Delhi Chief Secy ನರೇಶ್ ಕುಮಾರ್ ಅಧಿಕಾರವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ಅಸ್ತು
Team Udayavani, Nov 30, 2023, 1:15 AM IST
ಹೊಸದಿಲ್ಲಿ: ದಿಲ್ಲಿ ಮುಖ್ಯಕಾರ್ಯದರ್ಶಿ ನರೇಶ್ ಕುಮಾರ್ ಅವರ ಅಧಿಕಾರಾವಧಿಯನ್ನು 6 ತಿಂಗಳು ವಿಸ್ತರಿಸಿರುವ ಕೇಂದ್ರ ಸರಕಾರದ ನಿರ್ಣಯದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಮುಖ್ಯ ಕಾರ್ಯದರ್ಶಿ ನೇಮಕ ವಿಚಾರವಾಗಿ ಕೇಂದ್ರ ಸರಕಾರ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸರಕಾರದ ನಡುವೆ ತಿಕ್ಕಾಟವಿರುವ ನಡುವೆಯೇ, ಕೇಂದ್ರ ಸರಕಾರ ನರೇಶ್ ಅವರ ಅಧಿಕಾರಾವಧಿಯನ್ನು ವಿಸ್ತರಿಸಿತ್ತು. ಇದನ್ನು ಪ್ರಶ್ನಿಸಿ ದಿಲ್ಲಿ ಸರಕಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಅರ್ಜಿ ಆಲಿಸಿ, ಅಧಿಕಾರಾವಧಿ ವಿಸ್ತರಣೆಯ ಬದಲಿಗೆ ಹೊಸ ನೇಮಕಾತಿ ಮಾಡಲು ಅಧಿಕಾರಿಗಳಿಲ್ಲವೇ ಎಂದು ಕೇಂದ್ರವನ್ನು ಪ್ರಶ್ನಿಸಿತ್ತು. ಬೆನ್ನಲ್ಲೇ ಬುಧವಾರ ರಾಷ್ಟ್ರರಾಜಧಾನಿಯ ಆಡಳಿತಕ್ಕೆ ಸಂಬಂಧಿಸಿದ 2024ರ ಕಾನೂನಿನ ಅನ್ವಯ ಮುಖ್ಯ ಕಾರ್ಯದರ್ಶಿಯನ್ನು ನೇಮಿ ಸುವ ಅಧಿಕಾರ ಕೇಂದ್ರಕ್ಕೆ ಇದೆ ಎಂದು ಹೇಳಿ, ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.