Peripheral Ring Road: ಪೆರಿಫೆರಲ್‌ ರಿಂಗ್‌ ರಸ್ತೆಗೆ ಮರುಜೀವ?

ಹೊಸೂರು- ಬನ್ನೇರುಘಟ್ಟದವರೆಗೆ 10.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಸಿದ್ಧತೆ

Team Udayavani, Dec 6, 2023, 2:48 PM IST

9-bng

ಬೆಂಗಳೂರು: ಸಿಲಿಕಾನ್‌ ಸಿಟಿ ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ರೂಪಿಸಲಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮಹತ್ವಾಕಾಂಕ್ಷೆಯ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌) ಯೋಜನೆಯು ಮರುಜೀವ ಪಡೆದುಕೊಳ್ಳುವ ಲಕ್ಷಣ ಗೋಚರಿಸಿದ್ದು, ಪಿಪಿಆರ್‌-2 ಯೋಜನೆಯಡಿ ಹೊಸೂರು ರಸ್ತೆಯಿಂದ ಬನ್ನೇರುಘಟ್ಟ ವರೆಗಿನ 10.50 ಕಿ. ಮೀ. ರಸ್ತೆ ನಿರ್ಮಾಣಕ್ಕೆ ಸರ್ಕಾರದ ಹಂತದಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಪೆರಿಫೆರಲ್‌ ರಿಂಗ್‌ ರಸ್ತೆ-2 (ಪಿಆರ್‌ಆರ್‌ -2) ಬಗ್ಗೆ ಸರ್ಕಾರದ ಹಂತದಲ್ಲಿ ಸಮೀಕ್ಷೆಗಳು ನಡೆಯುತ್ತಿವೆ. ಎಲೆಕ್ಟ್ರಾನಿಕ್‌ ಸಿಟಿ ಹಾಗೂ ಬನ್ನೇರುಘಟ್ಟ ರಸ್ತೆ ನಡುವಿನ ಪಿಆರ್‌ಆರ್‌-2 ಯೋಜನೆಯನ್ನು ಮೊದಲು ಕೈಗೆತ್ತಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಡಿಎ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಈ ಯೋಜನೆಯ ಬಗ್ಗೆ ಎಂಜಿನಿಯರ್‌ಗಳು ಈಗಾಗಲೇ ರೂಪುರೇಷೆ ಸಿದ್ಧಪಡಿಸುತ್ತಿದ್ದು, ಡಿಸೆಂಬರ್‌ 2ನೇ ವಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಈ ಬೆಳವಣಿಗೆ ಬಳಿಕ ಟೆಂಡರ್‌ ಪ್ರಕ್ರಿಯೆ ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಶೀಘ್ರ 10.50 ಕಿ.ಮೀ. ರಿಂಗ್‌ ರಸ್ತೆ ಶುರು: ಮೊದಲಿಗೆ ಹೊಸೂರಿನಿಂದ ಬನ್ನೇರುಘಟ್ಟ ವರೆಗಿನ 10.50 ಕಿ.ಮೀ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ತಯಾರಿಸಿ ಯೋಜನೆ ಕಾರ್ಯರೂಪಗೊಳಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಚತುಷ್ಪತ ರಸ್ತೆಗಳ ನಡುವೆ ಮೆಟ್ರೋ ಅಥವಾ ಸಬ್‌ ಅರ್ಬನ್‌ ರೈಲಿಗೆ ಮಧ್ಯದಲ್ಲಿ ಜಾಗ ಬಿಡಲಾಗುತ್ತಿದೆ. ಪಿಆರ್‌ಆರ್‌-2 ಯೋಜನೆಯು ಕ್ರಮವಾಗಿ ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆಯಲ್ಲಿ ಒಟ್ಟು 56 ಕಿ.ಮೀ ವರೆಗೆ ನಿರ್ಮಾಣವಾಗಲಿದೆ.

ಮಾಗಡಿ ರಸ್ತೆಯಿಂದ ತುಮಕೂರು ರಸ್ತೆ, ಮೈಸೂರು ರಸ್ತೆಯಿಂದ ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಎಲೆಕ್ಟ್ರಾನಿಕ್‌ ಸಿಟಿವರೆಗೆ ಹಾದು ಹೋಗಲಿದೆ. ಇದಕ್ಕೆ ಭೂ ಸ್ವಾಧೀನ ಪರಿಹಾರ ಮೊತ್ತವೇ ಸುಮಾರು 5 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಬಿಡಿಎ ಎಂಜಿನಿಯರ್‌ ಗಳು ಅಂದಾಜಿಸಿದ್ದಾರೆ. ಪಿಆರ್‌ಆರ್‌-2 ಮಾದ ರಿಯು ಯಶಸ್ವಿಯಾದರೆ, ಪಿಆರ್‌ಆರ್‌-1 ಸಹ ಅದೇ ಮಾದರಿಯಲ್ಲಿ ಕಾರ್ಯ ರೂಪಕ್ಕೆ ತರಲು ಚಿಂತಿಸಲಾಗಿದೆ. ಒಟ್ಟು ಪಿಆರ್‌ಆರ್‌ ಯೋಜನೆಯು ಒಟ್ಟು 116 ಕಿ.ಮೀ. ಇರಲಿದೆ. ತುಮಕೂರು ರಸ್ತೆಯಿಂದ ಬಲ ಭಾಗಕ್ಕೆ ಸಾಗುವ 63 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯವನ್ನು ಪಿಆರ್‌ಆರ್‌-1 ಎಂದು ಪರಿಗಣಿಸಲಾಗಿದೆ.

ಪಿಆರ್‌ಆರ್‌-2ಗೆ ತೊಡಕುಗಳೇನು?

