Child labours ವಾಹನ ಅಪಘಾತ:ವಿದ್ಯಾರ್ಥಿನಿ ಮೃತ್ಯು; ದೂರು ದಾಖಲು
ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು
Team Udayavani, Dec 4, 2023, 6:57 PM IST
ವಿಜಯಪುರ : ಕೂಲಿ ಕೆಲಸಕ್ಕೆ ಹೊರಟಿದ್ದ ಬಾಲ ಕಾರ್ಮಿಕರ ವಾಹನ ಅಪಘಾತ ಹಾಗೂ ವಿದ್ಯಾರ್ಥಿನಿ ಸಾವಿನ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಕುರಿತು ‘ಉದಯವಾಣಿ’ಗೆ ಮಾಹಿತಿ ನೀಡಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ವಿಜಯಪುರ ಜಿಲ್ಲೆಯ ತಾಲೀಕೋಟೆ ತಾಲೂಕಿನಲ್ಲಿ ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದೊಯುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ 12 ಮಕ್ಕಳು ಗಾಯಗೊಂಡು, ಓರ್ವ ಬಾಲಕಿ ಬಲಿಯಾಗಿರುವ ಘಟನೆ ಗಮನಕ್ಕೆ ಬಂದಿದೆ ಎಂದಿದ್ದಾರೆ.
ಕೂಲಿ ಕೆಲಸಕ್ಕೆ ಮಕ್ಕಳನ್ನು ಕರೆದೊಯ್ಯುವ ವಾಹನ ಅಪಘಾತಕ್ಕೀಡಾಗಿರುವ ಘಟನೆಯ ಕುರಿತು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ವರದಿ ನೀಡುವಂತೆ ವಿಜಯಪುರ ಜಿಲ್ಲೆಯ ಮಕ್ಕಳ ರಕ್ಷಣಾ ಅಧಿಕಾರಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಲಾಗಿದೆ. ಅಲ್ಲದೇ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಎಂದು ವಿವರಿಸಿದ್ದಾರೆ.
ಬಿಳೆಭಾವಿ ಗ್ರಾಮದಿಂದ ಬೊಮ್ಮನಹಳ್ಳಿ ಗೆ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನ ಅಪಘಾತದಲ್ಲಿ ಓರ್ವ ಬಾಲಕಿ ಮೃತಪಟ್ಟು ಸುಮಾರು 12 ಮಕ್ಕಳು ತೀವ್ರ ಗಾಯಗೊಂಡಿ ಘಟನೆಯಲ್ಲಿ ಗಾಯಗೊಂಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಅದೇ ರೀತಿಯಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
MUST WATCH
ಹೊಸ ಸೇರ್ಪಡೆ
ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್, ಎವರೆಸ್ಟ್ ಉತ್ಪನ್ನಗಳು ಪಾಸ್!
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