Kerala ಆನೆ ದಂತ ಮಾರಾಟಕ್ಕೆ ಯತ್ನ : ಕೊಡಗಿನ ಇಬ್ಬರು ಸೇರಿ 6 ಮಂದಿಯ ಸೆರೆ
Team Udayavani, Nov 4, 2023, 9:54 PM IST
ಮಡಿಕೇರಿ: ಕೇರಳದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಆರೋಪದಡಿ ಕೊಡಗು ಜಿಲ್ಲೆಯ ಇಬ್ಬರು ಸೇರಿದಂತೆ ಒಟ್ಟು 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5.5 ಕೆ.ಜಿ ತೂಕದ ಅಂದಾಜು 1.5 ಕೋಟಿ ರೂ. ಬೆಲೆ ಬಾಳುವ 1 ಆನೆ ದಂತವನ್ನು ವಶಕ್ಕೆ ಪಡೆಯಲಾಗಿದೆ.
ಕೇರಳದ ಮಾನಂದವಾಡಿಯ ಲಾಡ್ಜ್ ಒಂದರಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಅರಣ್ಯ ಇಲಾಖೆಯ ಗುಪ್ತಚರ ಇಲಾಖೆ ಮತ್ತು ಪೊಲೀಸ್ ಫ್ಲೈಯಿಂಗ್ ಸ್ಕ್ವಾಡ್ ಜಂಟಿ ಕಾರ್ಯಾಚರಣೆ ನಡೆಸಿ ಗೋಣಿಕೊಪ್ಪಲು ನಿವಾಸಿ ರಾಜು (52), ಪೊನ್ನಂಪೇಟೆಯ ಪಿಲಿಪ್ ಮ್ಯಾಥ್ಯೂ (68) ಕರ್ನಾಟಕದ ಶೆಟ್ಟಿಗಿರಿಯ ಗೆಪ್ (60), ವಯನಾಡಿನ ವಕೇರಿಯ ಸುಧೀಶ್ (36), ಜಸ್ಟಿನ್ ಜೋಸೆಫ್ (24) ಹಾಗೂ ಯೆಲ್ಡೋ (30)ನನ್ನು ಬಂಧಿಸಲಾಗಿದೆ.
ಕರ್ನಾಟಕದಿಂದ ದಂತ ತೆಗೆದುಕೊಂಡು ಹೋಗಿ ಕೇರಳದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಕೇರಳ ಪೊಲೀಸರು, ಸರ್ಚ್ ವಾರೆಂಟ್ ಪಡೆದುಕೊಂಡು ಗೋಣಿಕೊಪ್ಪಲು ಪಟ್ಟಣದಲ್ಲಿಯೂ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ
Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು
New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ
Sagara; ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