Bellary; ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸೇರುವ ಶಾಸಕರ ಪಟ್ಟಿ ಬಿಡುಗಡೆ: ಸಚಿವ ನಾಗೇಂದ್ರ
Team Udayavani, Nov 11, 2023, 1:17 PM IST
ಬಳ್ಳಾರಿ: ಮುಂದಿನ ದಿನಗಳಲ್ಲಿ ಬಿಜೆಪಿ ಹಾಗು ಜೆಡಿಎಸ್ ಶಾಸಕರರು ಕಾಂಗ್ರೆಸ್ ಸೇರುತ್ತಾರೆ. ಕಾಂಗ್ರೆಸ್ ಸೇರುವ ದೊಡ್ಡ ಪಟ್ಟಿಯಿದೆ. ಸೂಕ್ತ ಸಮಯದಲ್ಲಿ ಅದನ್ನು ಬಹಿರಂಗ ಮಾಡುತ್ತೇವೆ ಎಂದು ಸಚಿವ ನಾಗೇಂದ್ರ ಹೇಳಿದರು.
ಬರ ಪರಿಸ್ಥಿತಿ ವೀಕ್ಷಣೆ ವೇಳೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದೆ. ಈ ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಒಳ್ಳೆಯ ಅಧಿಕಾರ ನಡೆಸುತ್ತಿದ್ದೆ. ಅದನ್ನು ಸಹಿಸದ ಬಿಜೆಪಿಯವರು ಅ ಪ್ರಚಾರ ಮಾಡುತ್ತಾರೆ ಎಂದರು.
ಇದನ್ನೂ ಓದಿ:ಧನುಷ್ ʼCaptain Millerʼಗೆ ʼLal Salaamʼ ಟಕ್ಕರ್? ಸಂಕ್ರಾಂತಿಗೆ ಬಾಕ್ಸ್ ಆಫೀಸ್ ಫೈಟ್?
ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ವಿಚಾರಕ್ಕೆ ಮಾತನಾಡಿದ ಅವರು, ಜಾತಿ ಗಣತಿ ಬಿಡುಗಡೆಯಲ್ಲಿ ಬಿಜೆಪಿಯವರು ವಿನಾಕಾರಣ ರಾಜಕಾರಣ ಮಾಡುತಿದ್ದಾರೆ. ಯಾರು ಕೂಡಾ ಜಾತಿ ಗಣತಿ ವರದಿಗೆ ವಿರೋಧ ಮಾಡಿಲ್ಲ. ಸೂಕ್ತ ಸಮಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತವೆ. ರಾಹುಲ್ ಗಾಂಧಿ ಅವರು ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ, ಯಾವಾಗ ಬಿಡುಗಡೆ ಮಾಡಬೇಕು ಎನ್ನುವುದು ನಿರ್ಧಾರ ಮಾಡಲಾಗುತ್ತದೆ. ಜಾತಿ ಗಣತಿ ವರದಿ ಬಿಡುಗಡೆ ಮಾಡುವುದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಕೂಡಾ ಜಾತಿ ಗಣತಿ ಪರವಾಗಿ ಇದ್ದಾರೆ ಎಂದರು.
ಮಾಜಿ ಸಚಿವ ಈಶ್ವರಪ್ಪ ಅವರು ಸಿಎಂ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸೂಕ್ತ ದಾಖಲೆ ಇಲ್ಲದೇ ಜಾತಿಗಣತಿ ಪರವಾಗಿ ಈಶ್ವರಪ್ಪ ಅವರು ಅಪಪ್ರಚಾರ ಮಾಡುತ್ತಾರೆ ಎಂದು ನಾಗೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
MUST WATCH
ಹೊಸ ಸೇರ್ಪಡೆ
Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು
RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ
London: ಭಾರತೀಯ ಮೂಲದ ಮಹಿಳೆಗೆ ಬಸ್ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