Swamiji ; ಹಿಂದುತ್ವದಿಂದ ಹೊರ ಬರದಿದ್ದರೆ ಲಿಂಗಾಯತರಿಗೆ ಉಳಿಗಾಲವಿಲ್ಲ: ನಿಜಗುಣಾನಂದ ಶ್ರೀ

ಪ್ರತ್ಯೇಕ ಧರ್ಮ ಬೇಕಾದರೆ ಹಿಂದೂ ಪದ ಕೈ ಬಿಡಲೇಬೇಕಿದೆ ಎಂದ ರಾಜ್ಯೋತ್ಸವ ಪುರಸ್ಕೃತ ಸ್ವಾಮೀಜಿ

Team Udayavani, Nov 9, 2023, 8:11 PM IST

1-asadasda

ಧಾರವಾಡ : ಹಿಂದುತ್ವದಿಂದ ಹೊರ ಬಾರದೇ ಇದ್ದರೆ ಲಿಂಗಾಯತರಿಗೆ ಉಳಿಗಾಲವಿಲ್ಲ ಎಂದು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ, ಬಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಚನ್ನಬಸವೇಶ್ವರ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಲಿಂಗಧಾರಣೆ ಸಮಾರಂಭ ಹಾಗೂ ಸಹಜ ಶಿವಯೋಗ ಕಾರ್ಯಕ್ರಮದ ಸಾನಿಧ್ಯವಹಿಸಿ, ಅವರು ಮಾತನಾಡಿದರು.

ಹಿಂದೂ ಶಬ್ಧ ಬಳಸುವ ಲಿಂಗಾಯತರಿಗೆ ಭವಿಷ್ಯವಿಲ್ಲ. ಮೊದಲು ಈ ಬಗ್ಗೆ ಲಿಂಗಾಯತರಲ್ಲಿರುವ ಗೊಂದಲ ನಿವಾರಿಸಬೇಕಿದೆ. ಇದಾದ ಬಳಿಕ ಪ್ರತ್ಯೇಕ ಧರ್ಮ ಬೇಕಾದರೆ, ಲಿಂಗಾಯತರು ಹಿಂದೂ ಪದ ಕೈ ಬಿಡಲೇಬೇಕಿದೆ ಎಂದರು. ಜೈನರು, ಸಿಖ್ ಸಮುದಾಯಕ್ಕೆ ಈಗಾಗಲೇ ಸ್ವತಂತ್ರ್ಯ ಧರ್ಮ ಮಾನ್ಯತೆ ಲಭಿಸಿದೆ. ಲಿಂಗಾಯತ ಧರ್ಮಕ್ಕೂ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗುವ ವಿಶ್ವಾಸವಿದ್ದು, ಪ್ರತ್ಯೇಕ ಧರ್ಮದ ಮಾನ್ಯತೆ ಸಿಗುವ ಎಲ್ಲ ಅರ್ಹತೆಗಳಿವೆ. ಹೀಗಾಗಿ ಹಿಂದೂತ್ವಕ್ಕೆ ಅಂಟಿಕೊಳ್ಳದೇ ಲಿಂಗಾಯತರು ಎಚ್ಚೆತ್ತು, ಈ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಈ ಬಗ್ಗೆ ಚಿಂತನೆ ಮಾಡಬೇಕಿದೆ ಎಂದರು.

ಲಿಂಗಾಯತರ ಈಗಿನ ಸ್ಥಿತಿ ಅತಂತ್ರವೇ ಆಗಿದ್ದು, ಮುಂದಿನ 40 ವರ್ಷಗಳಲ್ಲಿ ಲಿಂಗಾಯತರ ಸ್ಥಿತಿಯು ವಿಷಮ ಸ್ಥಿತಿಗೆ ತಲುಪಲಿದೆ. ಹೀಗಾಗಿ ಈಗಲೇ ಲಿಂಗಾಯತರು ಎಚ್ಚೆತ್ತು ಜಾತಿಗೆ ಅಂಟಿಕೊಳ್ಳದೇ ಸ್ವತಂತ್ರ್ಯ ಧರ್ಮದ ಅಸ್ತಿತ್ವಕ್ಕೆ ಕೈ ಜೋಡಿಸಬೇಕು. ಇದೊಂದು ಬಹಳ ಸೂಕ್ಷ್ಮ ವಿಚಾರವಾಗಿದ್ದು, ಹೀಗಾಗಿ ಲಿಂಗಾಯತ ಧರ್ಮದ ಬಗ್ಗೆ ಮೂಲ ಆಶಯಗಳ ಬಗ್ಗೆ ಅರಿವು ಪಡೆದುಕೊಳ್ಳುವ ಅಗತ್ಯವಿದೆ. ಹೀಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು ನೇತೃತ್ವವಹಿಸಿಕೊಂಡು ಈ ಬಗ್ಗೆ ಮಠಾಧಿಶರ ಚಿಂತನ-ಮಂಥನ ಕೈಗೊಳ್ಳಲು ವೇದಿಕೆ ರೂಪಿಸುವ ಅಗತ್ಯವಿದೆ ಎಂದರು.

