Zika Virus: ರಾಜ್ಯದಲ್ಲಿ ಜಿಕಾ ವೈರಸ್ ಪತ್ತೆ… ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿಶೇಷ ನಿಗಾ
Team Udayavani, Nov 3, 2023, 9:31 AM IST
ಮಂಗಳೂರು/ಉಡುಪಿ: ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಜಿಕಾ ವೈರಸ್ ರೋಗದ ಲಕ್ಷಣವಿರುವ ಪ್ರಕರಣ ಕಂಡುಬಂದರೆ ಕೂಡಲೇ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಲು ಎಲ್ಲ ಪ್ರಾಥಮಿಕ, ಸಮುದಾಯ, ತಾಲೂಕು ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಜಿಕಾ ಲಕ್ಷಣ ಡೆಂಗ್ಯೂ ಲಕ್ಷಣವೇ ಇರುವ ಕಾರಣ ಲಾರ್ವಾ ನಾಶಕ್ಕೆ ಆರೋಗ್ಯ ಇಲಾಖೆ ಈಗಾಗಲೇ ನಿರ್ಧರಿಸಿದೆ. ಮಂಗಳೂರು ಪಾಲಿಕೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದ್ದು, ಸದ್ಯ 393 ಪ್ರಕರಣಗಳಿವೆ. ಡೆಂಗ್ಯೂ ಸೊಳ್ಳೆ ನಿಯಂತ್ರಣಕ್ಕೆ ಸದ್ಯ ಫಾಗಿಂಗ್, ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಇದನ್ನು ಮತ್ತಷ್ಟು ಪರಿಣಾಮ ಕಾರಿಯಾಗಿಸಲು ನಿರ್ಧರಿಸಲಾಗಿದೆ. ಜಿಕಾ ಮಾರಣಾಂತಿಕ ಕಾಯಿಲೆಯ ಲ್ಲದಿದ್ದರೂ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು. ಗರ್ಭಿಣಿಯರು ಹೆಚ್ಚಿನ ನಿಗಾ ವಹಿಸಬೇಕು.
ದ.ಕ. ಮತ್ತು ಉಡುಪಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾ ಧಿಕಾರಿಗಳಾದ ಡಾ| ನವೀನ್ ಚಂದ್ರ ಕುಲಾಲ್ ಮತ್ತು ಡಾ| ಪ್ರಶಾಂತ ಭಟ್ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಜಿಕಾ ವೈರಸ್ ನಿಟ್ಟಿನಲ್ಲಿ ಜಿಲ್ಲೆಯಲ್ಲೂ ನಿಗಾ ಇರಿಸಲಾಗಿದೆ. ಈ ರೋಗಕ್ಕೆ ತುತ್ತಾದವರಲ್ಲಿ ಕೆಂಗಣ್ಣು, ತಲೆನೋವು, ಜ್ವರ, ತುರಿಕೆ, ಕೀಲು ನೋವು ಇರುತ್ತದೆ. 2ರಿಂದ 7 ದಿನಗಳೊಳಗೆ ರೋಗ ತೀವ್ರತೆ ಪಡೆದುಕೊಳ್ಳುತ್ತದೆ. ಜಿಲ್ಲೆಯಲ್ಲಿ ಸದ್ಯ ಅಂತಹ ಯಾವುದೇ ಪ್ರಕರಣಗಳಿಲ್ಲ.ಆದರೂ ಪ್ರತಿಯೊಬ್ಬರೂ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರದಿಂದ ಇರಬೇಕು. ರೋಗ ಲಕ್ಷಣ ಕಂಡುಬಂದರೆ ವೈದ್ಯರನ್ನು ಭೇಟಿಯಾಗಿ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Hunsur: ಕ್ಷುಲ್ಲಕ ಕಾರಣಕ್ಕೆ ಕಾರ್ಸ್ಟ್ಯಾಂಡ್ ಅಧ್ಯಕ್ಷ-ಉಪಾಧ್ಯಕ್ಷರ ನಡುವೆ ಬಡಿದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್