BJP; ಯತ್ನಾಳ್ ರಿಂದ ಕೀಳು ರಾಜಕೀಯ ಸಂಸ್ಕೃತಿ ಸೃಷ್ಟಿ: ಎಚ್.ವಿಶ್ವನಾಥ್ ಕಿಡಿ

ವಿಜಯೇಂದ್ರ ಲಂಚಾವತಾರ... ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಟ್ಟರೆ...

Team Udayavani, Dec 17, 2023, 5:40 PM IST

vishwanath H

ವಿಜಯಪುರ : ಬಿಜೆಪಿ ಹಿರಿಯ ಶಾಸಕರಾಗಿರುವ ಬಸನಗೌಡ ಪಾಟೀಲ ಯತ್ನಾಳ್ ರಾಜಕೀಯ ವಿರೋಧಿಗಳ ವಿರುದ್ಧ ಟೀಕೆಯ ಬರದಲ್ಲಿ ಬಳಸುತ್ತಿರುವ ಪದ ಬಳಕೆ ಅತ್ಯಂತ ಕೀಳುಮಟ್ಟದಿಂದ ಕೂಡಿದೆ. ಕರ್ನಾಟಕ ಕೀಳು ರಾಜಕೀಯ ಸಂಸ್ಕೃತಿ ಸೃಷ್ಟಿಗೆ ಯತ್ನಾಳ ವರ್ತನೆ ಕಾರತಣವಾಗುತ್ತಿದೆ ಎಂದು ಮಾಜಿ ಸಚಿವ, ಬಿಜೆಪಿ ಹಿರಿಯ ಮೇಲ್ಮನೆ ಶಾಸಕ ಎಚ್.ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿದರು.

ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ವೇಳೇ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಮ್ಮದೇ ಸಮುದಾಯದ ಹಿರಿಯರಾದ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಬಗ್ಗೆ ಯತ್ನಾಳ್ ಬಳಸಿರುವ ಪದಗಳು ನಾರೋಗ್ಯಕರ ರಾಜಕೀಯ ಹಾಗೂ ಮುಂದಿನ ಪೀಳಿಗೆಗೆ ಕೆಟ್ಟ ಸಂದೇಶ ರವಾನಿಸಲಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯದ ಮಟ್ಟಿಗೆ ಯತ್ನಾಳ್ ಅಪವಾದ ಎನಿಸುವಂತೆ ವರ್ತಿಸುತ್ತಿದ್ದು, ರಾಜಕೀಯ ವೈರುಧ್ಯ ಇದ್ದ ಮಾತ್ರಕ್ಕೆ ಕೀಳು ಮಟ್ಟದ ಪದ ಬಳಕೆ ಯಾರಿಂದಲೂ ಸರಿಯಲ್ಲ. ಹುಚ್ಚರಂತೆ ಮಾತನಾಡುವ ಯತ್ನಾಳ ಹೇಳಿಕೆಗೆ ಯಾರೂ ಬೆಲೆ ಕೊಡಬೇಡಿ ಎಂದು ಸಲಹೆ ನೀಡಿದರು.

ತಮ್ಮದೇ ಸಮುದಾಯಕ್ಕೆ ಸೇರಿದ ನಾಯಕನ ಬಗ್ಗೆ ಅತ್ಯಂತ ಕೀಳು ಪದಗಳನ್ನು ಬಳಸಲು ಯತ್ನಾಳಗೆ ನಾಚಿಕೆ ಆಗುವುದಿಲ್ಲವೇ, ಇಂಥವರು ನಾಯಕನಾಗಲು ಸಾಧ್ಯವೇ. ಅಯೋಗ್ಯತನಕ್ಕೂ ಒಂದು ಮಿತಿ ಇರಬೇಕು. ರಾಜಕೀಯದ ಮುಂದಿನ ಯುವ ಪೀಳಿಗೆಗೆ ನೀನು ಕೊಡುವ ಸಂದೇಶವಾದರೂ ಏನು ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಎಚ್.ವಿಶ್ವನಾಥ್, ತಮ್ಮ ಮಗ ಆರ್ಟಿಜಿಎಸ್ ಮೂಲಕ 20 ಕೋಟಿ ರೂ. ಲಂಚ ಪಡೆದ ಹಗರಣದಿಂದಾಗಿಯೇ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅಧಿಕಾರ ಕಳೆದುಕೊಂಡು, ಜೈಲಿಗೆ ಹೋಗಬೇಕಾಯಿತು ಎಂದು ಕಿಡಿ ಕಾರಿದರು.

