Udupi ಅತೀ ವೇಗಕ್ಕಿಲ್ಲ ನಿಯಂತ್ರಣ: ಹೆಚ್ಚುತ್ತಿರುವ ನಿರ್ಲಕ್ಷ್ಯದ ವಾಹನ ಚಾಲನೆ

ಪಾದಚಾರಿಗಳಿಗೆ ಕಂಟಕ

Team Udayavani, Nov 14, 2023, 4:52 PM IST

Udupi ಅತೀ ವೇಗಕ್ಕಿಲ್ಲ ನಿಯಂತ್ರಣ: ಹೆಚ್ಚುತ್ತಿರುವ ನಿರ್ಲಕ್ಷ್ಯದ ವಾಹನ ಚಾಲನೆ

ಉಡುಪಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಿರ್ಲಕ್ಷ್ಯದ ವಾಹನ ಚಾಲನೆ ಹೆಚ್ಚುತ್ತಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಚಾರಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಉಡುಪಿ ನಗರ ಬೆಳೆಯುತ್ತಿದ್ದಂತೆ ವಾಹನಗಳ ಓಡಾಟ ಸಂಖ್ಯೆಯೂ ಹೆಚ್ಚುತ್ತಿದೆ. ಕಳೆದ 10 ವರ್ಷಗಳಲ್ಲಿ ಉಡುಪಿ ನಗರ ಅಗಾಧ ಪ್ರಮಾಣದಲ್ಲಿ ಬೆಳೆದಿದೆ. ಅಷ್ಟೇ ಪ್ರಮಾಣದಲ್ಲಿ ಟ್ರಾಫಿಕ್‌ ದಟ್ಟಣೆ,

ರಸ್ತೆ ಅಪಘಾತ ಸಂಭವಿಸುತ್ತಿದೆ. ಕೆಲವಡೆ ರಸ್ತೆಗಳು ವ್ಯವಸ್ಥಿತವಾಗಿದ್ದರೆ, ಕೆಲವು ಕಡೆಗಳಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಾಣ ರಸ್ತೆಗಳು ನಗರದಲ್ಲಿ ಟ್ರಾಫಿಕ್‌ ಜಾಮ್‌ ಮತ್ತು ಅಪಘಾತ ಸಂಖ್ಯೆ ಹೆಚ್ಚಳವಾಗಲು ಕಾರಣವಾಗುತ್ತಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಹನ ಸವಾರರ ನಿರ್ಲಕ್ಷ್ಯದಿಂದಾಗಿಯೇ ಸಾಕಷ್ಟು ಅಪಘಾತ ಸಂಭವಿಸುತ್ತಿದೆ ಎಂಬುದು ಕಳವಳಕಾರಿಯಾಗಿದೆ.

ಒಂದೇ ದಿನ ಎರಡು ಸಾವು
ನಗರದ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲಿ ವೇಗದ, ನಿರ್ಲಕ್ಷ್ಯದ ಚಾಲನೆ ಹೆಚ್ಚುತ್ತಿದೆ. ಶುಕ್ರವಾರ ಒಂದೇ ದಿನ ಇಬ್ಬರು ಪಾದಚಾರಿಗಳು ಅಪಘಾತಕ್ಕೆ ಬಲಿಯಾಗಿದ್ದಾರೆ. ಗುಂಡಿಬೈಲು, ನಿಟ್ಟೂರು ಬಾಳಿಗ ಜಂಕ್ಷನ್‌ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನಗಳಿಗೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸಂತೆಕಟ್ಟೆ-ಅಂಬಾಗಿಲು-ಅಂಬಲಪಾಡಿ, ಮಲ್ಪೆ-ಕಲ್ಮಾಡಿ, ಪೆರಂಪಳ್ಳಿ-ಅಂಬಾಗಿಲು, ಡಿಸಿ ಕಚೇರಿ -ಸಿಂಡಿಕೇಟ್‌ ಸರ್ಕಲ್‌, ಗುಂಡಿಬೈಲು-ಕಲ್ಸಂಕ ರಸ್ತೆ, ಕಡಿಯಾಳಿ, ಕುಂಜಿಬೆಟ್ಟು, ಎಂಜಿಎಂ, ಮಣಿಪಾಲ-ಅಲೆವೂರು ರಸ್ತೆ, ಶಿರಿಬೀಡು, ಬನ್ನಂಜೆ ಈ ರಸ್ತೆಗಳಲ್ಲಿ ಸಣ್ಣಪುಟ್ಟ ಮತ್ತು ಗಂಭೀರ ಅಪಘಾತ ಸಂಖ್ಯೆ ನಿರಂತರವಾಗಿದೆ. ಅನಧಿಕೃತ ಪಾರ್ಕಿಂಗ್‌, ವೇಗದ ಚಾಲನೆ, ಅವೈಜ್ಞಾನಿಕ ರಸ್ತೆ ಡಿವೈಡರ್‌ನ ತಿರುವು ಅಪಘಾತ ಹೆಚ್ಚಲು ಕಾರಣ ಎನ್ನುತ್ತಾರೆ ಸ್ಥಳೀಯರು.

