World Cup: ದ.ಆಫ್ರಿಕಾ vs ಆಸೀಸ್ 2nd ಸೆಮಿ ಫೈಟ್‌; ಟಾಸ್‌ ಗೆದ್ದ ಬವುಮ ಪಡೆ

ಯಾರಾಗ್ತಾರೆ ಟೀಮ್‌ ಇಂಡಿಯಾ ಎದುರಾಳಿ?

Team Udayavani, Nov 16, 2023, 1:35 PM IST

ಕೋಲ್ಕತಾ: ಕ್ರಿಕೆಟ್‌ ವಿಶ್ವಕಪ್‌ 2ನೇ ಸೆಮಿಪೈನಲ್‌ಗೆ ಈಡನ್‌ ಗಾರ್ಡನ್‌ ಸಜ್ಜಾಗಿದೆ. ಆಸೀಸ್ ಸವಾಲಿಗೆ ಹರಿಣಗಳ ಬಲಿಷ್ಠ ತಂಡ ಜಿದ್ದಾಜಿದ್ದಿಗೆ ರೆಡಿಯಾಗಿದೆ. ಟಾಸ್‌ ಗೆದ್ದ ದ.ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಕ್ರಿಕೆಟ್‌ ವಿಶ್ವಕಪ್‌ ಇತಿಹಾಸದಲ್ಲಿ ದ.ಆಫ್ರಿಕಾ ಈವರೆಗೆ 4 ಸಲ ಸೆಮಿಫೈನಲ್‌ ಪ್ರವೇಶಿಸಿದರೂ ಒಮ್ಮೆಯೂ ಫೈನಲ್‌ಗೆ ಹೆಜ್ಜೆ ಇಡದ ನತದೃಷ್ಟ ತಂಡವಾಗಿ ಗುರುತಿಸಿಕೊಂಡಿದೆ. ಇದೀಗ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಗುರುವಾರ ಐತಿಹಾಸಿಕ “ಈಡನ್‌ ಗಾರ್ಡನ್ಸ್‌’ನಲ್ಲಿ ಟೆಂಬ ಬವುಮ ಪಡೆಯ ಎದುರಾಳಿ 5 ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯ ಎನ್ನುವುದು ಗಮನಿಸಬೇಕಾದ ಅಂಶ.

ವಿಶ್ವಕಪ್‌ ಟೂರ್ನಿಯಲ್ಲಿ ದ.ಆಫ್ರಿಕಾ ಟೇಬಲ್‌ ಟಾಪರ್‌ ಹಾಗೂ ಎರಡನೇ ಸ್ಥಾನದಲ್ಲೇ ಇತ್ತು. ಇತ್ತ ಆಸೀಸ್‌ ಹಾವು – ಏಣಿಯಂತೆ ಬಂದು ಸೆಮಿಫೈನಲ್‌ ಗೇರಿದೆ.

ದ.ಆಫ್ರಿಕಾಕ್ಕೆ ಬ್ಯಾಟಿಂಗ್‌ ಬಲ: ಈ ಬಾರಿಯ ವಿಶ್ವಕಪ್‌ ನಲ್ಲಿ ದ.ಆಫ್ರಿಕಾ ಬ್ಯಾಟಿಂಗ್‌ ನಲ್ಲೇ ಸದ್ದು ಮಾಡಿದೆ. ಇವರೆಗೆ 6 ಸಲಿ 300 ಕ್ಕೂ ಅಧಿಕ ಮೊತ್ತವನ್ನು ದಾಖಲಿಸಿದೆ. ಅಗ್ರ ಆರರಲ್ಲಿ ನಾಲ್ವರು ಈಗಾಗಲೇ ಸೆಂಚುರಿ ಬಾರಿಸಿದ್ದಾರೆ. ಕ್ವಿಂಟನ್‌ ಡಿ ಕಾಕ್‌ ಅವರದಂತೂ ಜೀವಮಾನದ ಫಾರ್ಮ್. 4 ಶತಕ ಬಾರಿಸಿ ಎದುರಾಳಿಗಳಿಗೆ ಸಿಂಹಸ್ವಪ್ನರಾಗಿದ್ದಾರೆ. ಈ ಕೂಟದಲ್ಲಿ ಬಾರಿಸಿದ ಒಟ್ಟು ರನ್‌ 591. ರಸ್ಸಿ ವಾನ್‌ ಡರ್‌ ಡುಸೆನ್‌ ನಂ.3ಕ್ಕೆ ಪರ್ಫೆಕ್ಟ್ ಬ್ಯಾಟರ್‌. ಮಾರ್ಕ್‌ರಮ್‌, ಕ್ಲಾಸೆನ್‌, ಮಿಲ್ಲರ್‌ ಕೂಡ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ.

