Delhi: ಮಾಲಿನ್ಯ ವಿಷ 30 ಸಿಗರೇಟ್‌ಗೆ ಸಮ!-ಆರೋಗ್ಯ ತುರ್ತು ಪರಿಸ್ಥಿತಿಯ ಹೊಸ್ತಿಲಲ್ಲಿ ದೆಹಲಿ

- ಗರ್ಭದಲ್ಲಿರುವ ಶಿಶುಗಳನ್ನೂ ಕಾಡುತ್ತಿದೆ ವಾಯುಮಾಲಿನ್ಯ

Team Udayavani, Nov 4, 2023, 9:49 PM IST

delhi pollution

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು “ವಿಷಗಾಳಿಯ ಪರದೆ”ಯೊಳಗೆ ಸಿಲುಕಿ ನಲುಗಲಾರಂಭಿಸಿವೆ. ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪಿದ್ದು, “ಆರೋಗ್ಯ ತುರ್ತು ಪರಿಸ್ಥಿತಿ” ಘೋಷಿಸಬೇಕಾದ ಅನಿವಾರ್ಯತೆ ಉಂಟಾಗುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ರಾಜಧಾನಿ ಪ್ರದೇಶದ ವಾಯುಮಾಲಿನ್ಯ ಸೂಚ್ಯಂಕ (ಎಕ್ಯೂಐ) 413 ಆಗಿದೆ. ವಿಷಯುಕ್ತ ಪಾರ್ಟಿಕ್ಯುಲೇಟ್‌ ಮ್ಯಾಟರ್‌ (ಪಿಎಂ 2.5) ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಿತಿಗಿಂತ 80 ಪಟ್ಟು ಹೆಚ್ಚಾಗಿದೆ. ಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಶುಕ್ರವಾರ ಮತ್ತು ಶನಿವಾರ ಇಲ್ಲಿನ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿತ್ತು. ಪರಿಸ್ಥಿತಿಯ ಭೀಕರತೆಯನ್ನು ವಿವರಿಸಿರುವ ಮೇದಾಂತ ಆಸ್ಪತ್ರೆಯ ಹಿರಿಯ ಶ್ವಾಸಕೋಶ ತಜ್ಞ ಡಾ.ಅರವಿಂದ ಕುಮಾರ್‌, “ದಿನಕ್ಕೆ 25-30 ಸಿಗರೇಟು ಸೇದುವುದು ನಮ್ಮ ದೇಹದ ಮೇಲೆ ಎಂಥ ದುಷ್ಪರಿಣಾಮ ಬೀರುತ್ತದೋ, ಅಷ್ಟೇ ದುಷ್ಪರಿಣಾಮವನ್ನು ದೆಹಲಿಯ ಜನರ ಮೇಲೆ ವಾಯುಮಾಲಿನ್ಯವು ಬೀರುತ್ತಿದೆ’ ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಇನ್ನೂ ಜನ್ಮ ತಾಳದಿರುವ ಮಗುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೆ ಎಲ್ಲಾ ವಯೋಮಾನದವರ ಆರೋಗ್ಯದ ಮೇಲೆ ಮಾಲಿನ್ಯವು ಪ್ರತಿಕೂಲ ಪರಿಣಾಮ ಬೀರುತ್ತಿದೆ. ತಾಯಿಯು ಮಾಲಿನ್ಯಯುಕ್ತ ಗಾಳಿಯನ್ನು ಉಸಿರಾಡುವುದರಿಂದ ಗರ್ಭದಲ್ಲಿರುವ ಶಿಶುವಿಗೂ ತೊಂದರೆ ಆಗುತ್ತಿದೆ ಎಂಬ ಆಘಾತಕಾರಿ ವಿಚಾರವನ್ನೂ ಅವರು ಬಹಿರಂಗಪಡಿಸಿದ್ದಾರೆ. ಮಾಲಿನ್ಯಯುಕ್ತ ಅಂಶಗಳು ತಾಯಿಯ ಶ್ವಾಸಕೋಶ, ರಕ್ತಕ್ಕೆ ಸೇರುತ್ತದೆ. ಹೊಕ್ಕುಳಬಳ್ಳಿಯ ಮೂಲಕ ಶಿಶುವಿನ ದೇಹವನ್ನು ಅವು ಸೇರಿಕೊಳ್ಳುತ್ತವೆ. ಗರ್ಭದಲ್ಲಿರುವ ಶಿಶುವು 30 ಸಿಗರೇಟಿಗೆ ಸಮನಾದ ಮಾಲಿನ್ಯಕಾರಿ ಅಂಶಗಳನ್ನು ಸೇವಿಸಿದರೆ ಮುಂದೇನಾಗಬಹುದು ಯೋಚಿಸಿ ಎಂದಿದ್ದಾರೆ ಡಾ.ಅರವಿಂದ ಕುಮಾರ್‌.

