Loan: ಸಾಲ ತೀರಿಸದಕ್ಕೆ ಮನೆಗೆ ಬೀಗ ಜಡಿದು ಮಹಿಳೆ ಹೊರದಬ್ಬಿದ ಬ್ಯಾಂಕ್‌ !


Team Udayavani, Nov 24, 2023, 2:23 PM IST

tdy-11

ಆಲೂರು: ಬ್ಯಾಂಕ್‌ ಸಾಲ ತೀರಿಸದ ಅರೋಪ ಹೊತ್ತಿದ್ದ ಒಂಟಿ ಮಹಿಳೆಯನ್ನ ಬ್ಯಾಂಕ್‌ ನವರು ಮನೆಯಿಂದ ಹೊರಗೆ ಹಾಕಿರೋ ಪ್ರಕರಣ ಕಾರಗೋಡು ಗ್ರಾಮದಲ್ಲಿ ನಡೆದಿದೆ.

ಕನಿಷ್ಠ ಮಾನವೀಯತೆಯನ್ನೂ ಮರೆತು ಒಂಟಿ ಮಹಿಳೆ ಪಾರ್ವತಮ್ಮಳನ್ನು ಮನೆಯಿಂದ ಹೊರ ಹಾಕಿರುವ ಬ್ಯಾಂಕ್‌ ಸಿಬ್ಬಂದಿಗಳ ಕಾರ್ಯದ ಬಗ್ಗೆ ಮಹಿಳೆ ಕಣ್ಣೀರು ಶಾಪ ಹಾಕುತ್ತಾ ಆಹಾರ ವಿಲ್ಲದೆ ಮನೆ ಹೊರಗೆ ಇದ್ದಾರೆ. ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ಸೇರಿಸಿ ಬ್ಯಾಂಕ್‌ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಕನಿಷ್ಠ ದನದ ಕೊಟ್ಟಿಗೆ ಬಿಡಿ ಎಂದರೂ ಬಿಡದೆ ಬೀಗ ಜಡಿದಿದ್ದಾರೆ.

ಪತಿಯಿಂದ ದೂರವಾಗಿದ್ದ ಪಾರ್ವತಮ್ಮ ತನ್ನ ಪಾಲಿನ ಆಸ್ತಿಯನ್ನು ಸಂಬಂಧಿಕ ರಾಯರ ಕೊಪ್ಪಲು ಗ್ರಾಮದ ರುದ್ರಪ್ಪ ಎಂಬುವವರಿಗೆ ಬರೆದಿದ್ದರು. ಇದರ ಬದಲಿಗೆ ರಾಯರಕೊಪ್ಪಲು ಗ್ರಾಮದಲ್ಲಿ ಮನೆ ಬರೆದುಕೊಡುವ ತೀರ್ಮಾನವಾಗಿತ್ತು. ರುದ್ರಪ್ಪ ಅದೇ ಜಮೀನಿನ ಮೇಲೆ 10 ಲಕ್ಷ ರೂ.ಸಾಲ ಪಡೆದಿದ್ದರು.

ಸಾಲ ತೀರಿಸದೆ ಇದ್ದುದರಿಂದ ರಾಯರಕೊಪ್ಪಲು ಕೆನರಾ ಬ್ಯಾಂಕ್‌ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದು ಮನೆಯನ್ನು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ ಎಂದು ತಿಳಿದು ಬಂದಿದೆ.

