Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

ಜಗತ್ತಿನ ಅತ್ಯಂತ ಪ್ರಭಾವಿ ಮಹಿಳೆಯರ 2023ರ ವಾರ್ಷಿಕ ಪಟ್ಟಿ ರಿಲೀಸ್

Team Udayavani, Dec 6, 2023, 6:04 PM IST

Forbes List: ನಿರ್ಮಲಾ ಸೀತಾರಾಮನ್‌ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

ನವದೆಹಲಿ: ಜಗತ್ತಿನ ಅತ್ಯಂತ ಪ್ರಭಾವಿ ಮಹಿಳೆಯರ 2023ರ ವಾರ್ಷಿಕ ಪಟ್ಟಿಯನ್ನು ಪೋರ್ಬ್ಸ್‌ ಬ್ಯುಸಿನೆಸ್‌ ಮ್ಯಾಗಜೀನ್‌ ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತದ ನಾಲ್ವರು ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂಓದಿ:Halim Seeds: ಪೌಷ್ಠಿಕಾಂಶದ ಶಕ್ತಿ ಕೇಂದ್ರ… ಹಲೀಮ್‌ ಬೀಜಗಳ ಪ್ರಯೋಜನವೇನು?

ಈ ನಾಲ್ವರು ಮಹಿಳೆಯರು ಭಾರತ ಮಾತ್ರವಲ್ಲದೇ, ಜಾಗತಿಕವಾಗಿಯೂ ಪ್ರಭಾವ ಶಾಲಿಯಾಗಿದ್ದಾರೆ ಎಂದು ಪೋರ್ಬ್ಸ್‌ ಬಣ್ಣಿಸಿದೆ. ಪೋರ್ಬ್ಸ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ನಿರ್ಮಲಾ ಸೀತಾರಾಮನ್‌ 32ನೇ ಸ್ಥಾನ ಪಡೆದಿದ್ದು, ಎಚ್‌ ಸಿಎಲ್‌ ಟೆಕ್ನಾಲಜೀಸ್‌ ನ ರೋಶ್ನಿ ನಾಡಾರ್‌ ಮಲ್ಹೋತ್ರಾ 60ನೇ ಸ್ಥಾನ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದ ಅಧ್ಯಕ್ಷೆ ಸೋಮ ಮಂಡಲ್‌ 70ನೇ Rank ಪಡೆದಿದ್ದು, ಬೆಂಗಳೂರು ಬಯೋಕಾನ್‌ ಲಿಮಿಟೆಡ್‌ ಸ್ಥಾಪಕ ಅಧ್ಯಕ್ಷೆ ಕಿರಣ್‌ ಮಜೂಂದಾರ್‌ ಶಾ 76ನೇ ಸ್ಥಾನ ಪಡೆದಿದ್ದಾರೆ.

ನಿರ್ಮಲಾ ಸೀತಾರಾಮನ್‌ (64ವರ್ಷ) ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿಯಾಗಿದ್ದು, 2019ರಿಂದ ಹಣಕಾಸು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2017ರಿಂದ 2019ರವರೆಗೆ ನಿರ್ಮಲಾ ಸೀತಾರಾಮನ್‌ ರಕ್ಷಣಾ ಸಚಿವರಾಗಿದ್ದರು. ಈ ಮೂಲಕ ಇಂದಿರಾ ಗಾಂಧಿ ನಂತರ ದೇಶದ 2ನೇ ಮಹಿಳಾ ರಕ್ಷಣಾ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2022ರಲ್ಲಿ ನಿರ್ಮಲಾ ಅವರು ಜಗತ್ತಿನ 36ನೇ ಪ್ರಭಾವಿಶಾಲಿ ಮಹಿಳೆಯಾಗಿದ್ದು, 2023ರಲ್ಲಿ 32ನೇ ಸ್ಥಾನ ಪಡೆದಿದ್ದಾರೆ.

ರೋಶ್ನಿ ನಾಡಾರ್‌ ಮಲ್ಹೋತ್ರಾ(42ವರ್ಷ) ಎಚ್‌ ಸಿಎಲ್‌ ಟೆಕ್ನಾಲಜೀಸ್‌ ಅಧ್ಯಕ್ಷೆಯಾಗಿರುವ ಇವರು ಭಾರತದ ಶ್ರೀಮಂತ ಉದ್ಯಮಿ ಹಾಗೂ ದಾನಿಯಾಗಿದ್ದಾರೆ. ಭಾರತದ ಐಟಿ ಕಂಪನಿಯನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಮಲ್ಹೋತ್ರಾ 2019ರಲ್ಲಿ ಪೋರ್ಬ್ಸ್‌ ಪಟ್ಟಿಯಲ್ಲಿ 54ನೇ ಸ್ಥಾನ, 2020ರಲ್ಲಿ 55ನೇ ಸ್ಥಾನ ಹಾಗೂ 2023ರಲ್ಲಿ 60ನೇ ಸ್ಥಾನ ಪಡೆದಿದ್ದಾರೆ.

ಸೋಮ ಮಂಡಲ್‌ (60ವರ್ಷ) ಪ್ರಸ್ತುತ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2021ರ ಜನವರಿಯಲ್ಲಿ ಅಧ್ಯಕ್ಷೆ ಹುದ್ದೆಗೇರುವ ಮೂಲಕ ಕಂಪನಿಯ ಇತಿಹಾಸದಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಭುವನೇಶ್ವರದಲ್ಲಿ ಜನಿಸಿರುವ ಮಂಡಲ್‌, 1984ರಲ್ಲಿ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದರು. ಕೈಗಾರಿಕಾ ಕ್ಷೇತ್ರದಲ್ಲಿ 35 ವರ್ಷಕ್ಕೂ ಅಧಿಕ ಅನುಭವ ಹೊಂದಿದ್ದಾರೆ.

ಕಿರಣ್‌ ಮಜುಂದಾರ್‌ ಶಾ (70ವರ್ಷ) ಬಯೋಕಾನ್‌ ಲಿಮಿಟೆಡ್‌ ನ ಮುಖ್ಯಸ್ಥರಾಗಿದ್ದು, ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. ಇಂಡಿಯನ್‌ ಇನ್ಸ್‌ ಟಿಟ್ಯೂಟ್‌ ಆಫ್‌ ಮ್ಯಾನೇಜ್‌ ಮೆಂಟ್‌ ನ ಮಾಜಿ ಅಧ್ಯಕ್ಷರಾಗಿದ್ದಾರೆ. ವಿಜ್ಞಾನ ಮತ್ತು ರಸಾಯನ ಶಾಸ್ತ್ರಕ್ಕೆ ನೀಡಿದ ಕೊಡುಗೆಗಾಗಿ ಹಲವಾರು ಪ್ರಶಸ್ತಿಗೆ ಶಾ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.