RTO: ವಾಹನಗಳ ಟ್ರ್ಯಾಕಿಂಗ್ ಸಾಧನ, ಪ್ಯಾನಿಕ್ ಬಟನ್ ಅಳವಡಿಕೆಗೆ ಅನುಮೋದನೆ
ಡಿ. 1ರಿಂದಲೇ ವಾಹನಗಳಿಗೆ ಸಾಧನ ಅಳವಡಿಕೆ ಕಾರ್ಯ ಪ್ರಾರಂಭ
Team Udayavani, Nov 28, 2023, 11:40 PM IST
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಿಗೆ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳಡಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಸರಕಾರ ಆದೇಶ ಹೊರಡಿಸಿದೆ.
ಈ ಯೋಜನೆಯನ್ನು 30.35 ಕೋಟಿ ರೂ.ನಲ್ಲಿ ಕೈಗೊಳ್ಳಲಾಗುತ್ತಿದೆ. ಡಿ. 1ರಿಂದಲೇ ವಾಹನಗಳಿಗೆ ಸಾಧನ ಅಳವಡಿಕೆ ಕಾರ್ಯ ಪ್ರಾರಂಭವಾಗಲಿದೆ. ವರ್ಷದ ಒಳಗೆ ಸಾಧನಗಳ ಅವಡಿಕೆಗೆ ಕಾಲಮಿತಿ ಹೇರಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕ ವಾಹನಗಳಿಗೆ ಈ ಸಾಧನಗಳನ್ನು ಅಳವಡಿಸಲು ಜಿಎಸ್ಟಿ ಹೊರತುಪಡಿಸಿ 7,900 ರಿಂದ 8,000 ರೂ.ವರೆಗೆ ದರ ನಿಗದಿಪಡಿಸಲು 13 ಕಂಪೆನಿಗಳ ಪ್ರತಿನಿಧಿಗಳು ಕೋರಿದ್ದರು.
ಈ ಹಿನ್ನೆಲೆಯಲ್ಲಿ ಸಾರಿಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್ ರ್ಯಾಕಿಂಗ್ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಗೆ ಸ್ಪರ್ಧಾತ್ಮಕ ದರವಾಗಿ 7,599 ರೂ.ಅನ್ನು (ಜಿಎಸ್ಟಿ ಹೊರತುಪಡಿಸಿ) ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕಾಗಿರುವುದರಿಂದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳನ್ನು ಅರ್ಹತಾ ಪತ್ರ ನವೀಕರಣಕ್ಕೆ ಹಾಜರುಪಡಿಸಿದ ಸಮಯದಲ್ಲಿ ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್ ರ್ಯಾಕಿಂಗ್ ಸಾಧನ, ಎಮರ್ಜೆನ್ಸಿ ಪ್ಯಾನಿಕ್ ಬಟನ್ ಸಾಧನಗಳನ್ನು ಅಳವಡಿಸಿರುವ ಬಗ್ಗೆ ಅರ್ಹತಾ ಪತ್ರ ನವೀಕರಿಸಬಹುದಾಗಿದೆ ಎಂದು ಹೇಳಿದ್ದಾರೆ
ಕಾಲಮಿತಿ ನಿಗದಿ
ರಾಜ್ಯದಲ್ಲಿ ಈ ಯೋಜನೆಯು ಪ್ರಾರಂಭವಾದಾಗಿನಿಂದ ಒಂದು ವರ್ಷದ ಅವಧಿಯಲ್ಲಿ ಅರ್ಹ ವಾಹನಗಳು -ಪ್ರಮಾಣೀಕೃತ ವಾಹನ ಸ್ಥಳ ಟ್ರ್ಯಾಕಿಂಗ್ ರ್ಯಾಕಿಂಗ್ ಸಾಧನ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳಡಿಸಿಕೊಳ್ಳಲು ಕಾಲಮಿತಿ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿನ ಸಾರ್ವಜನಿಕ ಸೇವಾ ವಾಹನಗಳಿಗೆ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಕಾಣಿಕೆ ವಾಹನಗಳಿಗೆ ಸಾಧನಗಳ ಅಳವಡಿಕೆ ಕಾರ್ಯ ಯೋಜನೆ ಪ್ರಾರಂಭಿಸಲು ಸೂಕ್ತ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