Gujarat ; ಸಿಡಿಲಿಗೆ 20 ಮಂದಿ ಮೃತ್ಯು: ಅಮಿತ್ ಶಾ ಸಂತಾಪ
Team Udayavani, Nov 27, 2023, 5:40 PM IST
ಅಹ್ಮದಾಬಾದ್ : ಗುಜರಾತ್ ನಲ್ಲಿ ಅಕಾಲಿಕವಾಗಿ ಸಿಡಿಲಿನ ಆರ್ಭಟದೊಂದಿಗೆ ಸುರಿದ ವ್ಯಾಪಕ ಮಳೆಯ ಸಂದರ್ಭದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಗುಜರಾತ್ನ ವಿವಿಧ ಭಾಗಗಳಲ್ಲಿ ಸಿಡಿಲು ಬಡಿದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ದಾಹೋದ್ ಜಿಲ್ಲೆಯಲ್ಲಿ ನಾಲ್ವರು, ಭರೂಚ್ನಲ್ಲಿ ಮೂವರು, ತಾಪಿಯಲ್ಲಿ ಇಬ್ಬರು ಮತ್ತು ಅಹಮದಾಬಾದ್, ಅಮ್ರೇಲಿ, ಬನಸ್ಕಾಂತ, ಬೊಟಾಡ್, ಖೇಡಾ, ಮೆಹ್ಸಾನಾ, ಪಂಚಮಹಲ್, ಸಬರ್ಕಾಂತ, ಸೂರತ್, ಸುರೇಂದ್ರನಗರ ಮತ್ತು ದೇವಭೂಮಿ ದ್ವಾರಕಾದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಎಸ್ಇಒಸಿ ಅಧಿಕಾರಿ ತಿಳಿಸಿದ್ದಾರೆ.
IMD ಅಹಮದಾಬಾದ್ ಕೇಂದ್ರದ ನಿರ್ದೇಶಕಿ ಮನೋರಮಾ ಮೊಹಂತಿ ಅವರು ಸೋಮವಾರ ಮಳೆ ಕಡಿಮೆಯಾಗಲಿದ್ದು, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಕೇಂದ್ರೀಕೃತವಾಗಿರಲಿದೆ. ಈಶಾನ್ಯ ಅರಬ್ಬಿ ಸಮುದ್ರ ಮತ್ತು ಪಕ್ಕದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯಾಗುತ್ತಿದೆ ಎಂದು ತಿಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದು, ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!