ದಂಡ ಬಿಸಿಗೆ ಬಗ್ಗದ ವೇಗಿಗಳು
ಎಷ್ಟೇ ಸಂಚಾರ ನಿಯಮ ಬಿಗು ಇದ್ದರೂ ಟ್ರಾಫಿಕ್‌ ದಟ್ಟಣೆ ನಡುವೆಯೂ ಕೆಲವು ದ್ವಿಚಕ್ರ, ಕಾರು ಚಾಲಕರು ವೇಗ ತಗ್ಗಿಸದೆ ವಾಹನ ಚಾಲನೆ ಮಾಡುವ ಮೂಲಕ ಅಪಘಾತ ಸಂಭವಿಸಲು ಕಾರಣವಾಗುತ್ತಿದ್ದಾರೆ. ವೇಗದ ವಾಹನ ಚಾಲನೆ ಮಾಡುವರನ್ನು ಸಂಚಾರಿ ಪೊಲೀಸರು ಅಲ್ಲಲ್ಲಿ ತಡೆದು ದಂಡ ವಿಧಿಸುತ್ತಿದ್ದಾರೆ. ಪೊಲೀಸರ ದಂಡ ಬಿಸಿಗೂ ಕೆಲವು ವಾಹನ ಸವಾರರು ಬಗ್ಗುತ್ತಿಲ್ಲ. ವೇಗದ ಚಾಲನೆಗೆ ಮದ್ಯ, ಇನ್ನಿತರೆ ಮಾದಕ ದ್ರವ್ಯ ವ್ಯಸನವು ಕಾರಣವಾಗುತ್ತಿದೆ. ರಸ್ತೆ ಸುರಕ್ಷತೆಗೆ ಅಳವಡಿಸಿದ ಬ್ಯಾರಿಕೇಡ್‌ಗೂ
ಸಹ ಢಿಕ್ಕಿ ಹೊಡೆಯುವ ಘಟನೆಗಳು ವರದಿಯಾಗಿವೆ.

ಇಲಾಖಾ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ
ಸಂಚಾರ ನಿಯಮ ಮೀರುವ ವಾಹನ ಸವಾರರಿಗೆ ದಂಡ ವಿಧಿಸುವ ಕಾರ್ಯ ನಿರಂತರ ನಡೆಯುತ್ತಿದೆ. ನಗರ ವ್ಯಾಪ್ತಿಯಲ್ಲಿ ನಿರ್ಲಕ್ಷ್ಯ, ಅತೀವೇಗದ ವಾಹನ ಚಾಲನೆ ಬಗ್ಗೆ ನಿಗಾ ವಹಿಸಲಾಗಿದೆ. ಅತೀವೇಗ, ನಿರ್ಲಕ್ಷ್ಯದ ವಾಹನ ಚಾಲನೆ ಮಾಡದಂತೆ ಸಂಚಾರ ನಿಯಮಕ್ಕೆ ಸಂಬಂಧಿಸಿ ಇಲಾಖೆ ವತಿಯಿಂದ ಜಾಗೃತಿಯನ್ನೂ ಮೂಡಿಸುತ್ತಿದ್ದೇವೆ.
-ಶೇಖರ್‌, ಪಿಎಸ್‌ಐ, ಸಂಚಾರ ಪೊಲೀಸ್‌ ಠಾಣೆ, ಉಡುಪಿ.

– ಅವಿನ್‌ ಶೆಟ್ಟಿ

 

ಟಾಪ್ ನ್ಯೂಸ್

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

Udupi: ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

Udupi: ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

14-basrur

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

13-uv-fusion

Dance: ಬಸಣ್ಣನ ಡ್ಯಾನ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.