Dr GG Lakshmana Prabhu: ಕವಿ ಮನಸ್ಸಿನ ಸಾಧಕ ವೈದ್ಯ ಡಾ| ಪ್ರಭು: ಡಾ| ಜೋಷಿ

ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆ

Team Udayavani, Dec 1, 2023, 12:16 AM IST

gg

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಖ್ಯಾತ ವೈದ್ಯ, ನಗರದ ಕೆಎಂಸಿ ಆಸ್ಪತ್ರೆಯ ಮೂತ್ರಾಂಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಮತ್ತು ಸರ್ಜನ್‌ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆ ಗುರುವಾರ ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿ ನುಡಿ ನಮನ ಸಲ್ಲಿಸುತ್ತ, “ಉತ್ಕೃಷ್ಟ ವೈದ್ಯರಾಗಿ ಸಮಾಜ ಸ್ಪಂದನೆಯ ಹಾಗೂ ಕವಿ ಮನಸ್ಸಿನ ಅಪರೂಪದ ಸಾಧಕ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರು ಮಾನವೀಯತೆಯ ಬಹುಮುಖ ಹೊಂದಿದವರು. ವೈದ್ಯಕೀಯ ಕ್ಷೇತ್ರದಲ್ಲಿದ್ದು ಸಾಹಿತ್ಯವನ್ನು ಅರಗಿಸಿಕೊಂಡ ಅವರು ಅಪರೂಪದ ಮಹಾ ಪುರುಷ. ಸದಾ ನಗು ಮುಖ ಹಾಗೂ ಹಾಸ್ಯದಲ್ಲಿ ಸಿದ್ಧಾಂತ ಹೊಂದಿದ್ದ ಅವರಿಂದು ನಮ್ಮೊಡನೆ ಇಲ್ಲವಾದರೂ ಅವರ ಜಾಗೃತ ಪ್ರಜ್ಞೆ ಎಂದೆಂದಿಗೂ ಜಾಗೃತವಾಗಿರುತ್ತದೆ ಎಂದರು.

ಯುರೋಲಜಿಸ್ಟ್‌ ಡಾ| ಅಶೋಕ್‌ ಪಂಡಿತ್‌ ಮಾತನಾಡಿ, ಪ್ರಖ್ಯಾತ ವೈದ್ಯರಾಗಿದ್ದ ಲಕ್ಷ್ಮಣ ಪ್ರಭು ಅವರು ಪ್ರವಾಸದ ಬಗ್ಗೆ ಹೆಚ್ಚು ಆಸ್ಥೆ ವಹಿಸಿಕೊಂಡಿದ್ದರು. ವಿದೇಶಕ್ಕೆ ಭೇಟಿ ನೀಡಿದ ಸಮಯದಲ್ಲಿ ಅಲ್ಲಿನ ಅಂಚೆಚೀಟಿ ಸಂಗ್ರಹ ಸಹಿತ ವಿವಿಧ ಕುತೂಹಲವನ್ನು ತನ್ನಲ್ಲಿ ಬೆಳೆಸಿಕೊಂಡಿದ್ದರು. ದೈಹಿಕವಾಗಿ ಇಂದು ಅವರು ನಮ್ಮೊಂದಿಗಿಲ್ಲವಾದರೂ ನಮ್ಮ ಮನಸ್ಸಿನಲ್ಲಿ ಅಜರಾಮರ ಎಂದರು.
ಯುರೋಲಜಿಸ್ಟ್‌ ಚೆನ್ನೈಯ ಡಾ| ಗಣೇಶ್‌ ಕಾಮತ್‌ ಮಾತನಾಡಿ, ಯುರಾಲಜಿಕಲ್‌ ಸೊಸೈಟಿ ಆಫ್‌ ಇಂಡಿಯಾದಲ್ಲಿ ಲಕ್ಷ್ಮಣ ಪ್ರಭು ಅವರು ಪದಾಧಿಕಾರಿಯಾಗಿ ಮಹೋನ್ನತ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ವೈದ್ಯಕೀಯ ಲೋಕದಲ್ಲಿ ಅವರ ಹೆಸರು ಶಾಶ್ವತ ಎಂದು ಹೇಳಿದರು.

ಲೆಕ್ಕಪರಿಶೋಧಕ ವಾಮನ ಕಾಮತ್‌ ಮಾತನಾಡಿ, ಲಕ್ಷ್ಮಣ ಪ್ರಭು ಅವರು ವೈದ್ಯರಾಗಿ, ಸಾಹಿತ್ಯ,ಸಾಂಸ್ಕೃತಿಕ, ಸಂಘಟನೆ, ಸಮಾಜ ಮುಖೀ, ಪ್ರವಾಸಿ ನೆಲೆಯಲ್ಲಿಯೂ ತನ್ನನ್ನು ತಾನು ಅರ್ಪಿಸಿಕೊಂಡ ಬಗೆ ಅವಿಸ್ಮರಣೀಯ. ಉತ್ತಮ ಮನೆತನದೊಂದಿಗೆ ಸಮಾಜದ ಹತ್ತಾರು ವಿಚಾರಗಳ ಬಗ್ಗೆ ಕುತೂಹಲ ಉಳಿಸಿಕೊಂಡಿದ್ದ ಅವರು ಅಪರೂಪದ ಸಾಧಕ. ಹಲವಾರು ಸಂಕೀರ್ಣ ವೈದ್ಯ ಕೀಯ ಪ್ರಕರಣಗಳನ್ನು ನಿರ್ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಮಣಿಪಾಲ ಪೈ ಕುಟುಂಬದ ಟಿ. ಸತೀಶ್‌ ಯು. ಪೈ, ಡಾ| ಸಂಧ್ಯಾ ಎಸ್‌. ಪೈ, ಟಿ. ಗೌತಮ್‌ ಪೈ, ವನಿತಾ ಪೈ, ಟಿ. ಹರೀಶ್‌ ಪೈ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌, ಶಾಸಕ ಡಿ. ವೇದವ್ಯಾಸ ಕಾಮತ್‌, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕೆಎಂಸಿ ಮಂಗಳೂರು ಕ್ಯಾಂಪಸ್‌ ಪ್ರೊ ವೈಸ್‌ ಚಾನ್ಸಲರ್‌ ಡಾ| ದಿಲೀಪ್‌ ನಾಯಕ್‌, ಕೆಸಿಸಿಐ ಅಧ್ಯಕ್ಷ ಅನಂತೇಶ್‌ ಪ್ರಭು ಮುಂತಾದವರು ಶ್ರದ್ಧಾಂಜಲಿ ಸಮರ್ಪಿಸಿದರು.

ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಎಲ್‌. ಪ್ರಭು, ಪುತ್ರ ಡಾ| ಜಿ.ಜಿ. ಅಕ್ಷಯ್‌ ಪ್ರಭು, ಪುತ್ರಿ ಜಿ.ಜಿ. ಕೃತಿಕಾ ಪ್ರಭು, ಸಹೋದರ ಜಿ.ಜಿ. ಮೋಹನ್‌ದಾಸ್‌ ಪ್ರಭು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.