3ರಲ್ಲಿ ಒಬ್ಬರಿಗೆ:
ದೆಹಲಿಯ ಮೂರರಲ್ಲಿ ಒಂದು ಮಗು ವಾಯುಮಾಲಿನ್ಯದಿಂದ ಅಸ್ತಮಾ ಸಮಸ್ಯೆ ಎದುರಿಸುತ್ತಿದೆ. 1,100 ಮಕ್ಕಳ ಅಧ್ಯಯನದಿಂದ ಇದು ದೃಢಪಟ್ಟಿದೆ. ಮಾಲಿನ್ಯದಿಂದಾಗಿ ತಲೆಯಿಂದ ಕಾಲ ತುದಿಯವರೆಗೆ ಬಾಧೆಗೆ ಒಳಗಾಗದ ಅಂಗಗಳೇ ಇಲ್ಲ. ಕೆಲವರಿಗೆ ಬೊಜ್ಜು ಹೆಚ್ಚಾಗಿದೆ, ಮತ್ತೆ ಕೆಲವರಿಗೆ ಶ್ವಾಸಕೋಶ ಸಮಸ್ಯೆ ತಲೆದೋರಿದೆ ಎಂದೂ ಅರವಿಂದ್‌ ಹೇಳಿದ್ದಾರೆ.

ಹಕ್ಕಿಗಳಿಗೂ ತೊಂದರೆ:
ವಾಯುಮಾಲಿನ್ಯದ ದುಷ್ಪರಿಣಾಮ ಮಾನವರಿಗೆ ಮಾತ್ರವಲ್ಲದೆ ಪಕ್ಷಿಗಳಿಗೂ ತಟ್ಟಿದ್ದು, “ಪ್ರತಿ ದಿನ ಕನಿಷ್ಠ 50 ವಿವಿಧ ತಳಿಯ ಹಕ್ಕಿಗಳು ಅನಾರೋಗ್ಯ ಪೀಡಿತವಾಗುತ್ತಿವೆ. ಈ ಪೈಕಿ ಹೆಚ್ಚಿನವುಗಳು ಪಾರಿವಾಳಗಳು’ ಎಂದು ವೈದ್ಯರು ತಿಳಿಸಿದ್ದಾರೆ.

ಆತಂಕದ ಛಾಯೆ
– ದೆಹಲಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಿತಿಗಿಂತ 80 ಪಟ್ಟು ಹೆಚ್ಚಾದ ವಿಷಯುಕ್ತ ಪಾರ್ಟಿಕ್ಯುಲೇಟ್‌ ಮ್ಯಾಟರ್‌ (ಪಿಎಂ 2.5) ಪ್ರಮಾಣ.
– ಮುಂದಿನ 4-5 ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದ ಪರಿಸರ ತಜ್ಞರು
– ದೆಹಲಿ, ಹರ್ಯಾಣ, ಪಂಜಾಬ್‌, ಉ.ಪ್ರದೇಶ ಸರ್ಕಾರದೊಂದಿಗೆ ತುರ್ತು ಸಭೆ ನಡೆಸುವಂತೆ ಪ್ರಧಾನಿ ಮೋದಿಗೆ ಛೇಂಬರ್‌ ಆಫ್ ಟ್ರೇಡ್‌ ಆ್ಯಂಡ್‌ ಇಂಡಸ್ಟ್ರಿ(ಸಿಟಿಐ) ಮನವಿ.
– ವಾಯುಮಾಲಿನ್ಯದಿಂದ ಮುಕ್ತರಾಗಲು ಹಿಮಾಚಲದತ್ತ ಪ್ರವಾಸ ಹೊರಟ ರಾಜಧಾನಿ ನಿವಾಸಿಗಳು
– ದೆಹಲಿ ಮಾತ್ರವಲ್ಲದೇ ಉತ್ತರಪ್ರದೇಶದಲ್ಲೂ ಗಂಭೀರ ಸ್ಥಿತಿ ತಲುಪಿದ ವಾಯುಮಾಲಿನ್ಯ ಮಟ್ಟ

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.