Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ


Team Udayavani, Dec 8, 2023, 5:57 PM IST

Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ

ಬೀದರ: ಸರ್ಕಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವುದು ಕಷ್ಟದ ಕೆಲಸ. ಜತೆಗೆ ವಿದ್ಯಾಭ್ಯಾಸಕ್ಕೆ ಸಮಯದ ವ್ಯರ್ಥ ಸಹ. ಇದನ್ನು ಮನಗಂಡು ಶಾಲಾ ಶಿಕ್ಷಕ ಬಾಂಧವರು ದಾನಿಗಳ ನೆರವಿನಿಂದ ವಾಶಿಂಗ್‌ ಮಶೀನ್‌ (ಬಟ್ಟೆ ಒಗೆಯುವ ಯಂತ್ರ)ಗಳ ಸೌಲಭ್ಯ ಕಲ್ಪಿಸಿ ಅನುಕೂಲ ಮಾಡಿಕೊಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಬೀದರ ತಾಲೂಕಿನ ಘೋಡಂಪಳ್ಳಿಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಮಕ್ಕಳಿಗಾಗಿ ವಿಶೇಷ ಸೌಲತ್ತು ಒದಗಿಸಿ ಶಿಕ್ಷಕರು ಮತ್ತು ಮೇಲ್ವಿಚಾರಕರು ಸೈ ಎನಿಸಿದ್ದಾರೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ನೂರು ಪ್ರತಿಶತ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡುವ ಈ ವಸತಿ ಶಾಲೆ ಈಗ ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ಇಂಥದ್ದೊಂದು ವ್ಯವಸ್ಥೆ ಹೊಂದಿದ ರಾಜ್ಯದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ.

ವಸತಿ ಶಾಲೆಗಳು ಎಂದಾಕ್ಷಣ ಮೂಲಸೌಕರ್ಯಗಳ ಕೊರತೆ ದೂರುಗಳೇ ಹೆಚ್ಚು. ನೀರು, ಸ್ವತ್ಛತೆ ಹೀಗೆ ಒಂದಿಲ್ಲೊಂದು ಸಮಸ್ಯೆಗಳು ಸಾಮಾನ್ಯ. ಅದರೊಟ್ಟಿಗೆ ತಮ್ಮ ಬಟ್ಟೆಗಳನ್ನು ಶುಚಿಗೊಳಿಸಿಕೊಳ್ಳುವುದು ವಿದ್ಯಾರ್ಥಿಗಳಿಗೆ ಹರಸಾಹಸವೇ ಸರಿ.
ಅದರಲ್ಲೂ ಗಂಡು ಮಕ್ಕಳಿಗೆ ದೊಡ್ಡ ಹಿಂಸೆ. ವಾರದ ರಜೆ ಬಂದರೆ ಸಾಕು ಬಟ್ಟೆಗಳನ್ನು ತೊಳೆಯುವುದರಲ್ಲೇ ಅವರು ಸಮಯ ಕಳೆಯುತ್ತಾರೆ. ಕೆಲ ಮಕ್ಕಳು ಸಮೀಪದ ಊರಿನವರಾಗಿದ್ದರೆ ಮನೆಗೆ ಕಳುಹಿಸುತ್ತಾರೆ. ಇದರಿಂದ ಓದಲು ಸಮಯ ವ್ಯರ್ಥವಾಗಿ ವಿದ್ಯಾರ್ಥಿಗಳ ಕಲಿಕೆ ಮೇಲೂ ಪರಿಣಾಮ ಬೀಳುತ್ತಿದೆ.

ಮಕ್ಕಳ ಈ ಪಡಿಪಾಟಲು ಗಮನಿಸಿದ ವಸತಿ ಶಾಲೆಯ ಪ್ರಾಚಾರ್ಯರು ಮತ್ತು ಮೇಲ್ವಿಚಾರಕರು ಬಟ್ಟೆ ಒಗೆಯುವ ಕಷ್ಟದಿಂದ ಮುಕ್ತಿ ದೊರಕಿಸಿ ನಿರಾಳರನ್ನಾಗಿಸಿದ್ದಾರೆ. ಒಂದು ವರ್ಷದ ಹಿಂದೆ ದಾನಿಗಳು-ಶಿಕ್ಷಕರ ನೆರವಿನಿಂದಲೇ 9 ವಾಶಿಂಗ್‌ ಮಶೀನ್‌ಗಳನ್ನು ಖರೀದಿಸಿ ಬಟ್ಟೆ ಶುಚಿಗಾಗಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಟ್ಟು 550 ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಓದುತ್ತಿದ್ದು, ಈಗ ಅವರೆಲ್ಲರೂ ಪ್ರತಿ ದಿನ ಕೋಣೆಗಳ ಪಾಳಿಯಂತೆ ಯಂತ್ರದ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ.

