Central Government ಪಿಎಂ ವಿಶ್ವಕರ್ಮ ಯೋಜನೆ ವ್ಯಾಪ್ತಿಗೆ ಉಡುಪಿ, ದ.ಕ.


Team Udayavani, Nov 18, 2023, 12:20 AM IST

Central Government ಪಿಎಂ ವಿಶ್ವಕರ್ಮ ಯೋಜನೆ ವ್ಯಾಪ್ತಿಗೆ ಉಡುಪಿ, ದ.ಕ.

ಉಡುಪಿ: ಕೇಂದ್ರ ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉಡುಪಿ, ದ.ಕ. ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈಗ ವಿಸ್ತರಿಸಲಾಗಿದೆ. ಮೊದಲ ಹಂತದಲ್ಲಿ 18 ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಲಾಗಿದ್ದು, ಈಗ ಉಳಿದ 13 ಜಿಲ್ಲೆಗಳನ್ನು ಯೋಜನೆಯೊಳಗೆ ತರಲಾಗಿದೆ.

ಅವಿಭಜಿತದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳನ್ನು ಮೊದಲ ಹಂತದಲ್ಲಿ ಯೋಜನೆಯಡಿ ಆಯ್ಕೆ ಮಾಡಿಕೊಂಡಿರಲಿಲ್ಲ. ಎಲ್ಲ ಕುಶಲ ಕರ್ಮಿಗಳಿಗೂ ಅವಕಾಶ ಮಾಡಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದೆ.

ಪಾರಂಪರಿಕವಾಗಿ ನಡೆದು ಕೊಂಡು ಬರುತ್ತಿರುವ ಸುಮಾರು 18 ವೃತ್ತಿಗಳವರಿಗೆ ಕೌಶಲ ಮತ್ತು ಆರ್ಥಿಕ ಬಲ ನೀಡಿ ಅವರ ಜೀವನ ಮಟ್ಟ ಸುಧಾರಿಸುವ ಜತೆಗೆ ದೇಶದ ಆರ್ಥಿಕ ಪ್ರಗತಿಗೆ ಅನುಕೂಲವಾಗುವಂತೆ ಕೇಂದ್ರ ಸರಕಾರ ಯೋಜನೆ ರೂಪಿಸಿ ಅನುಷ್ಠಾನ ಮಾಡಿದೆ. ಇದರಲ್ಲಿ ಬಡಗಿಗಳು, ದೋಣಿ ತಯಾರಕರು, ಕುಲುಮೆ ಕೆಲಸಗಾರರು, ಕಮ್ಮಾರರು, ಬುಟ್ಟಿ-ಚಾಪೆ, ಬಾಸ್ಕೆಟ್‌ ನೇಯ್ಗೆಗಾರರು, ಅಕ್ಕಸಾಲಿಗರು, ಅಗಸರು, ಶಿಲ್ಪಿಗಳು, ಸಾಂಪ್ರದಾಯಿಕ ಗೊಂಬೆ ತಯಾರಕರು, ಕುಂಬಾರರು, ಚಮ್ಮಾರರು, ದರ್ಜಿಗಳು, ಕೇಶ ವಿನ್ಯಾಸಕರು, ಗಾರೆಗಾರರು, ಮಾಲೆ ತಯಾರಕರು, ಮೀನುಗಾರಿಕೆ ಬಲೆ ತಯಾರಕರನ್ನು ಸೇರಿಸಲಾಗಿದೆ.

ಪ್ರಕ್ರಿಯೆ ಹೇಗೆ?
ಆನ್‌ಲೈನ್‌ ಮೂಲಕ ಅರ್ಜಿ ಯನ್ನು ಆಹ್ವಾನಿಸಿದೆ. ಗ್ರಾ.ಪಂ. ಅಥವಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಾಮಾನ್ಯ ಸೇವಾ ಕೇಂದ್ರದ ಮೂಲಕ ಅರ್ಹ ಫ‌ಲಾನುಭವಿಗಳು ಅರ್ಜಿ ಸಲ್ಲಿಸ ಬಹುದು. ಸಲ್ಲಿಸಿದ ಅರ್ಜಿ ಯು ಗ್ರಾ.ಪಂ. ಅಧ್ಯಕ್ಷರು/ನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರ ಲಾಗಿನ್‌ಗೆ ಹೋಗುತ್ತದೆ. 18 ವೃತ್ತಿಯಲ್ಲಿ ಯಾವುದಾದರೂ ಒಂದರಲ್ಲಿ ಅವರು ಬರಲಿದೆಯೇ ಎಂಬುದನ್ನು ಖಚಿತಪಡಿಸಬೇಕು, ಅವರ ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ಖಚಿತಪಡಿಸಬೇಕು ಮತ್ತು ಆ ಕುಟುಂಬದಲ್ಲಿ ಯಾರು ಸರಕಾರಿ ನೌಕರರು ಇಲ್ಲದಿರುವ ಬಗ್ಗೆ ಅಧ್ಯಕ್ಷರು ಪರಿಶೀಲಸಿ ಅಂಗೀಕರಿಸಬೇಕು. ಅನಂತರ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಮಟ್ಟದ ಸಮಿತಿಗೆ ಬರಲಿದೆ. ಅಲ್ಲಿ, ಪರಿಶೀಲಿಸಿ ಅಂಗೀಕರಿಸಿ ರಾಜ್ಯ ಸಮಿತಿಗೆ ಕಳುಹಿಸಲಾಗುತ್ತದೆ. ರಾಜ್ಯಮಟ್ಟದ ಸಮಿತಿ ಅಂತಿಮಗೊಳಿಸಲಿದೆ.