ದ.ಆಫ್ರಿಕಾ ವಿಶ್ವಕಪ್‌ ಇತಿಹಾಸದ ಗರಿಷ್ಠ ರನ್‌ (5ಕ್ಕೆ 428) ಬಾರಿಸಿದ ದಾಖಲೆಗೂ ಭಾಜನವಾಗಿದೆ. ಹಾಗೆಯೇ ಭಾರತದ ವಿರುದ್ಧ ಬರೀ 83 ರನ್ನಿಗೆ ಉದುರಿದ ಕಂಟಕವನ್ನೂ ಹೊಂದಿದೆ. ಇದು ದಾಖಲಾದದ್ದು “ಈಡನ್‌ ಗಾರ್ಡನ್ಸ್‌’ನಲ್ಲೇ ಎಂಬುದನ್ನು ಮರೆಯುವಂತಿಲ್ಲ!

ಜಾನ್ಸೆನ್‌, ಎನ್‌ಗಿಡಿ, ರಬಾಡ, ಮಹಾರಾಜ್‌, ಶಮ್ಸಿ, ಲಿಝಾಡ್‌, ಫೆಲುಕ್ವಾಯೊ ಅವರೆಲ್ಲ ದಕ್ಷಿಣ ಆಫ್ರಿಕಾ ಬೌಲಿಂಗ್‌ ಸರದಿಯ ಕಟ್ಟಾಳುಗಳು.

ಆಸ್ಟ್ರೇಲಿಯ ಪರಿಪೂರ್ಣ ತಂಡ:

ಆಸ್ಟ್ರೇಲಿಯ ಯಾವ ಸ್ಥಿತಿಯಲ್ಲೂ ಮೇಲೆದ್ದು ಬರಬಲ್ಲ ತಂಡ. ಫ‌ಸ್ಟ್‌ ಬ್ಯಾಟಿಂಗ್‌, ಚೇಸಿಂಗ್‌… ಯಾವುದೂ ಸಮಸ್ಯೆ ಅಲ್ಲ. ಅಫ್ಘಾನಿಸ್ಥಾನ ವಿರುದ್ಧದ ಸ್ಟೋರಿ ಇದಕ್ಕೊಂದು ತಾಜಾ ಉದಾಹರಣೆ. ವಾರ್ನರ್‌, ಹೆಡ್‌, ಮಾರ್ಷ್‌, ಲಬುಶೇನ್‌, ಸ್ಮಿತ್‌, ಮ್ಯಾಕ್ಸ್‌ವೆಲ್‌, ಸ್ಟೋಯಿನಿಸ್‌ ಅವರನ್ನೊಳಗೊಂಡ ಕಾಂಗರೂ ಬ್ಯಾಟಿಂಗ್‌ ಲೈನ್‌ಅಪ್‌ ಬಲಿಷ್ಠ ಹಾಗೂ ಆಕರ್ಷಕ.

ವಾರ್ನರ್‌ ಬ್ಯಾಕ್‌ ಟು ಬ್ಯಾಕ್‌ ಸೆಂಚುರಿ, ಮ್ಯಾಕ್ಸ್‌ವೆಲ್‌ ಅವರ ಪ್ರಚಂಡ ದ್ವಿಶತಕ, ಹಿಂದಿನ ಪಂದ್ಯದಲ್ಲಿ ಮಾರ್ಷ್‌ ಬಾರಿಸಿದ ಅಜೇಯ 177, ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲೇ ಹೆಡ್‌ ಸಿಡಿಸಿದ ಸೆಂಚುರಿಯೆಲ್ಲ ಆಸೀಸ್‌ ಬ್ಯಾಟಿಂಗ್‌ ಸರದಿಯ ಹೈಲೈಟ್ಸ್‌. ಬೌಲಿಂಗ್‌ನಲ್ಲಿ ಸ್ಪಿನ್‌ ಸ್ಪೆಷಲಿಸ್ಟ್‌ ಆ್ಯಡಂ ಝಂಪ ಟ್ರಂಪ್‌ಕಾರ್ಡ್‌ ಆಗಿದ್ದಾರೆ.

ತಂಡಗಳು: 

ಆಸ್ಟ್ರೇಲಿಯ:  ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ದ.ಆಫ್ರಿಕಾ:‌ 

ಕ್ವಿಂಟನ್ ಡಿ ಕಾಕ್(ಕೀಪರ್), ಟೆಂಬಾ ಬವುಮಾ(ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ

ಟಾಪ್ ನ್ಯೂಸ್

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.