Monkey: ಮಂಗಗಳ ದಾಳಿ- ಹೊಟ್ಟೆ ಸೀಳಿ, ಕರುಳು ಹೊರತೆಗೆದ ಪರಿಣಾಮ ಬಾಲಕ ಮೃತ್ಯು
ಮೃತ ಬಾಲಕನನ್ನು ದೀಪಕ್ ಠಾಕೂರ್ ಎಂದು ಗುರುತಿಸಲಾಗಿದೆ.
Team Udayavani, Nov 15, 2023, 2:40 PM IST
ಅಹಮದಾಬಾದ್: ಹತ್ತು ವರ್ಷದ ಬಾಲಕನ ಮೇಲೆ ಮಂಗಗಳು ಮಾರಣಾಂತಿಕವಾಗಿ ದಾಳಿ ನಡೆಸಿ ಹೊಟ್ಟೆಯನ್ನು ಸೀಳಿ, ಕರುಳನ್ನು ಹೊರತೆಗೆದ ಪರಿಣಾಮ ಬಾಲಕ ಕೊನೆಯುಸಿರೆಳೆದಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಇದನ್ನೂ ಓದಿ:Tragedy: ಕಂದಕಕ್ಕೆ ಬಿದ್ದ ಬಸ್… 30 ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ
ಈ ಘಟನೆ ಗುಜರಾತ್ ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದೇವಾಲಯ ಸಮೀಪ ಬಾಲಕನ ಮೇಲೆ ಮಂಗಗಳ ಗುಂಪು ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅತೀಯಾದ ರಕ್ತಸ್ರಾವ, ಕರುಳು, ಹೊಟ್ಟೆ ಸೀಳಿದ್ದರಿಂದ ಚಿಕಿತ್ಸೆಗೂ ಮುನ್ನವೇ ಕೊನೆಯುಸಿರೆಳೆದಿರುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಮೃತ ಬಾಲಕನನ್ನು ದೀಪಕ್ ಠಾಕೂರ್ ಎಂದು ಗುರುತಿಸಲಾಗಿದೆ. ದೀಪಕ್ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಈ ಸಂದರ್ಭದಲ್ಲಿ ಮಂಗಗಳ ಗುಂಪು ಬಾಲಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ್ದವು ಎಂದು ಪೊಲೀಸ್ ಹಾಗೂ ಅರಣ್ಯಾಧಿಕಾರಿಗಳು ಜಂಟಿಯಾಗಿ ತಿಳಿಸಿದ್ದಾರೆ.
ಬಾಲಕನ ಮೇಲೆ ದಾಳಿ ನಡೆಸಿ ಹೊಟ್ಟೆಯನ್ನು ಸೀಳಿ, ಕರುಳನ್ನು ಹೊರತೆಗೆದಿದ್ದವು. ಇದರ ಪರಿಣಾಮ ಬಾಲಕ ಕೊನೆಯುಸಿರೆಳೆದಿದ್ದ ಎಂದು ವರದಿ ವಿವರಿಸಿದೆ. ಕಳೆದ ಒಂದು ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಗ್ರಾಮದಲ್ಲಿ ದೊಡ್ಡ ಪ್ರಮಾಣದಲ್ಲಿ ಮಂಗಗಳು, ಸಿಂಗಳೀಕ ಇದ್ದು, ಅವುಗಳನ್ನು ಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
32 ಕೋಟಿ ರೂ. ಅಕ್ರಮ ಹಣ ಪತ್ತೆ: ಜಾರ್ಖಂಡ್ ಸಚಿವ ಆಲಂಗೀರ್ ಸೆರೆ
INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ
ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ
ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ
MUST WATCH
ಹೊಸ ಸೇರ್ಪಡೆ
ಪರಿಷತ್ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ
Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ
Karnataka ಸಿಎಂ ಸಿದ್ದರಾಮಯ್ಯ-ಎಂ.ಬಿ. ಪಾಟೀಲ್ ಭೇಟಿ
Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್, ಡಬ್ಬಲ್ ಚೋಲ್
ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