Feticide: ಮತ್ತೂಂದು ಹೆಣ್ಣು ಭ್ರೂಣ ಹತ್ಯೆ ತಂಡ ಸಕ್ರಿಯ


Team Udayavani, Dec 4, 2023, 12:26 AM IST

pregnent

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಹಚ್ಚಿ ಗರ್ಭಪಾತ ಮಾಡುತ್ತಿದ್ದ ಪ್ರಕರಣ ಮತ್ತೂಂದು ರೋಚಕ ತಿರುವು ಪಡೆದುಕೊಂಡಿದೆ. ಬೈಯಪ್ಪನಹಳ್ಳಿ ಪೊಲೀಸರ ತನಿಖೆ ವೇಳೆ ಮೈಸೂರಿನ ಡಾ| ಚಂದನ್‌ ಬಲ್ಲಾಳ್‌, ಮಧ್ಯವರ್ತಿ ಶಿವಲಿಂಗೇಗೌಡ ತಂಡ ಮಾತ್ರವಲ್ಲ, ರಾಜ್ಯದಲ್ಲಿ ಮತ್ತೂಂದು ಹೆಣ್ಣು ಭ್ರೂಣ ಹತ್ಯೆ ತಂಡ ಸಕ್ರಿಯವಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.
ಇದೇ ಕಾರಣಕ್ಕೆ ಮೈಸೂರಿನ ಹಳೇ ಆಸ್ಪತ್ರೆಯೊಂದರ ಶುಶ್ರೂಷಕಿ ಉಷಾರಾಣಿ (35)ಯನ್ನು ಬಂಧಿಸಲಾಗಿದೆ. ಈಕೆಯ ವಿಚಾರಣೆಯಲ್ಲಿ ಚಂದನ್‌ ಬಲ್ಲಾಳ್‌, ಚೆನ್ನೈನ ಮಕ್ಕಳ ತಜ್ಞನ ತಂಡ ಮಾತ್ರವಲ್ಲ. ಮೈಸೂರಿನ ಪುಟ್ಟರಾಜು ಹಾಗೂ ಮಂಡ್ಯದ ಧನಂಜಯ್‌ ಎಂಬವರ ತಂಡವೂ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದ್ದು, ಪೊಲೀಸರೇ ಒಂದು ಕ್ಷಣ ಶಾಕ್‌ ಆಗಿದ್ದಾರೆ. ಸದ್ಯ ಪುಟ್ಟರಾಜು ಮತ್ತು ಧನಂಜಯ್‌ ನಿರೀಕ್ಷಣ ಜಾಮೀನು ಪಡೆದುಕೊಂಡಿದ್ದಾರೆ.

ಮೈಸೂರಿನ ಮೊದಲ ಆಸ್ಪತ್ರೆ ಎಂದು ಹೇಳಲಾದ ಆಸ್ಪತ್ರೆಯೊಂದರಲ್ಲಿ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಉಷಾರಾಣಿಗೆ ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ಕ್ಯಾಟರಿಂಗ್‌ ಮಾಡುತ್ತಿದ್ದ ಪುಟ್ಟರಾಜು ಮತ್ತು ಮಂಡ್ಯದಲ್ಲಿ ಪ್ರಯೋಗಾಲಯ(ಲ್ಯಾಬ್‌)ದ ಟೆಕ್ನೀಷಿಯನ್‌ ಧನಂಜಯ್‌ ಪರಿಚಯವಾಗಿದೆ. ಈ ವೇಳೆ ಹೆಣ್ಣು ಭ್ರೂಣ ಗರ್ಭಪಾತ ಮಾಡಿಸಿಕೊಟ್ಟರೆ ಪ್ರತೀ ಕೇಸ್‌ಗೆ 2-3 ಸಾವಿರ ರೂ. ಕೊಡುವುದಾಗಿ ಇಬ್ಬರ ನಡುವೆ ಒಪ್ಪಂದವಾಗಿತ್ತು. ಅದರಂತೆ ಧನಂಜಯ್‌, ಮಂಡ್ಯದ ಲ್ಯಾಬ್‌ನಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ ಮಾಡಿ ಗರ್ಭಪಾತ ಬಯಸುವ ಪೋಷಕರನ್ನು ಪುಟ್ಟರಾಜುಗೆ ಸಂಪರ್ಕಿಸುತ್ತಿದ್ದ. ಈತ ಉಷಾರಾಣಿ ಬಳಿ ಕಳುಹಿಸಿ ಗರ್ಭಪಾತ ಮಾಡಿಸುತ್ತಿದ್ದ. ಈಕೆ ಪ್ರತೀ ತಿಂಗಳು 4-5 ಗರ್ಭಪಾತ ಮಾಡಿಸುತ್ತಿದ್ದಳು ಎಂಬುದು ಗೊತ್ತಾಗಿರುವುದಾಗಿ ಮೂಲಗಳು ತಿಳಿಸಿವೆ.

