Cyclone Michaung: ಚೆನ್ನೈನಲ್ಲಿ ಇಬ್ಬರು ಮೃತ್ಯು; ಹಲವಾರು ವಿಮಾನಗಳು ರದ್ದು
Team Udayavani, Dec 4, 2023, 5:26 PM IST
ಚೆನ್ನೈ: ಮೈಚಾಂಗ್ ಚಂಡಮಾರುತದ ಪರಿಣಾಮವಾಗಿ ಸೋಮವಾರ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಚೆನ್ನೈನ ಕಾನತ್ತೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ.
ರನ್ವೇ ಜಲಾವೃತಗೊಂಡಿದ್ದರಿಂದ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ್ದು, ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಇತರ ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
ತೀವ್ರ ಹವಾಮಾನ ವೈಪರೀತ್ಯವಾದ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯವರೆಗೆ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಮೊದಲು, ಚೆನ್ನೈ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9:17 ರಿಂದ ಬೆಳಗ್ಗೆ 11:30 ರವರೆಗೆ ವಿಮಾನಗಳ ಆಗಮನವನ್ನು ಸ್ಥಗಿತಗೊಳಿಸಲಾಗಿತ್ತು.
ಕುಂಭ ದ್ರೋಣ ಮಳೆಯಿಂದ ತಗ್ಗು ಪ್ರದೇಶಗಳು ತೀವ್ರ ಜಲಾವೃತಗೊಂಡಿದ್ದು, ನೀರಿನ ಮಟ್ಟ ಹೆಚ್ಚಾದ ಕಾರಣ, ರಸ್ತೆಯಲ್ಲೇ ಮೊಸಳೆ ಕಾಣಿಸಿಕೊಂಡಿದೆ.
ಚೆನ್ನೈನ ಹಲವು ಮೆಟ್ರೋ ನಿಲ್ದಾಣಗಳ ಬಳಿ ಜಲಾವೃತವಾಗಿದೆ. ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ 4 ಅಡಿಗಳಷ್ಟು ನೀರು ಸಂಗ್ರಹಗೊಂಡಿದ್ದು, ನಿಲ್ದಾಣದ ಪ್ರವೇಶವನ್ನು ಕಡಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Android ಮೊಬೈಲ್ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
Excise Policy Case: ಆಪ್ ಆರೋಪಿ! ದಿಲ್ಲಿ ಹೈಕೋರ್ಟ್ಗೆ ಇ.ಡಿ. ಮಾಹಿತಿ
Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ
Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್
ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ: ಸುಪ್ರೀಂ
MUST WATCH
ಹೊಸ ಸೇರ್ಪಡೆ
Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ
Android ಮೊಬೈಲ್ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ
ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್!: ಟಿಕೆಟ್ ವಂಚಿತ ರಘುಪತಿ ಭಟ್ ಬಿರುನುಡಿ
ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…
ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