Fireworks: ಜಿಲ್ಲೆಯಲ್ಲಿ ಈ ಬಾರಿ ಪಟಾಕಿ ಸದ್ದು ಜೋರು!  


Team Udayavani, Nov 18, 2023, 3:13 PM IST

Fireworks: ಜಿಲ್ಲೆಯಲ್ಲಿ ಈ ಬಾರಿ ಪಟಾಕಿ ಸದ್ದು ಜೋರು!  

ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ ಆಚರಣೆ ಬಗ್ಗೆ ಹಲವು ಸಂಘ, ಸಂಸ್ಥೆಗಳು ಜನ ಜಾಗೃತಿ ಮೂಡಿಸುವುದರ ಜೊತೆಗೆ ಢಂಢಂ ಪಟಾಕಿ ಮಾರಾಟಕ್ಕೆ ಸರ್ಕಾರ ಹಲವು ಬಿಗಿ ಕ್ರಮಗಳನ್ನು ಕೈಗೊಂ ಡರೂ ಜಿಲ್ಲೆಯಲ್ಲಿ ಈ ಬಾರಿಯ ದೀಪಾವಳಿಯಂದು ನೆರೆಯ ಕೋಲಾರ ಬಿಟ್ಟರೆ ಚಿಕ್ಕ ಬಳ್ಳಾಪುರ ಅತ್ಯಧಿಕ ಶಬ್ದ ಮಾಲಿನ್ಯ ದಾಖ ಲಿಸಿದ ಅಪಕೀರ್ತಿಗೆ ಪಾತ್ರವಾಗಿದೆ.

ಹೌದು, ದೀಪಾವಳಿ ಹಬ್ಬದ ಆಸತತ ಮೂರು ದಿನಗಳ ಡೆಸಿಬಲ್‌ ಲೆಕ್ಕಚಾರದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಸಿ ಕ್ರೋಢೀಕರಿಸಿರುವ ಅಂಕಿ, ಅಂಶಗಳು ಉದಯವಾಣಿಗೆ ಲಭ್ಯವಾಗಿದು, ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಜಿಲ್ಲೆಯಲ್ಲಿ ಹೆಚ್ಚು ಶಬ್ದಮಾಲಿನ್ಯ ದಾಖಲಾಗಿರುವುದು ದೃಢಪಟ್ಟಿದೆ. ನ.13 ರಂದು ದೀಪಾವಳಿ ಹಬ್ಬದ ವೇಳೆ ಸಿಡಿಸಿದ ಪಟಾಕಿಗಳ ಶಬ್ದ ಮಾಲಿನ್ಯದಲ್ಲಿ ಇಡೀ ರಾಜ್ಯಕ್ಕೆ ನೆರೆಯ ಕೋಲಾರ ಪ್ರಥಮ ಸ್ಥಾನದಲ್ಲಿದ್ದರೆ ಚಿಕ್ಕಬಳ್ಳಾಪುರ ಜಿಲ್ಲೆಯು ನ.13 ರಂದು ಎರಡನೇ ಸ್ಥಾನದಲ್ಲಿದೆ. ಇನ್ನೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲೆಯ ಜನ ವಸತಿ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದಂದು ಉಂಟಾದ ಶಬ್ದವನ್ನು ಅಳತೆ ಮಾಡುವ ನಿಟ್ಟಿನಲ್ಲಿ ತನ್ನ ಶಬ್ದ ಮಾಪನ ಘಟಕದಲ್ಲಿ ದಾಖಲಾಗಿರುವ ಪ್ರಕಾರ 45 ರಿಂದ 55 ರಷ್ಟು ಇರಬೇಕಿದ್ದ ಡೆಸಿಬಲ್‌ ದೀಪಾವಳಿ ಹಬ್ಬದ ಆಚರಿಸಿದ ನ.11 ರಿಂದ 13ರ ವರೆಗೂ ಮೂರು ದಿನಗಳ ಕಾಲ ಸರಾಸರಿ ಬರೋಬ್ಬರಿ 74.8ರಷ್ಟು ಡೆಸಿಬಲ್‌ ದಾಖಲಾಗಿದೆ.

ಕಳೆದ ವರ್ಷದ (2022) ದೀಪಾವಳಿ ಹಬ್ಬದಂದು ಡೆಸಿಬಲ್‌ ಕೇವಲ 56.8 ರಷ್ಟು ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.18 ರಷ್ಟು ಶಬ್ದ ಮಾಲಿನ್ಯ ಹೆಚ್ಚಳ ಕಂಡಿದೆ. ಠುಸ್‌ ಆದ ಹಸಿರು ಪಟಾಕಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಾಯು ಮಾಲಿನ್ಯದಲ್ಲಿ ತುಸು ಕಡಿಮೆಯಾದರೂ ಶಬ್ದ ಮಾಲಿನ್ಯದಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಆದರೆ ಜಿಲ್ಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ದಿಕ್ಕಿನಲ್ಲಿ ಹಲವು ಸಂಘ, ಸಂಸ್ಥಗಳು, ಜಿಲ್ಲಾಡಳಿತ ಹಲವು ಕ್ರಮಗಳನ್ನು ವಹಿಸುವು ದರ ಜೊತೆಗೆ ಹಸಿರು ಪಟಾಕಿಗಳ ಮಾರಾಟಕ್ಕೆ ಆದೇಶಿಸಿ ದರೂ, ಜಿಲ್ಲೆಯಲ್ಲಿ ಮಾರ್ಗಸೂಚಿಗಳು ಸಮರ್ಪ ಕವಾಗಿ ಅನುಷ್ಠಾಗೊಳಿಸದಿರುವುದು ಎದ್ದು ಕಾಣುತ್ತಿದೆ.

ದೀಪಾವಳಿ ಆಚರಿಸಿದ 3 ದಿನಗಳ ಡೆಸಿಬಲ್‌ ವಿವರ: ಕಳೆದ ವರ್ಷ ನ.12 ರಂದು 54.3 ರಷ್ಟಿದ್ದ ಡೆಸಿಬಲ್‌ 2023 ರ ನ,12 ರಂದು 68.0 ರಷ್ಟು ದಾಖಲಾದರೆ 2022 ರ ನ.13 ರಂದು 54.9 ರಷ್ಟು ದಾಖಲಾಗಿದ್ದ ಡೆಸಿಬಲ್‌ 2023ರ ನ.13 ರಂದು 77.1ರಷ್ಟು ದಾಖಲಾಗಿದೆ. 2022 ರ ನ.14 ರಂದು 59.3 ರಷ್ಟಿದ್ದ ಡೆಸಿಬಲ್‌ 2023ರ ನ.14 ರಂದು 75.2 ರಷ್ಟು ದಾಖಲಾಗೊಂಡಿದೆಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೀಪಾವಳಿ ಹಬ್ಬದ ಮೂರು ದಿನಗಳ ಸಂದರ್ಭದಲ್ಲಿ ತನ್ನ ಶಬ್ದ ಮಾಲಿನ್ಯ ಮಾಪನ ಘಟಕದಲ್ಲಿ ದಾಖಲಾಗಿರುವ ಶಬ್ದಮಾಲಿನ್ಯ ಡೆಸಿಬಲ್‌ ವಿವರಗಳನ್ನು ಕ್ರೋಢೀಕರಿಸಿ ಪ್ರಕಟಿಸಿರುವ ವಿವರದಲ್ಲಿ ಸ್ಪಷ್ಟಪಡಿಸಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ದೀಪಾವಳಿ ಹಬ್ಬದಂದು ವಾಯು ಮಾಲಿನ್ಯ ಈ ವರ್ಷ ಸ್ವಲ್ಪ ಕಡಿಮೆ ಆಗಿದೆ. ಆದರೆ ಶಬ್ದ ಮಾಲಿನ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಶಬ್ದ ಮಾಲಿನ್ಯ ಹಬ್ಬದ ಮೂರು ದಿನಗಳಂದು ದಾಖಲಾಗಿದೆ. – ಸಿದ್ದೇಶ್ವರ್‌, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ, ಪ್ರಾದೇಶಿಕ ಕಚೇರಿ ಚಿಕ್ಕಬಳ್ಳಾಪುರ. 

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.