Library ವ್ಯವಸ್ಥೆ ಆಧುನೀಕರಣಗೊಳ್ಳಲಿ


Team Udayavani, Nov 6, 2023, 5:44 AM IST

1-saddsa

ಕನ್ನಡದ ಎಲ್ಲ ಪ್ರಕಾಶಕರು ಗ್ರಂಥಾಲಯಕೊಳ್ಳುವ ಸಗಟು ಖರೀದಿ ಯನ್ನು ನಂಬಿಕೊಂಡು ಪುಸ್ತಕ ಪ್ರಕಟನೆ ಮಾಡುತ್ತಾರೆ. ಓದು ಗರನ್ನೇ ನಂಬಿಕೊಂಡು ಪ್ರಕಟಿಸುವ ಪುಸ್ತಕಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದಿಲ್ಲ. ಆದರೆ ಸರಕಾರ ಗಳು ಈ ಖರೀದಿ ಪ್ರಕ್ರಿಯೆಯನ್ನು ನಾಲ್ಕು ವರ್ಷಗ ಳಿಂದ ನಿಲ್ಲಿಸಿಬಿಟ್ಟಿವೆ. ಅದಕ್ಕೆ ಬೇಕಾದ ಹಣವನ್ನು ಸೆಸ್‌ ಮೂಲಕ ಪ್ರಜೆಗಳಿಂದ ಸ್ವೀಕರಿಸುವ ಕ್ರಮ ಜಾರಿಯಲ್ಲಿದ್ದರೂ, ಪುಸ್ತಕಗಳಿಗೆ ಅದನ್ನು ವಿನಿಯೋಗಿಸುವುದಕ್ಕೆ ಯಾವ ಸರಕಾರಕ್ಕೂ ಆಸಕ್ತಿಯಿಲ್ಲದಂತಹ ಅನಕ್ಷರಸ್ಥ ಪರಿಸ್ಥಿತಿ ಕರ್ನಾಟಕದಲ್ಲಿದೆ. ಇದು ಪ್ರಕಾಶಕರನ್ನು ಸಾಕಷ್ಟು ತೊಂದರೆಗೆ ತಳ್ಳಿದೆ. ಅವರು ಹೊಸ ಪ್ರಕಟನೆಗಳಿಗೆ ಹಿಂಜರಿಯುತ್ತಿದ್ದಾರೆ. ಇದರೊಡನೆ ಗ್ರಂಥಾಲಯವನ್ನು ನಂಬಿಕೊಂಡು ಓದುವ ಬಹುದೊಡ್ಡ ಓದುಗ ವರ್ಗ ಕನ್ನಡದಲ್ಲಿದೆ. ಅವರಿಗೂ ಕಾಲಕ್ಕೆ ತಕ್ಕಂತೆ ಪುಸ್ತಕಗಳು ಸಿಗುತ್ತಿಲ್ಲ. ಇಡೀ ಗ್ರಂಥಾಲಯ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಆಧುನಿಕಗೊಳಿಸುವ, ಸದ್ಯಕ್ಕೆ ತೆರೆದುಕೊಳ್ಳುವ ಕ್ರಿಯೆ ನಡೆಯಬೇಕಿದೆ. ಸರಕಾರಗಳು ಮತ್ತು ಗ್ರಂಥಾಲಯ ಇಲಾಖೆ ಸಗಟು ಖರೀದಿಯನ್ನು ವಿಳಂಬ ಮಾಡುತ್ತಲೇ ಹೋದರೆ, ಕನ್ನಡ ಪ್ರಕಟನೆಗಳು ಬಹುತೇಕ ನಿಲ್ಲುತ್ತವೆ.