ಮುಖ್ಯಮಂತ್ರಿಯಾಗಿದ್ದ ಅಪ್ಪನ ಸಹಿ ಮಾಡಿ ತಂದೆಯನ್ನೇ ಜೈಲಿಗೆ ಕಳಿಸಿದ ವಿಜಯೇಂದ್ರ ಎಂಬ ಪೆದ್ದ, ಲಂಚಕೋರ ಭ್ರಷ್ಟಾಚಾರಿ ರಾಜ್ಯದ ಬಿಜೆಪಿ ಅಧ್ಯಕ್ಷನಾಗಿದ್ದಾನೆ. ನಾನು ಬಿಜೆಪಿ ಶಾಸಕನಾಗಿದ್ದರೂ ನನ್ನ ಮನಸ್ಸು ಬೇರೆ ಇದೆ ಎಂದರು.

ಮೈಸೂರು ಸಂಸ್ಥಾನ ಅಭಿವೃದ್ಧಿ ಮಾಡಿದ ಟಿಪ್ಪು ಸುಲ್ತಾನ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ ಹೆಸರು ಇರಿಸಿದರೆ ತಪ್ಪೇನಿದೆ ಎಂದು ಪ್ರಶ್ನಿಸಿದ ವಿಶ್ವನಾಥ, ನಿಜಕ್ಕೂ ಟಿಪ್ಪು ಹೆಸರು ಇರಿಸಿದರೆ ನನಗಂತೂ ಸಂತೋವಾಗಲಿದೆ ಎಂದರು.

ಟಿಪ್ಪು ಸುಲ್ತಾನ ಮುಸ್ಲೀಮ್ ಎನ್ನುವದು ಸರಿಯಲ್ಲ, ಬಿಜೆಪಿ ಇಂತ ಅಯೋಗ್ಯತೆ ತಪ್ಪಬೇಕು. ಮುಸ್ಲಿಂ, ಹಿಂದೂ ಕ್ರಿಶ್ಚಿಯನ್ ಅಂತೆಲ್ಲ ಜಾತಿ-ಧರ್ಮದ ಕೋಲಾಹಲ ಮೊದಲು ಬಿಡಬೇಕು. ಜನರ ಹೊಟ್ಟೆಗೆ ಏನು ಬೇಕು, ಆರೋಗ್ಯ, ಶಿಕ್ಷಣದ ಬಗ್ಗೆ ವಿಚಾರಿಸಬೇಕು ಎಂದರು.

ಉತ್ತರ ಕರ್ನಾಟಕದ 14 ಜಿಲ್ಲೆಗಳು ಅಭಿವೃದ್ಧಿಯಿಂದ ಹಿಂದೆ ಉಳಿದಿವೆ. ಈ ಭಾಗದ ಸಮಸ್ಯೆ, ಕುಂದು ಕೊರತೆಗಳ ಕುರಿತು ಚರ್ಚಿಸಲೆಂದೇ ಬೆಳಗಾವಿಯ ಸುವರ್ಣ ಸೌಧ ಕಟ್ಟಲಾಗಿದೆ. ಆದರೆ ಹೊಂದಾಣಿಕೆ ರಾಜಕೀಯ ಇರುವ ಈ ಭಾಗದಲ್ಲಿ ಅಕ್ಷರ ಹಾಗೂ ಆರೋಗ್ಯದ ಮೇಲೆ ಖಾಸಗೀಯವರು ನಡೆಸುತ್ತಿರುವ ಪಾರುಪತ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.

ಅಭಿವೃದ್ಧಿ ವಿಷಯದಲ್ಲಿ ಈ ಭಾಗದ ಎಲ್ಲ ಜಿಲ್ಲೆಗಳ ಜನರು ಒಗ್ಗೂಡಿ ಧ್ವನಿ ಎತ್ತಬೇಕು ಎಂದು ಸಲಹೆ ನೀಡಿದ ವಿಶ್ವನಾಥ, ಭರುವ ದಿನಗಳಲ್ಲಿ ಈ ಭಾಗದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.