Yakshagana ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ

ಇಡೀ ರಾತ್ರಿ ಯಕ್ಷಗಾನ ಸಂಗತಿ ಮತ್ತೆ ಮುನ್ನೆಲೆಗೆ

Team Udayavani, Dec 13, 2023, 7:20 AM IST

Yakshagana ಹೈಕೋರ್ಟ್‌ ಸಮ್ಮತಿಸಿದರೂ ಪ್ರದರ್ಶನಕ್ಕೆ ತಾಂತ್ರಿಕ ಸಮಸ್ಯೆಯೇ ಅಡ್ಡಿ

ಮಂಗಳೂರು: ಕೊರೊನಾ ಪೂರ್ವದಲ್ಲಿದ್ದಂತೆಯೇ ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದರೂ ಅದರ ಅನುಷ್ಠಾನಕ್ಕೆ ತಾಂತ್ರಿಕ ಸಮಸ್ಯೆಯೊಂದು ಎದುರಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಮೇಳಗಳಿಗೆ ಕೊರೊನಾ ಪೂರ್ವ ದಲ್ಲಿದ್ದಂತೆಯೇ ಇಡೀ ರಾತ್ರಿ ಪ್ರದರ್ಶ ನಕ್ಕೆ ಅನುಮತಿ ಕೋರಿ ಹೈಕೋರ್ಟ್‌ಗೆ ಕೃಷ್ಣ ಕುಮಾರ್‌ ಅವರು ಅರ್ಜಿ ಹಾಕಿ 15-11-2022ರ ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆಯಾಜ್ಞೆ ಕೋರಿದ್ದರು. ಇದಕ್ಕೆ ಸಮ್ಮತಿಸಿರುವ ಹೈಕೋರ್ಟ್‌, ಶಬ್ದ ಮಾಲಿನ್ಯ ನಿಯಮಾವಳಿ-2000 ಅನ್ನು ಉಲ್ಲಂಘಿಸಬಾರದು ಎಂದು ಷರತ್ತು ಹಾಕಿದೆ. ಅರ್ಜಿದಾರರು ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಬೇಕು, ಅವರು ಈ ಆದೇಶದಲ್ಲಿನ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬಹುದು ಎಂದಿದೆ.

ಡೆಸಿಬೆಲ್‌ ಸಮಸ್ಯೆ
ಹೈಕೋರ್ಟ್‌ ಸಮ್ಮತಿಸಿದ್ದರೂ ಕಾರ್ಯ ಯೋಗ್ಯವಲ್ಲ ಎಂಬ ಅಭಿಪ್ರಾಯವಿದೆ. ಕಾರಣ ಇಲ್ಲಿ ಮುಖ್ಯ ಸಮಸ್ಯೆ ಡೆಸಿಬಲ್‌(ಡಿಬಿ)ನದ್ದು. ಜನರು ಮಾತನಾಡುವಾಗಿನ ಧ್ವನಿಯೇ 50 ಡಿಬಿ ಇರುತ್ತದೆ. ಚೆಂಡೆಯ ಪೆಟ್ಟು 200 ಡಿಬಿ, ಧ್ವನಿವರ್ಧಕದ ಡಿಬಿ ಕನಿಷ್ಠ 450-500 ರಷ್ಟಿರುತ್ತದೆ. ನಾವು ಈ ವಿಷಯದಲ್ಲಿ ಹಿಂದೆಯೇ ಸೌಂಡ್‌ ಎಂಜಿನಿಯರ್‌ಗಳೊಂದಿಗೆ ಸಮಾಲೋಚಿಸಿದ್ದೇವೆ. ಆದರೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಅನ್ವಯ ರಾತ್ರಿ 10ರಿಂದ ಬೆಳಗ್ಗೆ 6 ರ ವರೆಗೆ 50 ಡೆಸಿಬೆಲ್‌ ಮೀರುವಂತಿಲ್ಲ, ಹಾಗಾಗಿ ಇದು ಕಷ್ಟ ಎನ್ನುತ್ತಾರೆ ಕಟೀಲು ಮೇಳಕ್ಕೆ ಸಂಬಂಧಿಸಿದವರು.

ಜಿಲ್ಲಾಧಿಕಾರಿಯವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಆಟಗಳು ಪರಂಪರೆ, ಸಂಪ್ರದಾಯ ದಂತೆ ನಡೆದುಕೊಂಡು ಬಂದಿರುವ ಸೇವೆ ಎನ್ನುವ ಅಂಶವನ್ನು ಗಮನದಲ್ಲಿರಿಸಿ ರಾತ್ರಿ 12.30ರ ವರೆಗೂ ಕಾಲಮಿತಿಯಲ್ಲಿ ವಿಶೇಷ ಪ್ರಕರಣವೆಂದು ಅನುಮತಿ ನೀಡಿದ್ದಾರೆ. ಈ ಮಧ್ಯೆ ಕಟೀಲು ಮೇಳವು ಕಳೆದ ವರ್ಷದಿಂದ ಕಾಲಮಿತಿ ಪ್ರದರ್ಶನ ಆರಂಭಿಸಿದ್ದು, ಈ ವರ್ಷದ ತಿರುಗಾಟಕ್ಕೂ ಚಾಲನೆ ನೀಡಿದೆ.

ರಾತ್ರಿ ಪೂರ್ತಿ ಆಟಗಳಿವೆಯೇ?
ಕರಾವಳಿಯ ಬಹುತೇಕ ಮೇಳಗಳು ಕಾಲಮಿತಿ ಪ್ರಯೋಗಕ್ಕೆ ಒಗ್ಗಿಕೊಂಡಿವೆ. ಕೆಲವೇ ಮೇಳಗಳು ಹಳ್ಳಿಗಳಲ್ಲಿ ರಾತ್ರಿ ಪೂರ್ತಿ ಪ್ರದರ್ಶನ ಪ್ರದರ್ಶಿಸುತ್ತಿವೆ. ಅಲ್ಲಿ ಸಮಸ್ಯೆಯಾಗಿಲ್ಲ. ಆದರೆ ಕಟೀಲು ಮೇಳದವರು ನಗರ, ಪಟ್ಟಣದ ವಸತಿ ಪ್ರದೇಶದಲ್ಲಿ ಹೆಚ್ಚಾಗಿ ಪ್ರದರ್ಶನ ನೀಡುತ್ತಾರೆ. ರಾತ್ರಿ ಯಾರಾದರೂ ಅಡ್ಡಿಪಡಿಸಿದರೆ ಅದು ಭಕ್ತರ ಸೇವೆಗೆ ಅಡ್ಡಿಯಾದಂತೆ ಎನ್ನುತ್ತಾರೆ ಕಟೀಲು ಮೇಳದವರು.

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.