ಆಸ್ಪತ್ರೆ ವೈದ್ಯರಿಗೆ ಗೊತ್ತಿಲ್ಲ!
ಮತ್ತೂಂದೆಡೆ ಉಷಾರಾಣಿ ಕೃತ್ಯಆಕೆ ಕೆಲಸ ಮಾಡುವ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಗೊತ್ತಿಲ್ಲ. ಪುಟ್ಟರಾಜು ಸೂಚನೆ ಮೇರೆಗೆ ಆಸ್ಪತ್ರೆಗೆ ಕರೆಸಿಕೊಳ್ಳುತ್ತಿದ್ದ ಉಷಾರಾಣಿ, ಗರ್ಭಿಣಿಯರಿಗೆ ಇದೇ ರೀತಿ ಹೇಳಬೇಕೆಂದು ಮೊದಲೇ ಸೂಚಿಸುತ್ತಿದ್ದಳು. ಅದೇ ರೀತಿ ವೈದ್ಯರ ಮುಂದೆ ಕರೆದೊಯ್ದು ಸುಳ್ಳುಗಳನ್ನು ಹೇಳಿ, ಗರ್ಭಪಾತ ಮಾಡಿಸುತ್ತಿದ್ದಳು.

ಈ ಮಧ್ಯೆ ಕೆಲವರು ಮದುವೆಯಾಗಿ ಒಂದೆರಡು ವರ್ಷಗಳಾಗಿದ್ದು, ಈಗಲೇ ಮಕ್ಕಳು ಬೇಡ. ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಹಾಗೂ ಈಗಾಗಲೇ ಎರಡು ಹೆಣ್ಣು ಮಕ್ಕಳಾಗಿವೆ. ಮತ್ತೂಂದು ಹೆಣ್ಣು ಎಂದು ಗೊತ್ತಾಗಿದೆ. ಹೀಗಾಗಿ ಗರ್ಭಪಾತ ಮಾಡಿ ಎಂದು ಸುಳ್ಳು ಹೇಳಿಸುತ್ತಿದ್ದಳು. ಆದರೆ, ವೈದ್ಯರು ಆ ಪೋಷಕರಿಗೆ ಸೂಕ್ತ ಆಪ್ತಸಮಾಲೋಚನೆ ಮಾಡಿದರೂ, ಗರ್ಭಿಣಿ ಗರ್ಭಪಾತಕ್ಕೆ ಒತ್ತಾಯಿಸಿದರೆ, ಕಾನೂನಿನ ಪ್ರಕಾರ 24 ವಾರದ ಒಳಗಿರುವ ಮಗುವನ್ನು ಗರ್ಭಪಾತ ಮಾಡಲು ಅವಕಾಶ ಇರುವುದರಿಂದ ಗರ್ಭಪಾತ ಮಾಡುತ್ತಿದ್ದರು. ಆದರೆ, ಈ ಕೃತ್ಯದ ಹಿಂದೆ ಉಷಾರಾಣಿಯ ಮಾಸ್ಟರ್‌ ಮೈಂಡ್‌ ಇದೆ ಎಂಬುದು ವೈದ್ಯರಿಗೆ ಗೊತ್ತಿಲ್ಲ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ಗರ್ಭಿಣಿಯಿಂದ ಧನಂಜಯ್‌ ಮತ್ತು ಪುಟ್ಟರಾಜು, ಸಿರಿವಂತರ ಬಳಿ 50-60 ಸಾವಿರ ರೂ., ಮಧ್ಯಮ ವರ್ಗದವರ ಬಳಿ 20-30 ಸಾವಿರ ರೂ. ಪಡೆಯುತ್ತಿದ್ದರು. ಮತ್ತೂಂದು ಸ್ಫೋಟಕ ವಿಚಾರವೆಂದರೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿವಲಿಂಗೇಗೌಡನ ಮೂಲಕವೂ ಪುಟ್ಟರಾಜು ವ್ಯವಹಾರ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆ ವೈದ್ಯರಿಗೆ ನೋಟಿಸ್‌

ಆರೋಪಿ ಉಷಾರಾಣಿ ಕೆಲಸ ಮಾಡುತ್ತಿದ್ದ ಆಸ್ಪತ್ರೆ ವೈದ್ಯರಿಗೆ ನೋಟಿಸ್‌ ನೀಡಿದ್ದು, ಇದುವರೆಗಿನ ಗರ್ಭಪಾತ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪ್ರಾಥಮಿಕವಾಗಿ ಆಸ್ಪತ್ರೆಯ ತಪ್ಪು ಕಂಡುಬಂದಿಲ್ಲ. ಆದರೆ, ಉಷಾರಾಣಿ ಜತೆ ಬೇರೆ ಯಾರಾದರೂ ಆಸ್ಪತ್ರೆಯ ವೈದ್ಯರು ಶಾಮೀಲಾಗಿದ್ದಾರೆಯೇ ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉಷಾರಾಣಿ ಬಂಧನ
ಚಂದನ್‌ ಬಲ್ಲಾಳ್‌ ಬಂಧನವಾಗುತ್ತಿದ್ದಂತೆ ಪುಟ್ಟರಾಜು ಮತ್ತು ಧನಂಜಯ್‌ ನಿರೀಕ್ಷಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಕರಣ ಸಂಬಂಧ ವಿಚಾರಣೆಗೆ ಕರೆದಾಗ ಈ ಇಬ್ಬರೇ ಪ್ರತ್ಯೇಕವಾಗಿ ಗರ್ಭಪಾತದ ತಂಡ ಕಟ್ಟಿಕೊಂಡಿರುವುದು ಗೊತ್ತಾಗಿದೆ. ಪುಟ್ಟರಾಜು ಹೇಳಿಕೆ ಆಧರಿಸಿ ಉಷಾರಾಣಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.