ಪಿಆರ್‌ಆರ್‌-2 ರಸ್ತೆ ನಿರ್ಮಾಣಕ್ಕೆ ಒಟ್ಟು ಸುಮಾರು 8 ಸಾವಿರ ಕೋಟಿ ರೂ. ತಗುಲಲಿದ್ದು, ಬಿಡಿಎ ಬಳಿ ಇಷ್ಟೊಂದು ದುಡ್ಡಿಲ್ಲ. ಹೀಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ 5 ಸಾವಿರ ಕೋಟಿ ರೂ. ಪರಿಹಾರ ಮೊತ್ತ ಕೊಡುವುದೇ ದೊಡ್ಡ ಸವಾಲಾಗಿದೆ. ಜೊತೆಗೆ ಮೇಲ್ಸೇತುವೆ ನಿರ್ಮಾಣ, ಪಿಆರ್‌ಆರ್‌ಗೆ ತಾಗಿಕೊಂಡಿರುವ ರಸ್ತೆಗಳಿಗೆ ಸಿಗ್ನಲ್‌ ಅಳವಡಿಸದೇ ಕಾಮಗಾರಿ ನಡೆಸುವುದೂ ಬಿಡಿಎಗೆ ತೊಡಕಾಗಿದೆ. ಹೀಗಾಗಿ ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆ ಸೇರಿದಂತೆ ಹಲವು ಕಡೆಗಳಲ್ಲಿರುವ ಬಿಡಿಎ ಬಡಾವಣೆ, ನಿವೇಶನ, ಅಪಾರ್ಟ್‌ಮೆಂಟ್‌ ಮಾರಾಟ ಮಾಡುವುದು, ಒತ್ತುವರಿಯಾದ ಬಿಡಿಎ ಜಾಗ ಪತ್ತೆ ಹಚ್ಚಿ ತೆರವುಗೊಳಿಸಿ ಮಾರಾಟ ಮಾಡಿ ಬಂದ ದುಡ್ಡನ್ನು ಪಿಆರ್‌ಆರ್‌-2 ಯೋಜನೆಗೆ ಬಳಸಲು ಚಿಂತಿಸಲಾಗಿದೆ.

ಟ್ರಾಫಿಕ್ ಜಾಮ್‌ಗೆ ಮುಕ್ತಿ

ಪಿಆರ್‌ಆರ್‌-2 ಯೋಜನೆಯಡಿ ಹೊಸೂರಿನಿಂದ ಬನ್ನೇರುಘಟ್ಟದವರೆಗೆ 10.50 ಕಿ.ಮೀ. ರಿಂಗ್‌ ರಸ್ತೆ ನಿರ್ಮಾಣವಾದರೆ, ಎಲೆಕ್ಟ್ರಾನಿಕ್‌ ಸಿಟಿ, ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಚಂದಾಪುರ, ಸರ್ಜಾಪುರ ರಸ್ತೆ, ಬೊಮ್ಮಸಂದ್ರ, ಗಾರ್ವೆಪಾಳ್ಯ, ಬೊಮ್ಮನಹಳ್ಳಿ, ಎಚ್‌ಎಸ್‌ಆರ್‌ ಲೇಔಟ್‌ ವ್ಯಾಪ್ತಿಯಲ್ಲಿರುವ ಅತೀಯಾದ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದೆ. ಶೇ.50ರಷ್ಟು ಸಾಫ್ಟ್ವೇರ್‌ ಕಂಪನಿಗಳು ಇದೇ ಪ್ರದೇಶದಲ್ಲಿದ್ದು, ಟೆಕಿಗಳಿಗೆ ಓಡಾಡಲು ಸಹಕಾರಿಯಾಗಲಿದೆ. ಎಲೆಕ್ಟ್ರಾನಿಕ್‌ ಸಿಟಿ ರಸ್ತೆಗಳಿಗೆ ಹೊಂದಿಕೊಂಡಿರುವ ರಸ್ತೆಗಳಲ್ಲೂ ಸದ್ಯ ಭಾರೀ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ‌

ಪಿಆರ್‌ಆರ್‌ ಯೋಜನೆ ಬಗ್ಗೆ ಸರ್ಕಾರದ ಹಂತದಲ್ಲಿ ಹಲವು ಸಭೆಗಳು ನಡೆದಿವೆ. ಬಿಡಿಎ ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಪರಿಹಾರ ನೀಡಿ ಯೋಜನೆ ಕಾರ್ಯರೂಪಕ್ಕೆ ತರಲು ದೊಡ್ಡ ಮೊತ್ತ ಬೇಕಾಗುತ್ತದೆ. ಯೋಜನೆಗೆ ತಗುಲುವ ವೆಚ್ಚ ಬಿಡಿಎಗೆ ಸಿಕ್ಕಿದರೆ ಸುಗಮವಾಗಿ ಯೋಜನೆ ರೂಪಿಸಬಹುದು. ● ಎನ್‌.ಜಯರಾಮ್‌, ಆಯುಕ್ತ, ಬಿಡಿಎ

ಭೂ ಸ್ವಾಧೀನ ಪರಿಹಾರ ಮೊತ್ತ ನೀಡಲು ಬಿಡಿಎನಲ್ಲಿ ದುಡ್ಡಿನ ಕೊರತೆ ಎದುರಾಗಿದೆ. ಇದಕ್ಕೆ ಬೇಕಾಗುವ ಹಣ ಹೊಂದಿಸಲು ಯೋಜನೆ ರೂಪಿಸಲಾಗುತ್ತಿದೆ. ಸರ್ಕಾರದ ಆದೇಶದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ● ಡಾ.ಎಚ್‌.ಆರ್‌.ಶಾಂತಾರಾಜಣ್ಣ, ಅಭಿಯಂತರ ಸದಸ್ಯ, ಬಿಡಿಎ

● ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.