Kidnapping: ಹಣಕ್ಕಾಗಿ ಕಿಡ್ನಾಪ್‌; ಪಿಎಸ್‌ಐ, ಪೇದೆ ಸೇರಿ ನಾಲ್ವರ ಸೆರೆ


Team Udayavani, Nov 21, 2023, 1:49 PM IST

Kidnapping: ಹಣಕ್ಕಾಗಿ ಕಿಡ್ನಾಪ್‌; ಪಿಎಸ್‌ಐ, ಪೇದೆ ಸೇರಿ ನಾಲ್ವರ ಸೆರೆ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಖಾಸಗಿ ಕಂಪನಿ ಉದ್ಯೋಗಿಯನ್ನು ಅಪಹರಿಸಿ ಸುಲಿಗೆ ಮಾಡಲು ಆರೋಪಿಗಳಿಗೆ ಸಹಕಾರ ನೀಡಿದ ಆರೋಪದಲ್ಲಿ ಪ್ರೊಬೇಷನರಿ ಪಿಎಸ್‌ಐ, ಕಾನ್‌ ಸ್ಟೇಬಲ್‌ ಸೇರಿ ನಾಲ್ವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಮಡಿವಾಳ ಪೊಲೀಸ್‌ ಠಾಣೆಯ ಪ್ರೊಬೇಷನರಿ ಪಿಎಸ್‌ಐ ಸಿದ್ಧಾರೂಢ ಬಿಜ್ಜಣ್ಣನವರ, ಕಾನ್‌ಸ್ಟೆàಬಲ್‌ ಅಲ್ಲಾಭಕ್ಷ್ ಕರಜಗಿ, ಗೃಹ ರಕ್ಷಕ ದಳದ ಮಾಜಿ ಸಿಬ್ಬಂದಿ ರಾಜ್‌ ಕಿಶೋರ್‌ ಹಾಗೂ ಬೂತಪಲ್ಲಿ ನಿವಾಸಿ ದಿನೇಶ್‌ ಬಂಧಿತರು. ಆರೋಪಿಗಳಿಂದ 20 ಲಕ್ಷ ರೂ. ನಗದು ಹಾಗೂ ಕ್ರಿಪ್ಟೋ ಕರೆನ್ಸಿಯನ್ನು ವಶಕ್ಕೆ ಪಡೆಯಲಾಗಿದೆ. ‌

ಬಂಧಿತರು 2022ರ ಜು.7ರಂದು ಖಾಸಗಿ ಕಂಪನಿ ಉದ್ಯೋಗಿ ಕಾರ್ತಿಕ್‌ ಎಂಬಾತನನ್ನು ಅಪಹರಿಸಿದ್ದರು. ಪೋಲೆಂಡ್‌ ಮತ್ತು ಉಕ್ರೇನ್‌ನಲ್ಲಿರುವ ಅಂತಾರಾಷ್ಟ್ರೀಯ ಡಿಜಿಟಲ್‌ ಮಾರ್ಕೆಟಿಂಗ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಚ್‌ ಎಸ್‌ಆರ್‌ ಲೇಔಟ್‌ ನಿವಾಸಿ ಕಾರ್ತಿಕ್‌ಗೆ ವಿದೇಶಿ ಕಂಪನಿಗಳು ಯುಎಸ್‌ಡಿಟಿ ಮೂಲಕ ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಮಾಡುತ್ತಿದ್ದವು. ಅವುಗಳನ್ನು ಕಾರ್ತಿಕ್‌ ಸ್ನೇಹಿತ ವಂಶಿಕೃಷ್ಣ ಭಾರತೀಯ ರೂಪಾಯಿಗೆ ಬದಲಾಯಿಸಿ ಕಮಿಷನ್‌ ಪಡೆಯುತ್ತಿದ್ದ. ಆದರೆ, ಕಾರ್ತಿಕ್‌ ಬಳಿ ಲಕ್ಷಾಂತರ ರೂ. ಕ್ರಿಪ್ಟೋ ಕರೆನ್ಸಿಗಳು ಬರುತ್ತಿದ್ದರಿಂದ ಹಣದ ಆಸೆಗೆ ಬಿದ್ದ ವಂಶಿಕೃಷ್ಣ, ತನ್ನ ಸ್ನೇಹಿತರಾದ ವಿನೋದ್‌ ನಾಯಕ್‌, ಕಿರಣ್‌ ಹಾಗೂ ಇತರರ ಮೂಲಕ 2022ರ ಜು. 7ರಂದು ಕಾರ್ತಿಕ್‌ ನನ್ನು ಅಪಹರಿಸಿದ್ದರು. ‌

