Infosys: ಇನ್ಫೋಸಿಸ್‌ನಿಂದ ವೇತನ ಹೆಚ್ಚಳ


Team Udayavani, Oct 29, 2023, 8:38 PM IST

infosys

ಇನ್ಫೋಸಿಸ್‌ ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಎರಡನೇ ತ್ತೈಮಾಸಿಕ ಪೂರ್ಣಗೊಂಡಿದ್ದು, ಕಂಪನಿಯ ಲಾಭ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ಪ್ರಕಟಿಸಿದೆ. ಸಾಮಾನ್ಯವಾಗಿ ಜೂನ್‌ ಅಥವಾ ಜುಲೈನಲ್ಲಿ ಕಂಪನಿಗಳು ವೇತನ ಹೆಚ್ಚಳದ ಘೋಷಣೆ ಮಾಡುತ್ತವೆ. ಅದು ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗುತ್ತದೆ. ಆದರೆ ಇನ್ಫೋಸಿಸ್‌ ನವೆಂಬರ್‌ನಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಮಾಡಿದೆ. ಇನ್ನೊಂದೆಡೆ, ಟಾಟಾ ಕನ್ಸೆಲ್ಟೆನ್ಸಿ ಸರ್ವೀಸಸ್‌ ಈ ವರ್ಷದ ಮೊದಲ ತ್ತೈಮಾಸಿಕದಲ್ಲೇ ವೇತನ ಹೆಚ್ಚಳದ ಘೋಷಣೆ ಮಾಡಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ ಉದ್ಯೋಗಿಗಳಿಗೆ ಶೇ.12ರಿಂದ 15ರಷ್ಟು ವೇತನ ಹೆಚ್ಚಳ ಮಾಡಿತು. ಡಿ.1ರಂದು ವಿಪ್ರೊ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಮನೆಯಿಂದ ಕೆಲಸ ಅವಕಾಶ ನೀಡಿದರಷ್ಟೇ ಟ್ರ್ಯಾಕ್‌ ಮಾಡಲು ಅನುಮತಿ
ಸರ್ವೆಯೊಂದರ ಪ್ರಕಾರ, ಮನೆಯಿಂದ ಕೆಲಸ ಮಾಡಲು ಅನುಮತಿಸಿದರೆ ಮಾತ್ರ ತಮ್ಮ ಇ-ಮೇಲ್‌, ಚಾಟ್‌ ಮೆಸೇಜ್‌ ಹಾಗೂ ವರ್ಚುಯಲ್‌ ಸಭೆಯ ಮಾಹಿತಿಯನ್ನು ಟ್ರ್ಯಾಕ್‌ ಮಾಡಲು ತಮ್ಮ ಉದ್ಯೋಗದಾತ ಕಂಪನಿಗಳಿಗೆ ಅನುಮತಿಸಲಾಗುವುದು ಎಂದು ಅರೆಕಾಲಿಕವಾಗಿ ಉದ್ಯೋಗ ಮಾಡುತ್ತಿರುವ ಶೇ.62ರಷ್ಟು ಐಟಿ ಉದ್ಯೋಗಿಗಳು ತಿಳಿಸಿದ್ದಾರೆ. ಸಾಫ್ಟವೇರ್‌ ಕಂಪನಿ ಕ್ವಾಲಿóಕ್ಸ್‌ ಇತ್ತೀಚಿಗೆ ಸರ್ವೆಯೊಂದನ್ನು ನಡೆಸಿತು. ಜುಲೈನಲ್ಲಿ 32 ದೇಶಗಳ 32,000 ಉದ್ಯೋಗಿಗಳಿಂದ ಪ್ರತಿಕ್ರಿಯೆಗಳನ್ನು ಕಲೆಹಾಕಿತು. ಕಚೇರಿಗೆ ಹೋಗುವ ಪೂರ್ಣಾವಧಿ ಉದ್ಯೋಗಿಗಳು ಮತ್ತು ಮನೆಯಲ್ಲಿ ಕೆಲಸ ಮಾಡುವ ಅರೆಕಾಲಿಕ ಉದ್ಯೋಗಿಗಳಿಂದ ಪ್ರತಿಕ್ರಿಯೆ ಪಡೆಯಲಾಗಿದೆ. ಸರ್ವೆ ಪ್ರಕಾರ, ಕಚೇರಿಗೆ ಹೋಗುವ ಶೇ.49ರಷ್ಟು ಉದ್ಯೋಗಿಗಳು ಮಾತ್ರ ಕಂಪನಿಗಳಿಂದ ಡಿಜಿಟಲ್‌ ಕಣ್ಗಾವಲಿಗೆ ಸಮ್ಮತಿ ಸೂಚಿಸಿದ್ದಾರೆ. ಅದೇ ರೀತಿ ಮನೆಯಿಂದಲೇ ಪೂರ್ಣವಧಿ ಕೆಲಸ ಮಾಡುವ ಶೇ.57ರಷ್ಟು ಉದ್ಯೋಗಿಗಳು ಕಣ್ಗಾವಲಿಗೆ ಅನುಮತಿ ಸೂಚಿಸಿದ್ದಾರೆ.

