ಭ್ರೂಣ ಹತ್ಯೆ: ಸ್ಕ್ಯಾನಿಂಗ್ ಯಂತ್ರಗಳ ಡಾಟಾ ಅಳಿಸಿ ಹಾಕಿದ ಸೆಂಟರ್ಗಳು
Team Udayavani, Dec 20, 2023, 11:42 PM IST
ಮಂಡ್ಯ: ಸ್ಕ್ಯಾನಿಂಗ್ ಯಂತ್ರಗಳಲ್ಲಿರುವ ಡಾಟಾವನ್ನು ಅಳಿಸಿ ಹಾಕಿರುವ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದ ಎರಡು ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅ ಧಿಕಾರಿಗಳು ಬೀಗ ಜಡಿದಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗವೇ ಇರುವ ಲಕ್ಷ್ಮೀ ಡಯಾಗ್ನೊಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೊàಸ್ಟಿಕ್ ಸೆಂಟರ್ಗಳ ಮೇಲೆ ಉಪವಿಭಾಗಾಧಿ ಕಾರಿ ನಂದೀಶ್ ನೇತೃತ್ವದ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಸೀಜ್ ಮಾಡಿದೆ.
ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ವೈದ್ಯರು ಅಲ್ಲಿಂದ ಕಾಲ್ಕಿತ್ತರೆ, ಸಿಬಂದಿ ಗಲಿಬಿಲಿಗೊಂಡಿದ್ದಾರೆ. ಅಧಿ ಕಾರಿಗಳ ಪರಿಶೀಲನೆಗೆ ಸಿಬಂದಿ ಕಳ್ಳಾಟ ಆಡಿದ್ದಾರೆ. ಸಿಸ್ಟಂನಲ್ಲಿದ್ದ ಡಾಟಾ ಅಳಿಸಿ ಹಾಕುವ ಮೂಲಕ ಅಧಿಕಾರಿಗಳ ಕಣ್ತಪ್ಪಿಸಲು ಯತ್ನ ನಡೆಸಿದ್ದಾರೆ. ಅಲ್ಲದೆ, ಅಧಿಕಾರಿಗಳಿಗೆ ಸಮರ್ಪಕವಾದ ದಾಖಲೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕಾವೇರಿ, ಲಕ್ಷ್ಮೀ ಡಯಾಗ್ನೊಸ್ಟಿಕ್ ಸೆಂಟರ್ನಲ್ಲಿ 2 ವರ್ಷಗಳ ಮಾಹಿತಿ ಅಳಿಸಿ ಹಾಕಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಅಲ್ಲದೆ, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ (ದುರ್ಬಳಕೆ ಮತ್ತು ತಡೆ) ಕಾಯ್ದೆಯ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ 2 ಸ್ಕ್ಯಾನಿಂಗ್ ಸೆಂಟರ್ಗಳನ್ನು ಬೀಗ ಜಡಿದು ಸೀಜ್ ಮಾಡಿದ್ದಾರೆ. ಜತೆಗೆ ಸಮರ್ಪಕ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