Crime: ಒಂದೂವರೆ ಸಾವಿರ ರೂ.ಗೆ ವ್ಯಕಿ ಕೊಲೆ!


Team Udayavani, Dec 7, 2023, 10:29 AM IST

7-bng-crime

ಬೆಂಗಳೂರು: ಒಂದೂವರೆ ಸಾವಿರ ರೂ. ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳದಲ್ಲಿ ಕೂಲಿ ಕಾರ್ಮಿಕನನ್ನು ಎಲೆಕ್ಟ್ರಿಷಿಯನ್‌ ಕೊಲೆಗೈದಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಿಂಗಸಂದ್ರ ನಿವಾಸಿ ಗೋಪಾಲ (35) ಕೊಲೆಯಾದ ಕೂಲಿ ಕಾರ್ಮಿಕ. ಕೃತ್ಯ ಎಸಗಿದ ಎಲೆಕ್ಟ್ರಿಷಿಯನ್‌ ಗಿರೀಶ್‌ ತಲೆಮರೆಸಿಕೊಂಡಿದ್ದಾನೆ.

ಕೆಲ ತಿಂಗಳ ಹಿಂದೆ ಗೋಪಾಲ ಸ್ನೇಹಿತ ಕರಿಗೌಡ ಎಂಬಾತನಿಂದ ಗಿರೀಶ್‌ ಒಂದೂವರೆ ಸಾವಿರ ರೂ. ಸಾಲ ಪಡೆದುಕೊಂಡಿದ್ದ. ಆದರೆ, ನಿಗದಿತ ಸಮಯಕ್ಕೆ ವಾಪಸ್‌ ನೀಡಿರಲಿಲ್ಲ. ಈ ವಿಚಾರವನ್ನು ಗೋಪಾಲನ ಬಳಿ ಕರಿಗೌಡ ಹೇಳಿಕೊಂಡಿದ್ದ. ಆದರಿಂದ ಗೋಪಾಲ, ಗಿರೀಶ್‌ಗೆ ಕರೆ ಮಾಡಿ, ಕರಿಗೌಡನ ಹಣ ವಾಪಸ್‌ ಕೊಡುವಂತೆ ಎಚ್ಚರಿಕೆ ನೀಡಿದ್ದಾನೆ. ಆಗ ಗಿರೀಶ್‌ ಹಣ ಕೊಡುವುದಾಗಿ ಹೇಳಿದ್ದ ಎಂದು ಪೊಲೀಸರು ಹೇಳಿದರು.

ಈ ಮಧ್ಯೆ ಡಿ.2ರಂದು ಗೋಪಾಲ, ಕರಿಗೌಡ ಹಾಗೂ ಸ್ನೇಹಿತರಾದ ಶಶಿಧರ್‌ ಬಾರ್‌ವೊಂದರಲ್ಲಿ ಮದ್ಯ ಕುಡಿಯಲು ಹೋಗಿದ್ದಾರೆ. ಅದೇ ಬಾರ್‌ಗೆ ಪ್ರದೀಪ್‌, ಗಿರೀಶ್‌ ಕೂಡ ಬಂದಿದ್ದಾರೆ. ಅದನ್ನು ಗಮನಿಸಿದ ಕರಿಗೌಡ, ಗಿರೀಶ್‌ಗೆ ತನ್ನ ಹಣ ಕೊಡುವಂತೆ ಕೇಳಿದ್ದು, ಆಗ ಗಿರೀಶ್‌, “ಬೇರೆಯವರ ಬಳಿ ಫೋನ್‌ ಮಾಡಿ ಬೆದರಿಕೆ ಹಾಕಿರುವೆ, ಹಣ ಕೊಡುವುದಿಲ್ಲ’ ಎಂದಿದ್ದಾನೆ. ಅಲ್ಲೇ ಇದ್ದ ಗೋಪಾಲ್‌, ಗಿರೀಶ್‌ಗೆ ಹೊಡೆದಿದ್ದಾನೆ. ಬಳಿಕ ಇತರೆ ಸ್ನೇಹಿತರು ಸಂಧಾನ ಮಾಡಿದ್ದಾರೆ. ಆಗ ಫೋನ್‌ ಪೇ ಮೂಲಕ ಗಿರೀಶ್‌, ಕರಿಗೌಡನ ಖಾತೆಗೆ ಹಣ ಹಾಕಿದ್ದಾನೆ. ಬಳಿಕ ಎರಡು ಗುಂಪಿನವರು ಬಾರ್‌ನಿಂದ ಮನೆಗೆ ಹೋಗಿದ್ದಾರೆ ಎಂದು ಪೊಲೀಸರು ಹೇಳಿದರು.

