ಶತಮಾನ ಕಂಡ ಶಾಲಾವರಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ವ್ಯಾಪಕ ವಿರೋಧ


Team Udayavani, Nov 27, 2023, 11:15 PM IST

1-sadsad

ಚಾಮರಾಜನಗರ: ನಗರದ ಶತಮಾನ ಕಂಡ ಸರ್ಕಾರಿ ಶಾಲೆಯಾದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ನಗರಸಭೆ ಮುಂದಾಗಿದ್ದು, ಸಾಹಿತಿಗಳು, ಚಿಂತಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಪೇಟೆ ಪ್ರೈಮರಿ ಶಾಲೆ 118 ವರ್ಷ ಹಳೆಯದಾಗಿದ್ದು, ಪಾರಂಪರಿಕ ಕಟ್ಟಡವನ್ನು ಹೊಂದಿದೆ.1 ರಿಂದ 7ನೇ ತರಗತಿಯವರೆಗೆ, ಈ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಇದನ್ನು ಪುನರುಜ್ಜೀವನಗೊಳಿಸಬೇಕೆಂದು ಹಿರಿಯ ವಿದ್ಯಾರ್ಥಿಗಳು, ಸಾರ್ವಜನಿಕರು ಒತ್ತಾಯಿಸಿದ್ದರು.

ಆದರೆ ಶಾಲಾ ಕಟ್ಟಡ ಪುನರ್‌ನಿರ್ಮಾಣ ಮಾಡುವುದಿರಲಿ, ಶಾಲೆಯ ಮುಂದೆ ವಿಶಾಲವಾದ ಆವರಣವಿದ್ದು, ಇಲ್ಲಿ ಸಾರ್ವಜನಿಕ ಬಳಕೆಗಾಗಿ ಸ್ನಾನಗೃಹ ಹಾಗೂ ಶೌಚಾಲಯ ನಿರ್ಮಾಣ ಮಾಡಲು ನಗರಸಭೆ ಆಯುಕ್ತರು ಮತ್ತು ಅಧಿಕಾರಿಗಳು ಮುಂದಾಗಿದ್ದಾರೆ. ಈಗಾಗಲೇ ನಗರಸಭೆ ಆಯುಕ್ತ ರಾಮದಾಸ್ ಮತ್ತು ಸಿಬ್ಬಂದಿ ಶಾಲೆಯ ಮೈದಾನದಲ್ಲಿ 30*40 ಅಡಿ ಜಾಗವನ್ನು ಶೌಚಾಲಯ ನಿರ್ಮಾಣಕ್ಕಾಗಿ ಗುರುತಿಸಿದ್ದಾರೆ.
ಇಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾದಲ್ಲಿ ಶಾಲೆಯ ಶೈಕ್ಷಣಿಕ ವಾತಾವರಣವೇ ಕಲುಷಿತವಾಗಲಿದೆ ಎಂದು ಎಸ್‌ಡಿಎಂಸಿ ಸದಸ್ಯರು, ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹಿರಿಯ ಸಾಹಿತಿಗಳಾದ ಡಾ. ಹನೂರು ಕೃಷ್ಣಮೂರ್ತಿ ಮತ್ತು ಪ್ರೊ. ಜಿ.ಎಸ್. ಜಯದೇವ್ ಸೇರಿದಂತೆ ಚಿಂತಕರು ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಪೇಟೆ ಹಿರಿಯ ಪ್ರಾಥಮಿಕ ಶಾಲೆಯು ಶತಮಾನದಾಟಿದ ಶಾಲೆಯಾಗಿದ್ದು, ಪಾರಂಪರಿಕ ಶೈಲಿಯ ಕಟ್ಟಡಗಳನ್ನೊಳಗೊಂಡ, ವಿಶಾಲ ಮೈದಾನವನ್ನೂ ಹೊಂದಿರುವ ಈ ಶಾಲೆಯು ನಗರದ ಹೃದಯ ಭಾಗದಲ್ಲಿರುವುದು ಇದರ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ.

