಕುಣಿಗಲ್ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ ಇದ್ದುದರಿಂದ ಬರುವ ವಿಶೇಷ ಅನುದಾನವನ್ನು ತಾಲೂಕಿನ ಅಭಿವೃದ್ದಿಗೆ ಬಳಸುತ್ತೇನೆ. ಜನರು ಯಾವುದೇ ಅತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಅವರೊಂದಿಗೆ ನಾನು ಇದ್ದೇನೆ ಜನರ ಹಿತ ಕಾಯುವುದೇ ನನ್ನ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಈ ವೇಳೆ ತಾ.ಪಂ ಮಾಜಿ ಸದಸ್ಯರಾದ ಜೆಸಿಬಿ ರಾಜಣ್ಣ, ಗಂಗರಂಗಯ್ಯ(ರಾಜಣ್ಣ), ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಡಿ.ಕುಮಾರ್, ಬೇಗೂರು ಮೂರ್ತಿ, ಮುಖಂಡರಾದ ಸುಂದರಕುಪ್ಪೆಪಾಪಣ್ಣ, ನರಸೇಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.