ವೃದ್ಧೆ ಪಾರ್ವತಮ್ಮ ಮಾತನಾಡಿ, ಕಾರಗೋಡು ಗ್ರಾಮದ ರುದ್ರಪ್ಪ ಎಂಬುವವರು ನಮಗೆ ಹತ್ತಿರದ ಸಂಬಂಧಿಕರಾಗಿದ್ದು, ಕಷ್ಟ-ಸುಖಗಳಿಗೆ ಸ್ಪಂದಿಸುವ ನಾಟಕವಾಡಿ ಹಣ ನೀಡದೇ ನಮ್ಮಿಂದ ಮೋಸ ಮಾಡಿ ಜಮೀನು ಬರೆಸಿಕೊಂಡ ನಂತರ ರಾಯರಕೊಪ್ಪಲು ಗ್ರಾಮದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಜಮೀನಿನ ಮೇಲೆ 10 ಲಕ್ಷ ರೂ ಸಾಲ ಪಡೆದು ಸಾಲ ತೀರಿಸದೇ ಸಾಲದ ಮೊತ್ತ ಸುಮಾರು 45 ಲಕ್ಷ ರೂ.ಗೆ ಹೇರಿದೆ.

ಬ್ಯಾಂಕ್‌ ನವರು ಏಕಾಏಕಿ ಬಂದು ನಮ್ಮನ್ನು ಹೊರಗಿಟ್ಟು ಮನೆ ಹಾಗೂ ದನ ಕಟ್ಟುವ ಕೊಟ್ಟಿಗೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ದನ-ಕರುಗಳು ಹೊರಗಡೆ ಇದ್ದು ರಾತ್ರಿಯಾದರೆ ಕಾಡಾನೆಗಳು ಮನೆ ಸುತ್ತಾ ಓಡಾಡುತ್ತವೆ. ಈ ಇಳಿ ವಯಸ್ಸಿನಲ್ಲಿ ನನ್ನ ಬದುಕು ಬೀದಿಗೆ ಬಿದ್ದಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಮೋಸ ಮಾಡಿ ಜಮೀನು ಬರೆಸಿಕೊಂಡಿಲ್ಲ 9.5ಲಕ್ಷಕ್ಕೆ ಜಮೀನು ಕೊಂಡುಕೊಂಡಿದ್ದೇನೆ. ನಾನು ಹನ್ನೆರಡು ವರ್ಷಗಳ ಹಿಂದೆ 7.5 ಎಕರೆ ಜಮೀನಿಗೆ 9.5 ಲಕ್ಷ ರೂ ಹಣ ನೀಡಿ ಜಮೀನು ಕೊಂಡು ಕೊಂಡಿದ್ದೇನೆ ಅದರೆ, ಪಾರ್ವತಮ್ಮ ತಂಗಿಯ ಮೂಲಕ ತಕರಾರು ತಗೆದು ಪುನಃ 2 ವರೆ ಎಕರೆ ಜಮೀನು ಪಡೆದಿದ್ದಾರೆ. ಉಳಿದಿರುವ ಜಮೀನಿನ ಮೇಲೆ ಕೆನರಾ ಬ್ಯಾಂಕ್‌ನಲ್ಲಿ ಸಾಲವನ್ನು ಪಡೆ ದಿದ್ದೇನೆ. ಅದರೆ, ಜಮೀನು ನೀಡಿದ ಪಾರ್ವತಮ್ಮ ತನ್ನ ತಂಗಿ ಮೂಲಕ ಪುನಃ ಉಳಿದ ಜಮೀನಿನ ಮೇಲೆ ಕೋರ್ಟ್‌ ಗೆ. ನಾವು 10 ವರ್ಷಗಳಿಂದ ಕೈಯಲ್ಲಿದ್ದ ಹಣ ಕಳೆದುಕೊಂಡು ಕೋರ್ಟ್‌ ಸುತ್ತಿದ್ದೇನೆ. ಈಗ ಈ ಜಮೀನಿಗಾಗಿ ಸಾಲ ಮಾಡಿಕೊಂಡಿದ್ದೇನೆ. ಬ್ಯಾಂಕ್‌ ನವರು ಜಮೀ ನನ್ನು 66ಲಕ್ಷ ರೂ.ಗೆ ಹರಾಜು ಮಾಡಿದ್ದಾರೆ. 45 ಲಕ್ಷ ತಿರುವಳಿ ಮಾಡಿಕೊಂಡು ಉಳಿದ ಹಣವನ್ನು ನಮಗೆ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.