L2E – Empuraan: ಮೋಹನ್ ಲಾಲ್ ʼಲೂಸಿಫರ್ -2ʼ ನಲ್ಲಿ ಪಾಕ್ ನಟಿ ಮಹಿರಾ ಖಾನ್ ನಾಯಕಿ?
Team Udayavani, Nov 27, 2023, 5:10 PM IST
ಕೊಚ್ಚಿ: ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಲೂಸಿಫರ್- ಎಂಪುರಾನ್ʼ (ಲೂಸಿಫರ್ -2) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸಟ್ಟೇರಿದ ದಿನದಿಂದ ಸುದ್ದಿಯಾಗಿರುವ ಸಿನಿಮಾ ಇದೀಗ ನಾಯಕಿ ಆಯ್ಕೆಯ ವಿಚಾರದಲ್ಲಿ ಸದ್ದು ಮಾಡುತ್ತಿದೆ.
ಇತ್ತೀಚೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿತ್ತು.ʼಲೂಸಿಫರ್ʼನಲ್ಲಿ(ಪಾರ್ಟ್ -1 ನಲ್ಲಿ) ಮೋಹನ್ಲಾಲ್ ಸ್ಟೀಫನ್ ನೆಡುಂಪಲ್ಲಿ ಎಂಬ ರಾಜಕಾರಣಿಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದ ಕಥೆಯಲ್ಲಿ ನಡೆಯುವ ಕೆಲ ಘಟನೆಗಳ ಬಳಿಕ ಸ್ಟೀಫನ್ ನೆಡುಂಪಲ್ಲಿ ಪಾತ್ರಕ್ಕೆ ಖುರೇಷಿ ಅಬ್ರಾಮ್ ಎನ್ನುವ ಹೆಸರು ಕೂಡ ಇರುವುದು ಗೊತ್ತಾಗುತ್ತದೆ. ಇದೇ ಪಾತ್ರದ ಸುತ್ತ ಎರಡನೇ ಭಾಗದ ಕಥೆ ಸಾಗಲಿದೆ.
ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಆದರೆ ಇದುವರೆಗೆ ಸಿನಿಮಾದಲ್ಲಿನ ಪಾತ್ರವರ್ಗದ ಬಗ್ಗೆ ಅಷ್ಟಾಗಿ ಮಾಹಿತಿ ಹೊರಬಿದ್ದಿಲ್ಲ. ಇದೀಗ ಸಿನಿಮಾದ ನಾಯಕಿಯ ಸುತ್ತ ಗಾಸಿಪ್ ಹಬ್ಬಿದೆ. ಮೋಹನ್ ಲಾಲ್ ಸಿನಿಮಾದಲ್ಲಿ ಪಾಕಿಸ್ತಾನದ ಖ್ಯಾತ ನಟಿಯೊಬ್ಬರು ಬಣ್ಣ ಹಚ್ಚಲಿದ್ದಾರೆ ಎನ್ನುವ ವರದಿಯೊಂದು ಹೊರಬಿದ್ದಿದೆ.
ಈಗಾಗಲೇ ಬಾಲಿವುಡ್ ಸಿನಿಮಾರಂಗದಲ್ಲಿಯೂ (ರಯೀಸ್ – ಸಿನಿಮಾ) ತನ್ನ ನಟನೆ ಮೂಲಕ ಹೆಸರು ಮಾಡಿರುವ ಪಾಕಿಸ್ತಾನದ ಖ್ಯಾತ ನಟಿ ಮಹಿರಾ ಖಾನ್ ʼಲೂಸಿಫರ್ -2ʼ ನಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲ ಪೋಸ್ಟರ್ ಗಳು ಹರಿದಾಡುತ್ತಿದೆ. ಆದರೆ ಸಿನಿಮಾ ತಂಡದಿಂದ ಇದುವರೆಗೆ ಅಧಿಕೃತವಾಗಿ ಎಲ್ಲೂ ಕೂಡ ಮಾಹಿತಿ ಹೊರಬಿದ್ದಿಲ್ಲ.
ಪೃಥಿರಾಜ್ ಸುಕುಮಾರನ್ ನಿರ್ದೇಶನದ ಮಲಯಾಳಂ , ತಮಿಳು ,ತೆಲುಗು, ಕನ್ನಡ ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.
ಅಂದಹಾಗೆ 2016 ರಲ್ಲಿ ಉರಿ ದಾಳಿಯ ನಂತರ ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘವು (ಐಎಂಪಿಪಿಎ) ಪಾಕಿಸ್ತಾನದ ಕಲಾವಿದರಿಗೆ ಭಾರತದ ಸಿನಿಮಾರಂಗದಲ್ಲಿ ನಟಿಸಲು ನಿಷೇಧ ಹೇರಿತ್ತು. ಆದರೆ ಇತ್ತೀಚೆಗೆ ಪಾಕಿಸ್ತಾನದ ಕಲಾವಿದರು, ಹಾಡುಗಾರರು, ಸಂಗೀತಗಾರರು, ಸಿನಿಮಾ ಬರಹಗಾರರು ಮತ್ತು ಟೆಕ್ನಿಷಿಯನ್ಗಳನ್ನು ಸಂಪೂರ್ಣವಾಗಿ ಭಾರತದಲ್ಲಿ ನಿಷೇಧಿಸಬೇಕು, ಭಾರತದ ಸಿನಿಮಾ ಕಂಪನಿಗಳು ಪಾಕ್ ಕಲಾವಿದರೊಂದಿಗೆ, ಗಾಯಕರೊಂದಿಗೆ ಸಹಭಾಗಿತ್ವ ಮಾಡಿಕೊಳ್ಳದಂತೆ ನಿಷೇಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು.
ಇತ್ತೀಚೆಗೆ ಮಹಿರಾ ಖಾನ್ ಅವರು ಎರಡನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cannes Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು
ಹೃದಯ ಸಂಬಂಧಿ ಕಾಯಿಲೆ: ಬಿಗ್ ಬಾಸ್ ಖ್ಯಾತಿ, ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು
Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್ನ ಬಜೆಟ್ಟೇ 835 ಕೋಟಿ ರೂ.
Bollywood: ಜೂನ್ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್ ಭರಾಟೆ
Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್ ʼಬಾರ್ಡರ್ -2ʼ ರಿಲೀಸ್?
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್