ಈ ವಿಚಾರವನ್ನು ಪ್ರೊಬೇಷನರಿ ಪಿಎಸ್‌ಐ ಸಿದ್ಧಾರೂಢಗೆ ತಿಳಿಸಿದ ಆರೋಪಿ ಗಳು ಪ್ರಕರಣದಲ್ಲಿ ಸಹಕಾರ ನೀಡುವಂತೆ ಕೋರಿದ್ದರು. ಹಣದ ಆಸೆಗೆ ಬಿದ್ದ ಸಿದ್ಧಾರೂಢ, ಕಾನ್‌ ಸ್ಟೇಬಲ್‌ ಅಲ್ಲಾಭಕ್ಷ್ ಕರಜಗಿ, ಕಾರ್ತಿಕ್‌, ಅಪಹರಣಕ್ಕೊಳಗಾದ ಕಾರ್ತಿಕ್‌ಗೆ ಕರೆ ಮಾಡಿ ತಾವು ಹೇಳಿದಂತೆ ಕೇಳಬೇಕು. ಇಲ್ಲವಾದರೆ, ಎನ್‌ಡಿಪಿಎಸ್‌ ಕಾಯ್ದೆ ಅಡಿ ಕೇಸ್‌ ದಾಖಲಿಸುತ್ತೇವೆ ಎಂದು ಬೆದರಿಕೆಯೊಡ್ಡಿದ್ದರು. ಬಳಿಕ ಆರೋಪಿಗಳು ಕಾರ್ತಿಕ್‌ನ ಕ್ರಿಪ್ಟೋ ವ್ಯಾಲೆಟ್‌ನಲ್ಲಿದ್ದ 1.56 ಕೋಟಿ ರೂ. ಮೌಲ್ಯದ ಕ್ರಿಪ್ಟೋ ಕರೆನ್ಸಿ ಮತ್ತು 20 ಲಕ್ಷ ರೂ. ನಗದನ್ನು ತಮ್ಮ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದರು. ಆ ಬಳಿಕ 60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅಪಹರಣ ವಿಚಾರ ಪೊಲೀಸರಿಗೆ ಗೊತ್ತಾಗಲಿದೆ ಎಂಬ ಭಯದಲ್ಲಿ ಕಾರ್ತಿಕ್‌ ನನ್ನು ಬಿಟ್ಟು ಕಳುಹಿಸಿದ್ದರು. ನಂತರ ಈ ಸಂಬಂಧ ಕಾರ್ತಿಕ್‌ ಕಾಡುಗೊಂಡನಹಳ್ಳಿ ಠಾಣೆಗೆ ದೂರು ನೀಡಿದ್ದರು.

ಈ ವಿಚಾರ ತಿಳಿದ ವಂಶಿಕೃಷ್ಣ, ವಿನೋದ್‌ ನಾಯಕ್‌, ಕಿರಣ್‌ ಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಕಾಡುಗೊಂಡನಹಳ್ಳಿ ಪೊಲೀಸರ ತನಿಖೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು, ಕಾರ್ತಿಕ್‌ ಅಪಹರಣಕ್ಕೆ ಆರೋಪಿಗಳಿಗೆ ನೇರವಾಗಿಯೇ ಸಹಕಾರ ನೀಡಿ, ಹಣ ಸುಲಿಗೆ ಮಾಡಿದ ಆರೋಪದಡಿ ಪಿಎಸ್‌ಐ, ಕಾನ್‌ ಸ್ಟೇಬಲ್‌, ಹೋಮ್‌ಗಾರ್ಡ್‌ ಸೇರಿ ನಾಲ್ವರನ್ನು ಬಂಧಿಸಿದ್ದಾರೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

 

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.