ಗುಣಮಟ್ಟದ ಐಎಫ್‌ಬಿ ಕಂಪನಿಯ ವಾಶಿಂಗ್‌ ಮಶೀನ್‌ಗಳನ್ನು ನೇರವಾಗಿ ಡೀಲರ್‌ಗಳ ಮೂಲಕ ಖರೀದಿ ಮಾಡಲಾಗಿದೆ. ಪ್ರತಿ ಯಂತ್ರಕ್ಕೆ 33 ಸಾವಿರ ರೂ.ಗಳಂತೆ 2.97 ಲಕ್ಷ ರೂ. ರೂ. ವೆಚ್ಚದಲ್ಲಿ ಖರೀದಿಸಲಾಗಿದೆ. ಯಂತ್ರಗಳಿಗೆ ನೀರು ಮತ್ತು ವಿದ್ಯುತ್‌ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿ ವಿದ್ಯಾರ್ಥಿಗಳಿಗೆ ಬಟ್ಟೆ ಒಗೆದುಕೊಳ್ಳಲು ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ದಶಕದ ಹಿಂದೆ ರಾಜ್ಯದಲ್ಲೇ ಮೊದಲು ತರಗತಿಗಳು ಮತ್ತು ಕಚೇರಿಯಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ
ಕಲಿಕೆ ಮೇಲೆ ಕಣ್ಗಾವಲು ಮಾಡಿಕೊಂಡಿದ್ದ ಸರ್ಕಾರಿ ವಸತಿ ಶಾಲೆಯಲ್ಲಿ ಈಗ ವಿದ್ಯಾರ್ಥಿಗಳ ಮೇಲಿನ ಕೆಲಸದ ಹೊರೆ ತಪ್ಪಿಸಿ ಅಭ್ಯಾಸಕ್ಕೆ ಸಹಕಾರಿಯಾಗಿ ಹೊಸ ಪ್ರಯೋಗ ಮಾಡಿರುವುದು ವಿಶೇಷ. ಇತರೆ ವಸತಿ ಶಾಲೆಗಳು ಈ ರೀತಿಯ ವ್ಯವಸ್ಥೆ ಕಲ್ಪಿಸಲು
ಮುಂದಾಗಲಿ. ಅದಕ್ಕೆ ಸಾರ್ವಜನಿಕ ದಾನಿಗಳು ಕೈಜೋಡಿಸಲಿ.

ವಿದ್ಯಾರ್ಥಿಗಳಿಗೆ ಓದಲು ಸಮಯ ವ್ಯರ್ಥ ಆಗುವುದನ್ನು ತಪ್ಪಿಸಲು ಘೋಡಂಪಳ್ಳಿ ಅಟಲ್‌ ಬಿಹಾರಿ ವಾಜಪೇಯಿ ವಸತಿ ಶಾಲಾ-ಕಾಲೇಜಿನಲ್ಲಿ ಒಟ್ಟು 9 ವಾಶಿಂಗ್‌ ಮಶೀನ್‌ಗಳನ್ನು ಖರೀದಿಸಲಾಗಿದೆ. ದಾನಿಗಳು, ಶಿಕ್ಷಕರ ಸಹಾಯದಿಂದ ಈ ವ್ಯವಸ್ಥೆ ಮಾಡಲು
ಸಾಧ್ಯವಾಗಿದ್ದು, ಒಟ್ಟು 3 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಶಾಲೆಯ 550 ಮಕ್ಕಳು ಕಳೆದ ಒಂದು ವರ್ಷದಿಂದ ಈ ಯಂತ್ರಗಳ
ಉಪಯೋಗ ಪಡೆದುಕೊಳ್ಳುತ್ತಿದ್ದಾರೆ.
ಶರಣಪ್ಪ ಬಿರಾದಾರ, ಪ್ರಾಚಾರ್ಯರು.

*ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Arrested: ಉಪ್ಪಳದಲ್ಲಿ ಯುವಕನ ಕೊಲೆ ಪ್ರಕರಣ: 11 ವರ್ಷಗಳ ಬಳಿಕ ಆರೋಪಿ ಬಂಧನ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.