Ayodhya: ಅಯೋಧ್ಯೆಯಲ್ಲಿ ಅಕ್ಷತೆ ಪೂಜೆ- ರಾಮಮಂದಿರದ ಪೂಜಾ ವಿಧಿವಿಧಾನಗಳು ಆರಂಭ
Team Udayavani, Nov 6, 2023, 12:01 AM IST
ಅಯೋಧ್ಯೆ: ಜನವರಿಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಯೋಧ್ಯೆಯ ರಾಮ ಮಂದಿರದ ಪೂಜಾ ವಿಧಿವಿಧಾನಗಳು ಆರಂಭವಾಗಿವೆ. ರವಿವಾರ ಅಕ್ಷತೆ ಪೂಜೆಯೊಂದಿಗೆ ಧಾರ್ಮಿಕ ಆಚರಣೆಗಳಿಗೆ ಚಾಲನೆ ನೀಡಲಾಯಿತು.
ಮಂದಿರದ “ರಾಮ ದರ್ಬಾರ್’ನಲ್ಲಿ ಅಕ್ಷತೆ ಪೂಜೆಯನ್ನು ಕೈಗೊಳ್ಳಲಾಗಿದ್ದು, ಇದರ ಅಂಗವಾಗಿ ಒಂದು ನೂರು ಕ್ವಿಂಟಾಲ್ ಅಕ್ಕಿಗೆ ಅರಿಶಿನ ಮತ್ತು ದೇಸೀ ತುಪ್ಪವನ್ನು ಮಿಶ್ರಗೊಳಿಸಿ ತಯಾರಿಸಿದ ಅಕ್ಷತೆಯನ್ನು ಪೂಜಿಸಲಾಯಿತು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಪೂಜಿಸಿರುವ ಈ ಅಕ್ಷತೆಯನ್ನು ವಿಹಿಂಪದ 200 ಪ್ರತಿನಿಧಿಗಳಿಗೆ ಹಂಚಲಾಗುತ್ತದೆ. ಇವರು ಮುಂದಿನ ಜ. 22ರ ಒಳಗಾಗಿ ಈ ಅಕ್ಷತೆಯನ್ನು ದೇಶಾದ್ಯಂತ ಭಕ್ತರಿಗೆ ಹಂಚಲಿದ್ದಾರೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ. ಇದರ ಜತೆಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಎರಡು ಕೋಟಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಕಳುಹಿಸಲಾಗುತ್ತದೆ ಎಂದು ಟ್ರಸ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