Bihar; ಮೀಸಲು ಪ್ರಮಾಣ ಶೇ. 65?: ಸಿಎಂ ನಿತೀಶ್ ಕುಮಾರ್ ಸುಳಿವು
ಹಾಲಿ ಅಧಿವೇಶನದಲ್ಲೇ ಮಸೂದೆ
Team Udayavani, Nov 8, 2023, 12:52 AM IST
ಪಟ್ನಾ: ಬಿಹಾರದಲ್ಲಿ ಬಿಡುಗಡೆ ಆಗಿರುವ ಜಾತಿಗಣತಿಯ ವರದಿ ಬಗ್ಗೆ ಪರ-ವಿರೋಧದ ಚರ್ಚೆಗಳು ಮುಂದುವರಿದಿರುವಂತೆಯೇ ಸಿಎಂ ನಿತೀಶ್ ಕುಮಾರ್ ಮೀಸಲು ಪ್ರಮಾಣ ಹೆಚ್ಚಿಸುವ ಘೋಷಣೆ ಮಾಡಿದ್ದಾರೆ.
ಬಿಹಾರ ಜಾತಿ ಗಣತಿಯ ಎರಡನೇ ಆವೃತ್ತಿ ಬಿಡುಗಡೆ ಮಾಡಿದ ಬಳಿಕ ಅವರು ಮಂಗಳವಾರ ವಿಧಾನ ಸಭೆಯಲ್ಲಿ ಮಾತನಾಡಿದರು. ಹಾಲಿ ಅಧಿವೇಶನದಲ್ಲಿಯೇ ಮಸೂದೆ ಮಂಡಿಸಿ, ಅಂಗೀಕರಿಸಿಕೊಳ್ಳುವ ಗುರಿಯನ್ನು ಅವರು ಹಾಕಿಕೊಂಡಿದ್ದಾರೆ.
ಎಸ್ಸಿ ಮತ್ತು ಎಸ್ಟಿ ಸಮುದಾಯದವರಿಗೆ ಸದ್ಯ ಶೇ. 17 ಮೀಸಲು ಇದೆ. ಇದನ್ನು ಶೇ. 22ಕ್ಕೆ ಹೆಚ್ಚಿಸಲಾಗುತ್ತದೆ. ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೆ ಇರುವ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಪ್ರಕಟಿಸಿದ್ದಾರೆ. ಇದಲ್ಲದೆ ಎಸ್ಟಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 2 ಮೀಸಲು, ಅತ್ಯಂತ ಹಿಂದುಳಿದ ವರ್ಗಕ್ಕೆ (ಇಸಿಬಿ) ಶೇ. 43 ನೀಡುವ ಪ್ರಸ್ತಾವವೂ ನಿತೀಶ್ ಸರಕಾರದ ಮುಂದಿದೆ.
ಕೇಂದ್ರ ಸರಕಾರ ಆರ್ಥಿಕವಾಗಿ ಹಿಂದುಳಿದ ವರ್ಗ (EWS)ಕ್ಕೆ ನೀಡುತ್ತಿರುವ ಮೀಸಲು ಪ್ರಮಾಣ ಶೇ. 10 ಇದೆ. ಅದನ್ನೂ ಸೇರ್ಪಡೆ ಮಾಡಿದರೆ ಬಿಹಾರದಲ್ಲಿ ಮೀಸಲು ಪ್ರಮಾಣ ಶೇ. 75ಕ್ಕೆ ಏರಿಕೆಯಾದಂತೆ ಆಗುತ್ತದೆ. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಯಾವುದೇ ರೀತಿಯಲ್ಲಾದರೂ ಮೀಸಲಾತಿ ಶೇ. 50 ಮೀರುವಂತೆ ಇಲ್ಲ.
ಶೇ. 43- ಅತ್ಯಂತ ಹಿಂದುಳಿದ ವರ್ಗ (ಉದ್ದೇಶಿತ)
ಶೇ. 10- ಆರ್ಥಿಕವಾಗಿ ಹಿಂದುಳಿದ ವರ್ಗ – ಈಗ ಇರುವ ವ್ಯವಸ್ಥೆ
ಅತ್ಯಂತ ಹಿಂದುಳಿದ ವರ್ಗದವರ ಹಿತಾಸಕ್ತಿ ಕಾಪಾಡುವ ಬಗ್ಗೆ ರಾಜ್ಯ ಸರಕಾರ ಕ್ರಮ ಕೈಗೊಳ್ಳದಿದ್ದರೆ ಉದ್ದೇಶಿತ ನಿರ್ಧಾರದಿಂದ ಪ್ರಯೋಜನ ಆಗಲಾರದು.
– ಸುಶೀಲ್ ಕುಮಾರ್ ಮೋದಿ,ಬಿಜೆಪಿ ರಾಜ್ಯಸಭಾ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು