Udupi-D.K; ಮೂರು ವರ್ಷದಲ್ಲಿ 40 ಮಂದಿ ಗಡೀಪಾರು


Team Udayavani, Dec 21, 2023, 6:45 AM IST

Udupi-D.K; ಮೂರು ವರ್ಷದಲ್ಲಿ 40 ಮಂದಿ ಗಡೀಪಾರು

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ವರ್ಷಗಳ‌ಲ್ಲಿ ಅಕ್ರಮ ಗೋ ಸಾಗಾಟ, ಹಲ್ಲೆ, ದೊಂಬಿ, ಮಟ್ಕಾ, ಮಾದಕ ದ್ರವ್ಯಗಳ ಸಾಗಾಟ, ಕೊಲೆಯತ್ನ ಹಾಗೂ ನಿರಂತರ ಅಪರಾಧಿಕ ಪ್ರಕರಣದಲ್ಲಿ ಭಾಗಿಯಾಗಿರುವ ಒಟ್ಟು 69 ಅಪರಾಧಿಗಳಲ್ಲಿ 40 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ನಿರಂತರ ಅಪರಾಧಿ ಕೃತ್ಯಗಳಲ್ಲಿ ಪಾಲ್ಗೊಳ್ಳುವವರನ್ನು ಚುನಾವಣೆ ಸಂದರ್ಭದಲ್ಲಿ ಗಡೀಪಾರು ಮಾಡುವ ರೂಢಿ ಹಿಂದಿನಿಂದಲೂ ಇದೆ. ಅದಾಗ್ಯೂ ವಿವಿಧ ಪ್ರಕರಣ ಅಥವಾ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಗಡೀಪಾರು ಮಾಡಲಾಗುತ್ತದೆ.

ಗಡೀಪಾರು ಹೇಗೆ?
ಗಲಭೆ ಸೃಷ್ಟಿಸುವವರು ಅಥವಾ ಪ್ರಚೋಧನಕಾರಿ ಭಾಷಣಗಳ ಮೂಲಕ ಗಲಭೆಗೆ ಪ್ರೇರೇಪಣೆ ನೀಡುವವರು ಸಮಾವೇಶಗಳಲ್ಲಿ ಭಾಗ ವಹಿಸದಂತೆ ಅಥವಾ ಅಪರಾಧಿ ಕೃತ್ಯಗಳಲ್ಲಿ ಪಾಲ್ಗೊಳ್ಳುವ ವರನ್ನು ಕರ್ನಾಟಕ ಪೊಲೀಸ್‌ ಕಾಯ್ದೆ 1963 ಕಾಲಂ 54ರಿಂದ 63ರಂತೆ ಗಡೀಪಾರು ಮಾಡಲಾಗುತ್ತದೆ. ಗಡೀಪಾರು ಮಾಡುವ ವ್ಯಕ್ತಿಯ ಕುರಿತು ಪೊಲೀಸ್‌ ಇಲಾಖೆಯಿಂದ ಜಿಲ್ಲಾಧಿಕಾರಿ / ಉಪವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸ ಲಾಗುತ್ತದೆ. ಆ ಪ್ರಸ್ತಾವನೆ ಆಧಾರದಲ್ಲಿ ನೋಟಿಸ್‌ ಜಾರಿ ಮಾಡಲಾಗುತ್ತದೆ. ಅನಂತರ ಗಡೀಪಾರು ಪ್ರಕ್ರಿಯೆ ನಡೆಯುತ್ತದೆ.

ಗಡೀಪಾರು ಅವಧಿ
ಚುನಾವಣೆ ಅಥವಾ ವಿಶೇಷ ಸಮಾವೇಶ ಇತ್ಯಾದಿ ಸಂದರ್ಭ ಗಳಲ್ಲಿ ಕೆಲವರನ್ನು ಗುರುತಿಸಿ 6 ತಿಂಗಳ ಮಟ್ಟಿಗೆ ಗಡೀಪಾರು ಮಾಡಲಾಗುತ್ತದೆ. ಗಡೀಪಾರು ನೋಟಿಸ್‌ಗೆ ಸರಿಯಾಗಿ ಸಮಜಾಯಿಶಿಯನ್ನುಲಿಖಿತ ರೂಪದಲ್ಲಿ ನೀಡುವವರನ್ನು ಗಡಿಪಾರಿನಿಂದ ಕೈಬಿಡಲಾಗುತ್ತದೆ. ಪ್ರಕರಣದ ತೀವ್ರತೆಯ ಆಧಾರದಲ್ಲಿ ಗಡೀಪಾರು ಅವಧಿ ನಿಗದಿಯಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.

ಉಡುಪಿಯಲ್ಲಿ 2021, 2022 ಹಾಗೂ 2023ರಲ್ಲಿ 18 ಮಂದಿಗೆ ಗಡಿಪಾರಿಗಾಗಿ ನೋಟಿಸ್‌ ನೀಡಲಾಗಿತ್ತು. ಇವರಲ್ಲಿ 12 ಮಂದಿಯನ್ನು ಗಡೀಪಾರು ಮಾಡಲಾಗಿದೆ. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿದ್ದ 5, ಹಲ್ಲೆ ಮತ್ತು ದೊಂಬಿ ಪ್ರಕರಣದ 5, ಮಟ್ಕಾ 1, ಮಾದಕ ದ್ರವ್ಯ ಸಾಗಾಟ ಪ್ರಕರಣದ 2 ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ದ.ಕ.ದಲ್ಲಿ 2021 ಮತ್ತು 2022ನೇ ಸಾಲಿನಲ್ಲಿ ಯಾರನ್ನು ಗಡೀಪಾರು ಮಾಡಿಲ್ಲ. 2023ನೇ ಸಾಲಿನಲ್ಲಿ 51 ಮಂದಿಗೆ ನೋಟಿಸ್‌ ನೀಡಲಾಗಿದ್ದು, 28 ಮಂದಿಯನ್ನು ಗಡೀಪಾರು ಮಾಡಲಾಗಿದೆ. ಅಪರಾಧಿಕ ಹಿನ್ನೆಲೆಯುಳ್ಳವರಾಗಿದ್ದು ಸಾರ್ವಜನಿಕ ಜೀವ ಮತ್ತು ಸ್ವತ್ತುಗಳ ರಕ್ಷಣೆ ಹಾಗೂ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು 28 ಮಂದಿಯನ್ನು ಗಡೀಪಾರು ಮಾಡಲಾಗಿದೆ.

ಚುನಾವಣೆ ಸಹಿತ ವಿವಿಧ ಸಂದರ್ಭದಲ್ಲಿ ಗಡೀಪಾರು ನೋಟಿಸ್‌ ನೀಡಿ, ಗಡೀಪಾರು ಮಾಡಲಾಗುತ್ತದೆ. 6 ತಿಂಗಳ ಅವಧಿಗೂ ಇರುತ್ತದೆ ಮತ್ತು ವಿಸ್ತರಣೆಯೂ ಆಗುತ್ತದೆ.
-ಡಾ| ಅರುಣ್‌ ಕೆ.,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.