ದೂರದೃಷ್ಟಿಯುಳ್ಳ ತಾವು ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಇಂಟ್ಯಾಕ್ ಸಂಸ್ಥೆಯ ಮೂಲಕ ಪಾರಂಪರಿಕ ಶೈಲಿಯಲ್ಲೇ ಪುನರ್‌ನಿರ್ಮಾಣ ಮಾಡಿಸುವ ಪ್ರಯತ್ನದಲ್ಲಿದ್ದೀರಿ ಎಂದು ಪತ್ರಿಕೆಗಳು ವರದಿ ಮಾಡಿವೆ. ತಮ್ಮ ಈ ಶ್ಲಾಘನೀಯ ಪ್ರಯತ್ನವನ್ನು ನಾವೆಲ್ಲರೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇವೆ. ಆದರೆ ಸದರಿ ಶಾಲೆಯ ಆವರಣದಲ್ಲಿ ಹೈಟೆಕ್ ಸಾರ್ವಜನಿಕ ಶೌಚಾಲಯವೊಂದನ್ನು ನಿರ್ಮಿಸುವ, ಯೋಜನೆಯೊಂದು ಈಗಾಗಲೇ ಕಾರ್ಯಪ್ರವೃತ್ತವಾಗಿದೆಯೆಂದು ಮತ್ತು ಈಗಾಗಲೇ ನಿರ್ಮಾಣ ಕಾರ್ಯಕ್ಕೆ ಸಂಬಂಧಪಟ್ಟ ಪೂರ್ವ ಸಿದ್ಧತೆಗಳನ್ನು ನಗರಸಭೆಯ ಪೌರಾಯುಕ್ತರು ಕೈಗೊಂಡಿದ್ದಾರೆಂದು ತಿಳಿದು ಬಂದಿದೆ. ಶತಮಾನ ದಾಟಿದ ಶಾಲೆಯ ಆವರಣವನ್ನು ಅನ್ಯ ಉದ್ದೇಶಗಳಿಗೆ ಹೀಗೆ ಬಳಸಲು ಪ್ರಾರಂಭಿಸಿದರೆ, ಶತಮಾನಗಳ ಕಾಲ ಸಮಾಜದ ಭಾಗವಾಗಿ ಬೆಳೆದು ಬಂದ ಈ ಶಿಕ್ಷಣ ಸಂಸ್ಥೆಯನ್ನು ನಾವೇ ನಾಶ ಮಾಡಿದ ಹಾಗೆ ಆಗುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ಆಕ್ರಮಣಶೀಲವಾಗಿ ಸಂಭವಿಸುತ್ತಿರುವ ಪ್ರಗತಿ ಮಕ್ಕಳ ಶಿಕ್ಷಣವನ್ನು ಅಂಚಿಗೆ ತಳ್ಳುತ್ತಿದೆ. ಈ ಸಂದರ್ಭದಲ್ಲಿ ತಾವು ದಯಮಾಡಿ ಶಾಲಾವರಣವನ್ನು ಶೌಚಾಲಯ ಇತ್ಯಾದಿ ಯಾವುದೇ ಅನ್ಯ ಉದ್ದೇಶಗಳಿಗೆ ಬಿಟ್ಟುಕೊಡದಂತೆ ತಡೆಯಾಜ್ಞೆ ಹೊರಡಿಸಬೇಕೆಂದು ಮತ್ತು ಶತಮಾನ ದಾಟಿದ ತಾಲೂಕಿನ ಅತಿಮುಖ್ಯವಾದ ಈ ಶಾಲೆಯನ್ನು ಪುನರುಜ್ಜೀವನಗೊಳಿಸಲು ತೀವ್ರ ಕ್ರಮಗಳನ್ನು ಕೈಗೊಳ್ಳಬೇಕೆಂದ ಈ ಮೂಲಕ ಕೋರುತ್ತೇವೆ.ಎಂಬ ಪತ್ರವನ್ನು ಬರೆದಿದ್ದಾರೆ.

ಈ ಪತ್ರಕ್ಕೆ ಹನೂರು ಕೃಷ್ಣಮೂರ್ತಿ ಮತ್ತು ಜಿಎಸ್ ಜಯದೇವ್ ಅವರಲ್ಲದೇ, ರಂಗಕರ್ಮಿ ಕೆ. ವೆಂಕಟರಾಜು, ಸಾಹಿತಿ ಸೋಮಶೇಖರ ಬಿಸಲವಾಡಿ, ಗಾಯಕ ಸಿ.ಎಂ. ನರಸಿಂಹಮೂರ್ತಿ, ಮುಖ್ಯ ಶಿಕ್ಷಕ ನಾಗೇಂದ್ರ, ಶಿಕ್ಷಕಿ ಸುನೀತಮ್ಮ, ಪರಿಸರವಾದಿ ಡಿ.ಎಸ್. ದೊರೆಸ್ವಾಮಿ, ಹಿರಿಯ ಪತ್ರಕರ್ತ ಅಬ್ರಹಾಂ ಡಿಸಿಲ್ವ, ರಂಗನಿರ್ದೇಶಕಿ ಚಿತ್ರಾ, ನಳಿನಿ ವೆಂಕಟರಾಜು ಮತ್ತಿತರರು ಸಹಿ ಹಾಕಿ ಬೆಂಬಲ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.