ಮನೆಗೆ ಕರೆಸಿಕೊಂಡು ಚಾಕು ಇರಿದ: ಬಾರ್‌ನಲ್ಲಿ ನಡೆದ ಘಟನೆಯಿಂದ ಆಕ್ರೋಶಗೊಂಡಿದ್ದ ಗಿರೀಶ್‌, ಮನೆಗೆ ಹೋಗಿ, ಸ್ನೇಹಿತ ಶಶಿಧರ್‌ ಮತ್ತು ಗೋಪಾಲಗೆ ಫೋನ್‌ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಅದರಿಂದ ಕೋಪಗೊಂಡ ಗೋಪಾಲ, ತನ್ನ ಸ್ನೇಹಿತರ ಜತೆ ಗಿರೀಶ್‌ ಮನೆಗೆ ಹೋಗಿ ಜಗಳ ತೆಗೆದು, ಗಿರೀಶ್‌ಗೆ ಸರಿಯಾಗಿ ಮಾತನಾಡುವಂತೆ ಹೇಳಿ, ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಅಡುಗೆ ಮನೆಯಿಂದ ಚಾಕು ತಂದ ಗಿರೀಶ್‌, ಗೋಪಾಲನ ಬೆನ್ನು ಹಾಗೂ ಎದೆ ಭಾಗಕ್ಕೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ರಸ್ತೆ ಅಪಘಾತ ಎಂದು ಆಸ್ಪತ್ರೆಗೆ ದಾಖಲು

ಚಾಕು ಇರಿತದಿಂದ ತೀವ್ರ ರಕ್ತಸ್ರಾವವಾಗಿದ್ದರಿಂದ ಗೋಪಾಲನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಘಟನೆ ಬಗ್ಗೆ ಆಸ್ಪತ್ರೆ ವೈದ್ಯರು ಕೇಳಿದಾಗ ರಸ್ತೆ ಅಪಘಾತವಾಗಿ ಯಾವುದೋ ವಸ್ತು ಚುಚ್ಚಿಕೊಂಡಿದೆ ಎಂದು ಸುಳ್ಳು ಹೇಳಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ, ಒಳಭಾಗದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರಿಂದ ಚಿಕಿತ್ಸೆ ಫ‌ಲಕಾರಿಯಾಗದೆ ಡಿ.5ರಂದು ನಸುಕಿನಲ್ಲಿ ಮೃತಪಟ್ಟಿದ್ದಾನೆ.

ಈ ಸಂಬಂಧ ವಿಷಯ ತಿಳಿದು ಆಸ್ಪತ್ರೆಗೆ ತೆರಳಿದ ಪೊಲೀಸರಿಗೂ ಗೋಪಾಲ ಸ್ನೇಹಿತರು ರಸ್ತೆ ಅಪಘಾತದ ಕಥೆ ಕಟ್ಟಿದ್ದರು. ಬಳಿಕ ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಘಟನೆಯನ್ನು ವಿವರಿಸಿದ್ದಾರೆ.

ಈ ಸಂಬಂಧ ಗೋಪಾಲ ಸ್ನೇಹಿತರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿ ಗಿರೀಶ್‌ಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.