Arrest: ಕಟ್ಟಡ ನಿರ್ಮಾಣ ಸಾಮಗ್ರಿ ಕಳವು ಪ್ರಕರಣ: ಅಸ್ಸಾಂ ಮೂಲದ ಕಾರ್ಮಿಕ ಬಂಧನ
Team Udayavani, Dec 15, 2023, 10:34 PM IST
ಬಂಟ್ವಾಳ: ಪುದು ಗ್ರಾಮದ ಅಮ್ಮೆಮಾರ್ನಲ್ಲಿ ಶೆಡ್ನಲ್ಲಿದ್ದ 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿ ಅಸ್ಸಾಂ ಮೂಲದ ಕಾರ್ಮಿಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುದು ಗ್ರಾಮದ ಅಮ್ಮೆಮ್ಮಾರ್ ನಿವಾಸಿ ಸಿವಿಲ್ ಎಂಜಿನಿಯರ್ ಹಮ್ಮಬ್ಬ ಮರ್ಜೂಕ್ ಅವರ ಬಳಿ ಕೆಲಸಕ್ಕಿದ್ದ ಕಾರ್ಮಿಕ ಮೊಹಮ್ಮದ್ ಶರೂಪ್ ಆಲಂ ಬಂಧಿತ ಆರೋಪಿಯಾಗಿದ್ದಾನೆ. ಎಂಜಿನಿಯರ್ ಹಮ್ಮಬ್ಬ ಅವರು ಬೆಂಗಳೂರಿಗೆ ಹೋಗಿದ್ದ ವೇಳೆ ಆರೋಪಿಯು ಬಿಲ್ಡಿಂಗ್ ಕೆಲಸಕ್ಕೆ ಉಪಯೋಗಿಸುತ್ತಿದ್ದ ಕಬ್ಬಿಣದ ಶೀಟು, ಜಾಕ್, ಸ್ಕಪೋಲ್ಡಿಂಗ್ ಇತ್ಯಾದಿ ಸೊತ್ತುಗಳನ್ನು ಅವರ ಮನೆಯ ಪಕ್ಕದಲ್ಲಿದ್ದ ಶೆಡ್ನಿಂದ ಕಳವು ಮಾಡಿದ್ದನು.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಡಿ. 14ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.