ಕನ್ನಡ ಸಾಹಿತ್ಯವು ಗಡಿಯನ್ನು ದಾಟಿ ಹೊರ ಜಗತ್ತಿಗೆ ತೆರೆದುಕೊಳ್ಳುವ ಆವಶ್ಯಕತೆ ಇದೆ. ಈ ಪ್ರಕ್ರಿಯೆ ಸಾಹಿತ್ಯದ ಕೊಡುಕೊಳ್ಳುವಿಕೆಯ ಮೂಲಕ, ಸಾಹಿತಿಗಳ ಒಡನಾಟದ ಮೂಲಕ ಸಾಧ್ಯವಾಗಬೇಕಿದೆ. ಕರ್ನಾಟಕವು ಇಡೀ ದೇಶಕ್ಕೇ ಮಾದರಿಯಾಗುವಂತೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಮತ್ತು ಸಮ್ಮೇಳನಗಳನ್ನು ಭಾಷಾ ತೀತವಾಗಿ ನಡೆಸುವ ಜರೂರತ್ತಿದೆ. ಇದು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿರದೆ, ಹೊರ ರಾಜ್ಯಗಳ ಲೇಖಕರನ್ನು ಗುರುತಿಸುವ, ಅವರನ್ನು ಪ್ರೋತ್ಸಾಹಿಸುವ ಕೆಲಸ ಆದರ್ಶ ರೀತಿಯಲ್ಲಿ ನಡೆಯಬೇಕು. ಆಗ ಇಡೀ ದೇಶ ಕರ್ನಾಟಕದ ಕಡೆಗೆ ಆಸಕ್ತಿಯಿಂದ ನೋಡುವ ಸನ್ನಿವೇಶ ಸೃಷ್ಟಿ ಯಾಗುತ್ತದೆ. ಉದಾಹರಣೆ ಪ್ರತೀ ವರ್ಷ ದೇಶದಲ್ಲಿ ರಚಿತವಾದ ಅತ್ಯುತ್ತಮ ಕಾದಂಬರಿಗೆ ಬಹುದೊಡ್ಡ ಮೊತ್ತದ ಬಹುಮಾನವನ್ನು ಕರ್ನಾಟಕ ಸರಕಾರ ಸ್ಥಾಪಿಸುತ್ತದೆ ಎಂದುಕೊಳ್ಳೋಣ. ಆದರೆ ಕಡ್ಡಾಯವಾಗಿ ಈ ಕಾದಂಬರಿ ಕನ್ನಡಕ್ಕೆ ಅನುವಾದಗೊಂಡು ಆ ವರ್ಷ ಪ್ರಕಟವಾಗಿರಬೇಕು ಎಂಬ ನಿಯಮ ಹಾಕೋಣ. ಆಗ ತಾನೇ ತಾನಾಗಿ ಇಡೀ ದೇಶದ ಸಾಹಿತ್ಯಲೋಕ ಈ ಸ್ಪರ್ಧೆಯೆಡೆಗೆ ಗಮನಿಸಲು ತೊಡಗುತ್ತದೆ. ದೇಶದ ಬೇರೆ ಬೇರೆ ಭಾಷೆಗಳನ್ನು ಅನುವಾದಿಸಬಲ್ಲ ಹೊಸ ಅನುವಾದಕರು ಸೃಷ್ಟಿ ಯಾಗುತ್ತಾರೆ. ಪ್ರಕಾಶಕರಿಗೂ ಹೊರ ರಾಜ್ಯದ ಸಾಹಿತಿಗಳ ಅತ್ಯುತ್ತಮ ಪುಸ್ತಕಗಳನ್ನು ಪ್ರಕಟಿಸುವ ಅವಕಾಶ ದಕ್ಕುತ್ತದೆ.

ಇದೇ ರೀತಿಯಲ್ಲಿ ಕನ್ನಡದ ಮುಖ್ಯ ಕೃತಿಗಳನ್ನು ದೇಶದ ಇತರ ಪ್ರಮುಖ ಭಾಷೆಗಳಿಗೆ ಒಯ್ಯುವ ಕೆಲಸ ಶ್ರದ್ಧೆಯಿಂದ ನಡೆಯಬೇಕು. ಅದನ್ನು ನಮ್ಮ ಜಡ್ಡು ಹಿಡಿದ ಅಕಾಡೆಮಿಗೆ ಒಪ್ಪಿಸಿ ದರೆ ಗುಣಮಟ್ಟದ ಕೆಲಸ ನಡೆಯುವುದಿಲ್ಲ. ಅದರ ಬದಲು ಅನ್ಯ ಭಾಷೆಗಳ ಪ್ರತಿಷ್ಠಿತ ಪ್ರಕಾಶ ಕರನ್ನು ಗುರುತಿಸಿ (ದ್ರಾವಿಡ ಭಾಷೆಗಳು, ಹಿಂದಿ, ಇಂಗ್ಲಿಷ್‌, ಮರಾಠಿ, ಬಂಗಾಲಿ ಇತ್ಯಾದಿ) ಅವ ರಿಗೆ ಜವಾಬ್ದಾರಿಯನ್ನು ಒಪ್ಪಿಸಬೇಕು. ಇದು ಕನ್ನಡದ ಸಾಹಿತ್ಯ ಪ್ರಚಾರಕ್ಕೆ ಅನುಕೂಲ ವಾಗುತ್ತದೆ. ನೆರೆಯ ತಮಿಳುನಾಡಿನಲ್ಲಿ ಈ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಅಲ್ಲಿನ ಮುಖ್ಯಮಂತ್ರಿಗಳೇ ಮುಂದೆ ನಿಂತು ಈ ಕೆಲಸ ಮಾಡುತ್ತಿದ್ದಾರೆ. ಅದು ನಮಗೆ ಮಾದರಿಯಾಗಬೇಕು.

ವಸುಧೇಂದ್ರ

ಟಾಪ್ ನ್ಯೂಸ್

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Karachi ಭಾರತೀಯ ಮಹಿಳೆಯ ವಡಾಪಾವ್‌, ಪಾವ್‌ಭಾಜಿ ಕಮಾಲ್‌!

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

world mother’s day 2024: ಯುಗಯುಗದಲ್ಲೂ ತಾಯಿ ದೇವತೆ…

World Mother’s Day 2024: ಯುಗಯುಗದಲ್ಲೂ ತಾಯಿ ದೇವತೆ…

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

badminton

Badminton; ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಇಂದಿನಿಂದ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.