Bidar: ಭೀಮಣ್ಣ ಖಂಡ್ರೆ ಹೋರಾಟದ ಬದುಕು ಸ್ಫೂರ್ತಿದಾಯಕ- ಸಿಎಂ ಬಣ್ಣನೆ
ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ
Team Udayavani, Dec 2, 2023, 11:18 PM IST
ಬೀದರ್: ಸಮಾಜಮುಖೀ ಕೆಲಸಗಳ ಮೂಲಕ ತುಂಬು ಮತ್ತು ಸಾರ್ಥಕ ಜೀವನ ನಡೆಸಿದ ಡಾ| ಭೀಮಣ್ಣ ಖಂಡ್ರೆಯವರು ನಮಗೆಲ್ಲ ರಿಗೂ ಪ್ರೇರಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾಲ್ಕಿಯಲ್ಲಿ ಶನಿವಾರ ಹಮ್ಮಿ ಕೊಂಡ ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ “ಲೋಕನಾಯಕ’ ಅಭಿನಂದನ ಗ್ರಂಥ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿ ವ್ಯಕ್ತಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು. ಹುಟ್ಟು-ಸಾವಿನ ಮಧ್ಯೆ ಸಮಾಜದ ಪರ ಕೆಲಸ ಮಾಡುವವರನ್ನು ಜನ ಸ್ಮರಿಸುತ್ತಾರೆ. ಅಂಥ ಸಾರ್ಥಕ ಬದುಕು ಖಂಡ್ರೆ ಅವರದ್ದಾಗಿದೆ ಎಂದು ಬಣ್ಣಿಸಿದರು.
ಡಾ| ಭೀಮಣ್ಣ ಹುಟ್ಟು ಹೋರಾಟ ಗಾರರು. ಸಹಕಾರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ. ಗಡಿ ಭಾಗ ಬೀದರ ಜಿಲ್ಲೆ ಇಂದು ಕರ್ನಾಟಕದಲ್ಲಿ ಉಳಿಯುವಲ್ಲಿ ಅವರ ಪರಿಶ್ರಮವೂ ಹೆಚ್ಚಿದೆ. ಜತೆಗೆ ಇಂದಿನ ಕಲ್ಯಾಣ ಕರ್ನಾಟಕ ಭಾಗದ ವಿಮೋಚನ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಖಂಡ್ರೆಯವರ ಹೋರಾಟ ನಮ್ಮೆಲ್ಲರಿಗೂ ಸ್ಫೂರ್ತಿದಾಯಕ ಎಂದರು.
ಅಭಿನಂದನಾ ಗ್ರಂಥ ಎಂಬುದು ನಾವು ಜೀವನದಲ್ಲಿ ಮಾಡಿರುವ ಸತ್ಕಾರ್ಯಗಳಿಗೆ ಪ್ರತಿಬಿಂಬವಾಗಿದೆ. “ಲೋಕನಾಯಕ’ ಗ್ರಂಥದಲ್ಲಿ ಡಾ| ಭೀಮಣ್ಣ ಅವರ ವ್ಯಕ್ತಿತ್ವ ಹಿಡಿದಿಡ
ಲಾಗಿದೆ. ಖಂಡ್ರೆಯವರ ಒಡನಾಡಿಗಳು, ಅವರ ಸಮಾಜ ಸೇವೆ, ಸಾಧನೆಗಳು ಮತ್ತು ಬಸವತತ್ವ ಪ್ರಚಾರ ಹೀಗೆ ಹಲವು ವಿಷಯಗಳನ್ನು ಲೇಖನಗಳ ಮೂಲಕ ಪರಿಚಯಿಸಿದ್ದಾರೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಿದರು. ಸುತ್ತೂರು ಶ್ರೀಗಳು, ಸಿರಿಗೆರೆ ಶ್ರೀಗಳು, ತುಮಕೂರು ಶ್ರೀಗಳು, ಶ್ರೀಶೈಲ ಜಗದ್ಗುರುಗಳು, ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ವೀರಪ್ಪ ಮೊಯ್ಲಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋರು ಚನ್ನಬಸಪ್ಪ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್, ಸಚಿವರಾದ ಎಚ್.ಕೆ ಪಾಟೀಲ, ಕೆ.ಎಚ್ ಮುನಿಯಪ್ಪ, ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಎಚ್.ಸಿ ಮಹಾದೇವಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ಕೆ.ಎನ್. ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಡಾ| ಶರಣಪ್ರಕಾಶ ಪಾಟೀಲ, ಜಮೀರ್ ಅಹ್ಮದ್ ಖಾನ್, ರಹೀಮ್ ಖಾನ್, ಆರ್.ಬಿ.ತಿಮ್ಮಾಪುರ, ಎನ್.ಎಸ್.
ಭೋಸರಾಜು ಇನ್ನಿತರರು ಪಾಲ್ಗೊಂಡಿದ್ದರು.
ಖಂಡ್ರೆ ಮಹಾನ್ ವ್ಯಕ್ತಿ: ಖರ್ಗೆ
ರಾಜಕಾರಣಿಗಳು ಅರವತ್ತು-ಎಪ್ಪತ್ತು ವರ್ಷ ಬದುಕುವುದೇ ಕಷ್ಟ. ಆದರೆ ಹೋರಾಟಮಯ ಜೀವನದ ಮೂಲಕ ಶತಾಯುಷಿಗಳಾಗಿ ರಾಜಕೀಯದ ಗುರಿ ಸಾ ಧಿಸಿದ ಡಾ| ಭೀಮಣ್ಣ ಖಂಡ್ರೆ ಅವರು ಮಹಾನ್ ವ್ಯಕ್ತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದರು.
ಹಲವು ಸಾಮಾಜಿಕ ಕಾರ್ಯಕ್ರಮ ಮತ್ತು ರಾಜಕೀಯ ಕೆಲಸಗಳ ಮೂಲಕ ಖಂಡ್ರೆಯವರು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಸಮಾಜದವರನ್ನು ಒಗ್ಗೂಡಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೆ ಅದನ್ನು ಪೂರ್ಣಗೊಳಿಸುವವರೆಗೆ ಸುಮ್ಮನೆ ಕೂಡದಂತಹ ಛಲವಾದಿ ವ್ಯಕ್ತಿತ್ವ ಅವರದ್ದು ಎಂದರು.
ಖಂಡ್ರೆಯವರು ಇನ್ನೂ ಸು ದೀರ್ಘ ಕಾಲ ಆರೋಗ್ಯವಂತರಾಗಿ ಬದುಕಲಿ, ಅವರಿಂದ ಮತ್ತಷ್ಟು ಸಮಾಜ ಸೇವಾ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್
Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು