Vitla: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕ ಮೃತ್ಯು
Team Udayavani, Dec 12, 2023, 3:32 PM IST
ಸಾಂದರ್ಭಿಕ ಚಿತ್ರ
ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತಪಟ್ಟ ದುರ್ದೈವಿ.
ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈತ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.