ಹನುಮಮಾಲಾ ವಿಸರ್ಜನೆ:ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಕಿಷ್ಕಿಂಧಾ ಅಂಜನಾದ್ರಿ
Team Udayavani, Dec 22, 2023, 10:38 PM IST
ಗಂಗಾವತಿ:ಹನುಮದ್ ವೃತದ ನಿಮಿತ್ತ ಡಿ.23,24 ರಂದು ಜರುಗುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಿಮಿತ್ತ ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಇಡೀ ಬೆಟ್ಟಕ್ಕೆ ವಿವಿಧ ಬಗೆಯ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ಇಡೀ ಅಂಜನಾದ್ರಿ ಸುಂದರವಾಗಿ ಕಂಗೊಳಿಸುತ್ತಿದೆ.
ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿರುವ ಏಳು ಬೆಟ್ಟಗಳಲ್ಲಿ ಅಂಜನಾದ್ರಿ ಪ್ರಾಕೃತಿಕವಾಗಿ ಮುಂದಿನ ಭಾಗ ಹನುಮಂತ ಮುಖವನ್ನು ಹೋಲುತ್ತಿದೆ. ಬಾಲಾಂಜನೇಯ ಚಿಕ್ಕಂದಿನಲ್ಲಿ ಸೂರ್ಯ ದೇವನನ್ನು ಕೆಂಪಾದ ಹಣ್ಣು ಎಂದು ತಿಳಿದು ತಿಂದ ರೀತಿಯಲ್ಲಿ ಇಡೀ ಬೆಟ್ಟಕ್ಕೆ ಅಳವಡಿಸಿರುವ ವಿದ್ಯುತ್ ದೀಪಗಳು ಕಾಣುತ್ತಿವೆ. ದೂರದ ಹೊಸಪೇಟೆ, ಕಮಲಾಪೂರ,ಜಿಂದಾಲ್ ಹಾಗೂ ಸುತ್ತಲಿನ ಊರುಗಳ ಜನರು ಅಂಜನಾದ್ರಿ ಗೆ ಅಳವಡಿಸಿರುವ ವಿದ್ಯುತ್ ದೀಪಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದೇ ಮೊದಲ ಭಾರಿಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ.
ಪೂರ್ವ ಸಿದ್ದತೆ ಸಭೆಯ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಹಾಗೂ ಶಾಸಕ ಗಾಲಿ ಜನಾರ್ದನರೆಡ್ಡಿ ಮೂರು ದಿನಗಳ ಕಾಲ ಇಡೀ ಬೆಟ್ಟಕ್ಕೆ ವಿದ್ಯುತ್ ಅಲಂಕಾರ ಮಾಡಲು ಸೂಚನೆ ನೀಡಿದ್ದರು.
ಇದುವರೆಗೆ ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕಿಂತ ಈ ವೈಶಿಷ್ಟ್ಯವಾಗಿ ಅದ್ದೂರಿಯಾಗಿ ಮತ್ತು ಶಿಸ್ತು ಬದ್ಧವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಹಿನ್ನೆಲೆಯಲ್ಲಿ ಇಡೀ ಜಿಲ್ಲಾಡಳಿತ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಮಾಡಿ ವ್ಯವಸ್ಥೆಗಳನ್ನು ಗಮನಿಸುತ್ತಿದ್ದರು.
ಗಂಗಾವತಿ ಜರುಗಿದ ಹನುಮಮಾಲಾ ಸಂಕೀರ್ತನಾ ಯಾತ್ರೆಯನ್ನು ಪೊಲೀಸ್ ಇಲಾಖೆ ಶಿಸ್ತು ಹಾಗೂ ಶಾಂತಿಯಿಂದ ಯಶಸ್ವಿಯಾಗಿ ನಡೆಸಿದ್ದು ಹನುಮಮಾಲಾಧಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು