Teachers ಕೊರತೆ ನೀಗಿಸಿದಲ್ಲಿ ಮಕ್ಕಳ ಭವಿಷ್ಯ ಸುಭದ್ರ: ಡಾ| ಹೆಗ್ಗಡೆ

ಬೆಂಗಳೂರು, ಮೈಸೂರು ವಿಭಾಗ ಮಟ್ಟದ ಚಿಂತನ ಮಂಥನ

Team Udayavani, Nov 20, 2023, 12:36 AM IST

Teachers ಕೊರತೆ ನೀಗಿಸಿದಲ್ಲಿ ಮಕ್ಕಳ ಭವಿಷ್ಯ ಸುಭದ್ರ: ಡಾ| ಹೆಗ್ಗಡೆ

ಬೆಳ್ತಂಗಡಿ: ಅನುದಾನಿತ ಶಾಲೆಗಳ ಕಟ್ಟಡ, ಮೂಲಸೌಕರ್ಯ ಕೊರತೆ ತುಂಬಿಕೊಡಲು ಸಂಬಂಧಪಟ್ಟ ಸಂಸ್ಥೆಗಳು ಸಿದ್ಧವಿದೆ. ಆದರೆ ಸರಕಾರವೂ ಗಮನಹರಿಸಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷರ ನೇಮಕಕ್ಕೆ ಮುಂದಾಗಬೇಕಿದೆ. ಶಿಕ್ಷಕರಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವ ಮೂಲಕ ಮಕ್ಕಳ ಭವಿಷ್ಯ ಸುಭದ್ರಗೊಳಿಸುವ ಹೊಣೆಗಾರಿಕೆಯನ್ನು ಮನಗಾಣಬೇಕಿದೆ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಇಲ್ಲಿನ ಅಮೃತವರ್ಷಿಣಿ ಸಭಾಭವನ ದಲ್ಲಿ ನ. 19ರಂದು ರಾಜ್ಯ ಅನು ದಾನಿತ ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ದ.ಕ.ಜಿಲ್ಲಾ ಸಮಿತಿವತಿಯಿಂದ ಹಮ್ಮಿಕೊಂಡ ಬೆಂಗಳೂರುಮತ್ತು ಮೈಸೂರು ವಿಭಾಗ ಮಟ್ಟದ
ಚಿಂತನ-ಮಂಥನ, ನಿವೃತ್ತ ಪದಾಧಿಕಾರಿ ಗಳ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳು ಮುಚ್ಚುತ್ತ ಬಂದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಈ ನೆಲೆಯಲ್ಲಿ ಮಠ, ಮಂದಿರ, ಚರ್ಚ್‌, ಮಸೀದಿಗಳು ನಡೆಸುತ್ತಿರುವ ಅನುದಾನಿತ ಶಾಲೆಗಳು ಕಟ್ಟಡ ನಿರ್ಮಾಣ ಸಹಿತ ನೇಮಕಾತಿಯಲ್ಲಿ ಅನುಕೂಲ ಕಲ್ಪಿಸಿಕೊಡುತ್ತಿವೆ. ಶಿಕ್ಷಕರ ನೇಮಕಾತಿ ಬಗ್ಗೆ ಸರಕಾರ ಈ ಕೂಡಲೆ ಮುತುವರ್ಜಿ ವಹಿಸಬೇಕು, ಈ ಕುರಿತು ಸರಕಾರದ ಗಮನ ಸೆಳೆಯಲು ಪ್ರಯತ್ನಿಸುವೆ ಎಂದರು.

ಕರ್ನಾಟಕ ರಾಜ್ಯ ಅನುದಾನಿತ ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗೋಪಾಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ನೇಮಕಾತಿ ಇಲ್ಲವೇ ಗೌರವ ಶಿಕ್ಷಕರನ್ನು ನೀಡಬೇಕು. ಶಿಕ್ಷಕರಿಗೆ ವೈದ್ಯಕೀಯ ಭತ್ತೆ ಸೇರಿ ಹಲವಾರು ಬೇಡಿಕೆಗಳನ್ನು ಸರಕಾರ ಈಡೇರಿಸಬೇಕಿದೆ ಎಂದು ಅಗ್ರಹಿಸಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜು ಅವರು ಅನುದಾನಿತ ಶಾಲೆಗಳು ಹಾಗೂ ಶಿಕ್ಷಕರ ಸಮಸ್ಯೆ ಗಳನ್ನು ಶೀಘ್ರವಾಗಿ ಈಡೇರಿಸ ಬೇಕೆಂಬ ಮನವಿ ಪತ್ರವನ್ನು ಡಾ| ಹೆಗ್ಗಡೆಯವರ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ಸಂಘದ ನಿಕಟಪೂರ್ವ ಅಧ್ಯಕ್ಷ ಡಾ| ಹನುಮಂತಪ್ಪ, ಕಾರ್ಯದರ್ಶಿ ಟಿ. ರವಿಕುಮಾರ್‌, ರಾಜ್ಯ ಉಪಾಧ್ಯಕ್ಷ ಮುತ್ತಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜು, ಜಿಲ್ಲಾ ಕೋಶಾಧಿಕಾರಿ ಶಶಿಕಾಂತ್‌ ಜೈನ್‌, ಮೈಸೂರು ವಿಭಾಗೀಯ ಕಾರ್ಯದರ್ಶಿ ಅರುಣ್‌ ಕುಮಾರ್‌ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಎಚ್‌.ಎನ್‌.ರಮೇಶ್‌ ಹಾಗೂ ಬೆಳ್ತಂಗಡಿ ಬಿಇಒ ತಾರಕೇಸರಿ ಭಾಗವಹಿಸಿದರು.

ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ದ.ಕ.ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ರಾವ್‌ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಆಲ್ವಿನ್‌ ಲ್ಯಾನ್ಸಿ ರೋಡ್ರಿಗಸ್‌ ನಿರೂಪಿಸಿದರು.

ಸರಕಾರಿ ಶಾಲೆಗಳ ಪೋಷಿಸುವ ಸಲುವಾಗಿ ವರ್ಷಕ್ಕೆ 300 ಗೌರವ ಶಿಕ್ಷಕರನ್ನು ನೀಡುವ ಕಾರ್ಯ ಧರ್ಮಸ್ಥಳದಿಂದಾಗುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳ ಉಳಿಸಿ, ಪ್ರೋತ್ಸಾಹಿಸುವ ನೆಲೆಯಲ್ಲಿ ಕ್ಷೇತ್ರದಿಂದ ವರ್ಷಕ್ಕೆ 3 ಕೋ.ರೂ. ಸಹಾಯಧನದ ಮೂಲಕ ಪೀಠೊಪಕರಣ ಅಗತ್ಯತೆಗಳನ್ನು ಪೂರೈಸಲಾಗುತ್ತಿದೆ ಎಂದು ಡಾ| ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.