ಮಾಹಿತಿಗಾಗಿ ಇಲ್ಲಿಗೆ ಸಂಪರ್ಕಿಸಿ
ಪಿಎಂ ವಿಶ್ವಕರ್ಮ ಯೋಜನೆಗೆ ಉಡುಪಿ, ದ.ಕ. ಜಿಲ್ಲೆಯ ಆಯ್ಕೆ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಇಲ್ಲಿ ಸ್ಥಳೀಯಾಡಳಿತದ ಅಧ್ಯಕ್ಷರ ಪಾತ್ರವು ಬಹುಮುಖ್ಯವಾಗಿರುತ್ತದೆ. ಮಾಹಿತಿಗೆ ದ.ಕ. ಜಿಲ್ಲಾ ಕೈಗಾರಿಕೆ ಕೇಂದ್ರದ ದೂ: 08242225071 ಹಾಗೂ ಉಡುಪಿ ಜಿಲ್ಲಾ ಕೈಗಾರಿಕೆ ಕೇಂದ್ರದ ದೂ: 08202575650 ಸಂಪರ್ಕಿಸಬಹುದು ಎಂದು ಉಭಯ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕರಾದ ಗೋಕುಲ್‌ದಾಸ್‌ ನಾಯಕ್‌(ದ.ಕ.), ನಾಗರಾಜ ವಿ. ನಾಯಕ್‌(ಉಡುಪಿ) ತಿಳಿಸಿದ್ದಾರೆ.

ಯೋಜನೆಯ ಉಪಯೋಗ
ನಿರ್ದಿಷ್ಟ ವೃತ್ತಿ ಮಾಡುತ್ತಿರುವವರಿಗೆ ಪ್ರಾರಂಭಿಕವಾಗಿ ಒಂದು ವಾರದ (40 ಗಂಟೆ) ಪ್ರಾಥಮಿಕ ಕೌಶಲ ತರಬೇತಿ ನೀಡಲಾಗುತ್ತದೆ. ಆಸಕ್ತರಿಗೆ ಎರಡು ವಾರಗಳ ತರಬೇತಿ ಪಡೆಯಲು ಅವಕಾಶವಿದೆ. ತರಬೇತಿ ಅವಧಿಯಲ್ಲಿ ದಿನಕ್ಕೆ 500 ರೂ.ಗಳಂತೆ ಭತ್ತೆ, ಅನಂತರ ವೃತ್ತಿಗೆ ಸಂಬಂಧಿಸಿದ ಸುಧಾರಿತ ಸಾಮಗ್ರಿ ಖರೀದಿಗೆ 15,000 ರೂ.ಗಳ ಅನುದಾನ ನೀಡಲಾಗುತ್ತದೆ. ತರಬೇತಿ ಮುಗಿಸಿದ ಬಳಿಕ ಸರಕಾರವು ಮೊದಲ ಹಂತದಲ್ಲಿ ಒಂದು ಲಕ್ಷ ರೂ. ಹಾಗೂ ಅದನ್ನು ಮರುಪಾವತಿಸಿದ ಬಳಿಕ ಎರಡನೇ ಹಂತದಲ್ಲಿ 2 ಲಕ್ಷ ರೂ. ಸಾಲವನ್ನು ಶೇ. 5ರ ಕಡಿಮೆ ಬಡ್ಡಿದರಲ್ಲಿ ಬ್ಯಾಂಕ್‌ಗಳ ಮೂಲಕ ಒದಗಿಸಲಿದೆ.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.