ಮಾಜಿ ಶಾಸಕ ಬಿ.ಆರ್.ಪಾಟೀಲ ಮಾತನಾಡಿ, ವೀರಶೈವ-ಲಿಂಗಾಯತ ಸಮಾಜ ವೈಜ್ಞಾನಿಕ ತಳಹದಿ ಮೇಲೆ ಸ್ಥಾಪಿಸಲ್ಪಟ್ಟಿದೆ. ಇದಕ್ಕೆ ಧರ್ಮ ಮಾನ್ಯತೆ ಸಿಗಬೇಕಿದೆ. ಸಮಾಜ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕ್ ಸ್ಥಾಪಿಸುವ ಚಿಂತನೆ ಇದೆ ಎಂದರು.

ಮಾಜಿ ಸಚಿವೆ ಡಾ.ಲೀಲಾದೇವಿ ಆರ್ ಪ್ರಸಾದ ಮಾತನಾಡಿ, ಕರ್ನಾಟಕದಲ್ಲಿ ವೀರಶೈವ ಶಕ್ತಿ ಹೊರತರುವ ಕಾರ್ಯ ವೀರಶೈವ-ಲಿಂಗಾಯತ ಮಹಾಸಭಾ ಮಾಡುತ್ತಿದೆ. ನಮ್ಮ ಯುವ ಜನಾಂಗ ಸಮಾಜದ ಅಭಿವೃದ್ದಿಗೆ ಶ್ರಮಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾಸಭಾ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಮಠಾಧಿಶರು ಹಾಗೂ ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ಲಿಂಗಾಯತ, ಸಾದರ, ಬಣಜಿಗ, ಗಾಣಿಗ ಹೀಗೆ ಒಡೆದು ಹಾಳು ಮಾಡುತ್ತಿರುವುದಾಗಿ ವಿಷಾದಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೀಲಾ ಕೊಡ್ಲಿ, ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು. ಇದಲ್ಲದೇ ಶೇ.90 ರಷ್ಟು ಅಂಕ ಪಡೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ 125 ಮಕ್ಕಳಿಗೆ 2,500 ರೂ. ನಗದು ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಂಎಫ್ ಮಾಜಿ ಅಧ್ಯಕ್ಷ ನೀಲಕಂಠ ಅಸೂಟಿ, ಶಿವಶರಣ ಕಲಬಶೆಟ್ಟರ, ರಾಜಶೇಖರ ಉಪ್ಪಿನ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಸಂಧ್ಯಾ ಅಂಬಡಗಟ್ಟಿ, ಮಂಜುನಾಥ ಇದ್ದರು.

ಲಿಂಗಾಯತ ಸಮಾಜದ ಮಕ್ಕಳು ಬರೀ ಅಂಕಗಳಿಗೆ ಗಂಟು ಬೀಳದೇ ಲಿಂಗಾಯತ ಸಂಸ್ಕಾರದ ಜತೆ ಉನ್ನತ ಸ್ಥಾನ ಪಡೆಯುವತ್ತ ಕಠಿಣ ಶ್ರಮ ಹಾಕಬೇಕು. ಇದರ ಜತೆಗೆ ಲಿಂಗಾಯತ ಸಮಾಜದ ಏಳ್ಗೆಗೆ ಯುವ ಸಮುದಾಯ ಕೈ ಜೋಡಿಸಬೇಕು.
-ಕುಮಾರ ವಿರೂಪಾಕ್ಷ ಸ್ವಾಮೀಜಿ, ಮೂರು ಸಾವಿರ ವಿರಕ್ತಮಠ, ಉಪ್ಪಿನಬೆಟಗೇರಿ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.