ಉದ್ಯೋಗಿಗಳಿಗೆ ಷೇರು ಹಂಚಿದ ಒರಾಕಲ್‌
ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟ್ವೇರ್‌ ಲಿಮಿಟೆಡ್‌ ತನ್ನ ಉದ್ಯೋಗಿಗಳಿಗೆ ತನ್ನ 10,736 ಈಕ್ವಿಟಿ ಷೇರುಗಳನ್ನು ಹಂಚಿದೆ. ಪ್ರತಿ ಈಕ್ವಿಟಿ ಷೇರಿನ ಮುಖ ಬೆಲೆ 5 ರೂ. ಇದೆ. 2014ರ ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟವೇರ್‌ ಸ್ಟಾಕ್‌ ಯೋಜನೆಯ ಪ್ರಕಾರ, ಅರ್ಹ ಉದ್ಯೋಗಿಗಳಿಗೆ ಷೇರುಗಳನ್ನು ಹಂಚಿರುವುದಾಗಿ ಕಂಪನಿ ಗುರುವಾರ ಘೋಷಿಸಿದೆ. ಈ ಹಂಚಿಕೆಯ ಮೂಲಕ ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟವೇರ್‌ ಲಿಮಿಟೆಡ್‌ನ‌ ಪಾವತಿಸಿದ ಬಂಡವಾಳವು 43,30,67,855 ರೂ.ಗಳಿಗೆ ಏರಿಕೆಯಾಗಿದೆ. ಆದರೆ, ಕಂಪನಿಯ ನಿರ್ದೇಶಕರಿಗೆ ಯಾವುದೇ ಷೇರುಗಳನ್ನು ಹಂಚಿಕೆ ಮಾಡಿಲ್ಲ.

ವೇತನ ಹೆಚ್ಚಳದಲ್ಲಿ ಕಡಿತ
ಐಟಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆ ತಗ್ಗಿರುವ ಹಿನ್ನೆಲೆಯಲ್ಲಿ ಈ ವರ್ಷದಲ್ಲಿ ಟೆಕಿಗಳ ವೇತನ ಹೆಚ್ಚಳದ ಮೇಲೂ ಪರಿಣಾಮ ಬೀರಲಿದೆ. ಕಳೆದ ಹಣಕಾಸು ವರ್ಷದಲ್ಲಿ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳ ವೇತನವನ್ನು ಶೇ.12ರಿಂದ ಶೇ.18ರವರೆಗೆ ಏರಿಕೆ ಮಾಡಿದ್ದವು. ಆದರೆ ಈ ಹಣಕಾಸು ವರ್ಷದಲ್ಲಿ ಕೇವಲ ಶೇ.6ರಿಂದ ಶೇ.10ರವರೆಗೆ ಮಾತ್ರ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಇತ್ತೀಚಿಗೆ ಟಿಸಿಎಸ್‌ ವೇತನ ಹೆಚ್ಚಳದ ಘೋಷಣೆ ಮಾಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸಿದ ಉದ್ಯೋಗಿಗಳಿಗೆ ಶೇ.6ರಿಂದ ಶೇ.9ರವರೆಗೆ ಮಾತ್ರ ವೇತನ ಹೆಚ್ಚಳ ಮಾಡಿತ್ತು. ಹಲವು ಐಟಿ ಕಂಪನಿಗಳು ಕೂಡ ಇದೇ ಹಾದಿ ಹಿಡಿಯಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.