Ramanagara: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಜನತೆ
Team Udayavani, Nov 14, 2023, 11:43 AM IST
ರಾಮನಗರ: ಜನತೆಗೆ ಭಯ ಮೂಡಿದಿದ್ದ ಐದು ವರ್ಷದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮಾಗಡಿ ಪಟ್ಟಣದ ಗವಿ ಗಂಗಾಧರೇಶ್ವರ ದೇವಾಲಯದ ಬಳಿ ಇರಿಸಲಾಗಿದ್ದ ಬೋನಿಗೆ ಬಿದ್ದ ಚಿರತೆ ಸೆರೆಯಾಗಿದೆ.
ಹಲವು ದಿನಗಳಿಂದ ಮಾಗಡಿ ಪಟ್ಟಣದ ಸುತ್ತಮುತ್ತ ಚಿರತೆ ಉಪಟಳ ನೀಡುತ್ತಿತ್ತು. ಚಿರತೆ ಹಾವಳಿಯಿಂದ ಬೇಸತ್ತಿದ್ದ ಮಾಗಡಿ ಜನತೆ, ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದರು. ಕಳೆದ ಎರಡು ದಿನಗಳ ಹಿಂದೆ ದೇವಾಲಯದ ಪಕ್ಕದಲ್ಲಿ ಅರಣ್ಯಾಧಿಕಾರಿಗಳು ಬೋನು ಇರಿಸಿದ್ದರು. ಮಂಗಳವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ.
ಮಾಗಡಿ ಪಟ್ಟಣದ ಜನರು ಚಿರತೆ ನೋಡಲು ಮುಗಿಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಚನದುರ್ಗ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