Cauvery ಸಮಸ್ಯೆ ವಿಷಯದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ನೀತಿ: ಎಚ್.ಕೆ.ಪಾಟೀಲ
Team Udayavani, Oct 31, 2023, 2:47 PM IST
ವಿಜಯಪುರ: ಕಾವೇರಿ ವಿಷಯದಲ್ಲಿ ಕೇಂದ್ರ ಸರ್ಕಾರ ಅತ್ಯಂತ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭೀಕರ ಬರ ಆವರಿಸಿರುವ ವಿಷಯ ತಿಳಿದಿದ್ದರೂ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೇಂದ್ರಕ್ಕೆ ಕಾಳಜಿ ಇಲ್ಲವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲ ವಿವಾದ ಬಗೆಹರಿಸುವ ವಿಷಯದಲ್ಲಿ ಕೇಂದ್ರಕ್ಕೆ ಕಳಕಳಿ, ಕಾಳಜಿ, ಆತುರ ಇಲ್ಲವಾಗಿದೆ. ಕರ್ನಾಟಕದಲ್ಲಿ ಮಳೆ ಇಲ್ಲದೇ ಭೀಕರ ಬರ ಆವರಿಸಿದ್ದು, ಕೇಂದ್ರದ ನಿಯಮದಂತೆಯೇ ರಾಜ್ಯದಲ್ಲಿ 215 ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತ ಎಂದು ಘೋಷಿಸಿಲಾಗಿದೆ. ಕಾವೇರಿ ನದಿಯ ಹರಿವು ಇಲ್ಲವಾಗಿ, ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದೆ. ಭವಿಷ್ಯದ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ ಎದುರಾಗಲಿದೆ. ಕರ್ನಾಟಕದ ಪರಿಸ್ಥಿತಿ ನೀರಿನ ವಿಷಯದಲ್ಲಿ ಗಂಭೀರವಾಗಿದ್ದರೂ ನಿತ್ಯವೂ 2600 ಕ್ಯೂಸೆಕ್ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸಿ. ನಿರ್ದೇಶನ ನೀಡುತ್ತಿದೆ. ಇಷ್ಟಾದರೂ ಕೇಂದ್ರ ಗಮನ ಹರಿಸುತ್ತಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ ಹರಿಹಾಯ್ದರು.
ಕೂಡಲೇ ಪ್ರಧಾನಿ ಮೋದಿ ಕಾವೇರಿ ನೀರಿನ ವಿಷಯದಲ್ಲಿ ತುರ್ತಾಗಿ ಗಮನಹರಿಸಬೇಕು. ಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಎದುರಾಗುವ ನೀರಿನ ಗಂಭೀರ ಸಮಸ್ಯೆ ಬಗೆಹರಿಸಲು ತುರ್ತಾಗಿ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ದೇಶದ ಎಲ್ಲ ರಾಜ್ಯ ಸರ್ಕಾರ ಹಾಗೂ ಜನರು ಜನರು ಕೇಂದ್ರದ ಬಗ್ಗೆ ಭರವಸೆ ಕಳೆದುಕೊಳ್ಳದಂತೆ ಕೇಂದ್ತ ಸರ್ಕಾರ ಜವಾಬ್ದಾರಿ ನಿಭಾಯಿಸಬೇಕು. ಇಲ್ಲವಾದರೆ ಬಹಳ ಸಮಸ್ಯೆ ಎದುರಿಸುವ ಗಂಭೀರತೆ ಎದುರಾಗಲಿದೆ ಎಂದು ಎಚ್ಚರಿಸಿದರು
ತಮಿಳುನಾಡಿಗೆ 2600 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸೊ. ನೀಡಿರುವ ಆದೇಶ ಮರು ಪರಿಶೀಲನೆ ಮಾಡಬೇಕೆಂದು ಮನವಿ ಮಾಡಿದರು.
ಈ ವಿಷಯವಾಗಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುಯ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರಯತ್ನಿಸಿದರೂ ಪ್ರಧಾನಿ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳ ಆರೋಪ ಅರ್ಥಹೀನ. ಪ್ರಧಾನಿ ಅವರನ್ನು ಭೇಟಿಯಾಗಲು ಅವಕಾಶ ನೀಡಿದರೂ ನಮ್ಮ ಮುಖ್ಯಮಂತ್ರಿ, ಸಚಿವರು ಹೋಗದಿದ್ದರೆ ವಿಫಲ ಎನ್ನಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೇ ತಮ್ಮ ಭೇಟಿಗೆ ಅವಕಾಶ ನೀಡುತ್ತಿಲ್ಲ. ಇಂಥ ಸ್ಥಿತಿಯಲ್ಲಿ ಕರ್ನಾಟಕ ರಾಜ್ಯದ ಬಿಜೆಪಿ 25 ಸಂಸದರು ಏನು ಮಾಡುತ್ತಿದ್ದಾರೆ. ರಾಜ್ಯದ ಸಂಸದರೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಾಸ್ತವಿಕ ಸಮಸ್ಯೆ ಮನವರಿಕೆ ಮಾಡಿಕೊಡಲು ಮುಂದಾಗಬೇಕಿತ್ತು. ರಾಜ್ಯದಲ್ಲಿ ಭೀಕರ ಬರ ಎಂದು ಘೋಷಿಸಿದ ಬಳಿಕವೂ 2600 ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಿದ್ದು ಸರಿಯಲ್ಲ ಎಂದು ಕೇಂದ್ರಕ್ಕೆ ತಿಳಿಸಿ ಹೇಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು.
ಮಹಾದಾಯಿ ಯೋಜನೆ ಕಾಮಗಾರಿಗೆ ಕೇಂದ್ರಕ್ಕೆ ಸರಿಯಾದ ದಾಖಲೆಗಳನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪವೂ ಅರ್ಥಹೀನ. ನಾವು ಇಂಥ ದಾಖಲೆ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರವೇನು ಕೇಳಿದೆಯೆ? ಮಹದಾಯಿ ಯೋಜನೆ ಘೋಷಣೆ ಮಾಡುವುದಕ್ಕೆ ಇವರಿಗೆ ಏನು ತೊಂದರೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
MUST WATCH
ಹೊಸ ಸೇರ್ಪಡೆ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