ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ; 20 ಜನರ ಬಂಧನ
Team Udayavani, Nov 1, 2023, 11:39 PM IST
ಕಲಬುರಗಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಆಚರಣೆ ಸಂಭ್ರದಲ್ಲಿರುವಾಗಲೇ ಮಹಾ ನಗರದಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗೆದ್ದಿದೆ. ಬುಧವಾರ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯ ಧ್ವಜ ಹಾರಿಸಲು ಯತ್ನಿಸಿದರು. ಅವರನ್ನು ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಬಂಧಿಸಿದರು.
ಕಳೆದ ಐದು ವರ್ಷಗಳಿಂದ ಶಾಂತವಾಗಿದ್ದ ಹೋರಾಟಗಾರರು ನಗರದ ಕೋರ್ಟ್ ಸರ್ಕಲ್ ಬಳಿ ಜಮೆಯಾಗಿ ಪ್ರತ್ಯೇಕ ರಾಜ್ಯದ ಬಾವುಟದೊಂದಿಗೆ ಮೆರವಣಿಗೆ ಹೊರಟಿದ್ದರು. ಯುನೈಟೆಡ್ ಆಸ್ಪತ್ರೆ ಬಳಿ ಅವರನ್ನು ತಡೆದ ಪೊಲೀಸರು ಅಧ್ಯಕ್ಷ ಎಂ.ಎಸ್. ಪಾಟೀಲ್, ಮುಖಂಡ ರಾದ ಉದಯ ಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ, ಲಕ್ಷ್ಮೀಕಾಂತ ಮುಂತಾದವರನ್ನು ಬಂಧಿಸಿ ಕರೆದೊಯ್ದರು.
ಬೆಳಗಾವಿ ಪ್ರವೇಶಕ್ಕೆ ಶಿವಸೇನೆ ಯತ್ನ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿಯಾಗಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಯ ಗಡಿ ಪ್ರವೇಶಿಸಲು ಆಗಮಿಸಿದ್ದ ಶಿವಸೇನೆಯ ಕಾರ್ಯಕರ್ತರನ್ನು ನಿಪ್ಪಾಣಿ ಕೊಗನ್ನೊಳ್ಳಿ ಚೆಕ್ಪೋಸ್ಟ್ ಬಳಿ ಪೊಲೀಸರು ತಡೆದು ವಾಪಸ್ ಕಳಿಸಿದ್ದಾರೆ. ಬೆಳಗಾವಿಗೆ ಆಗಮಿಸಲು ಯತ್ನಿಸಿದ ಎಂಇಎಸ್ ಕಾರ್ಯಕರ್ತರಿಗೆ ಪೊಲೀಸರು ಪ್ರವೇಶ ನಿಷೇಧಿಸಿದ್ದರಿಂದ ಅವರು ಗಡಿಯಲ್ಲಿ ಹೈಡ್ರಾಮಾ ಮಾಡಿದರು. ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರು ಮಹಾರಾಷ್ಟ್ರದ ಕೆಲವರಿಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು. ಆದರೆ ಬುಧವಾರ ಬೆಳಗ್ಗೆ ಮಹಾರಾಷ್ಟ್ರದ ಗಡಿಯಿಂದ ರಾಜ್ಯದ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಕ್ಕೆ ಮುಂದಾಗಿದ್ದ ಕೊಲ್ಲಾಪುರ ಜಿಲ್ಲಾ ಉದ್ದವ್ ಠಾಕ್ರೆ ಬಣದ ಶಿವಸೇನಾ ಅಧ್ಯಕ್ಷ ವಿಜಯ್ ದೇವಣೆ ಸಹಿತ 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ಮಹಾರಾಷ್ಟ್ರಕ್ಕೆ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ
Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ
Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು