Siddeshwar Swamiji ಗುರುನಮನ: 10 ಸಾವಿರ ನಾರಿಯರಿಂದ ವಚನಜ್ಞಾನ ಯಾತ್ರೆ


Team Udayavani, Dec 27, 2023, 7:45 PM IST

1-sdsdsa

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾದ ವರ್ಷದ ಸ್ಮರಣೆಗಾಗಿ ಗುರುನಮನದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದೆ. ಇದರ ಭಾಗವಾಗಿ ಬುಧವಾರ ನಗರಲ್ಲಿ ಸುಮಾರು 10 ಸಾವಿರ ಮಹಿಳೆಯರು ಸಿದ್ಧೇಶ್ವರ ಶ್ರೀಗಳು ರಚಿಸಿದ ಗ್ರಂಥಗಳನ್ನು ತಲೆಮೇಲೆ ಹೊತ್ತು ಶೋಭಾಯಾತ್ರೆ ನಡೆಸಿದರು.

ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮ ಜ.1 ರಿಂದ ಎರಡು ದಿನಗಳ ಕಾಲ ಜ್ಞಾನಯೋಗಾಶ್ರಮದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಸಂದೇಶವನ್ನು ಸಮಾಜಕ್ಕೆ ತಲುಪಿಸಲು ಡಿ.23 ರಿಂದ 31 ರ ವರೆಗೆ ಜ್ಞಾನಯೋಗಾಶ್ರಮದಿಂದ ವಿವಿಧ ವೈಚಾರಿಕ ಗೋಷ್ಠಿಗಳು ನಡೆಯುತ್ತಿವೆ.

ಶ್ರೀಗಳ ಮಹಿಳಾ ಭಕ್ತರು ಬುಧವಾರ ಶ್ರೀಸಿದ್ದೇಶ್ವರ ದೇವಸ್ಥಾನದಿಂದ ಜ್ಞಾನಯೋಗಾಶ್ರಮದ ವರೆಗೆ ಶ್ರೀಗಳು ರಚಿಸಿದ ಜ್ಞಾನನಿಧಿ ಗ್ರಂಥಗಳನ್ನು ತಲೆಮೇಲೆ ಹೊತ್ತು ಶೋಭಾಯಾತ್ರೆ ನಡೆಸಿದರು. ವಿಜಯಪುರ ನಗರ, ಜಿಲ್ಲೆ ಮಾತ್ರವಲ್ಲದೇ ನೆರೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳು ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 10 ಸಾವಿರ ಭಕ್ತೆಯರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಜ್ಞಾನನಿಧಿ ಗುರುವರ್ಯರಿಗೆ ವಿಶೇಷ ಗುರುನಮನ ಸಲ್ಲಿಸಿದರು.

ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅಕ್ಕನ ಬಗಳ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಸಾಂಪ್ರದಾಯಿ ಸೀರೆಯುಟ್ಟು, ಸಿದ್ಧೇಶ್ವರ ಶ್ರೀಗಳು ರಚಿಸಿ ಕೃತಿಗಳನ್ನು ಕೆಂಪು ವರ್ಣದ ವಸ್ತ್ರಗಳಲ್ಲಿ ಕಟ್ಟಿ, ತಲೆ ಮೇಲೆ ಹೊತ್ತು ಸಾಲಾಗಿ ಶಿಸ್ತುಬದ್ಧವಾಗಿ ಸಾಗುತ್ತಿದ್ದರು. ಮೆರವಣಿಗೆಯಲ್ಲಿ ಯುವತಿಯರು ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶೋಭಾಯಾತ್ರೆ ಮೆರವು ಹೆಚ್ಚಿಸಿದ್ದರು.

ಸಿದ್ದೇಶ್ವರ ದೇವಸ್ಥಾನದಿಂದ ಜ್ಞಾನಯೋಗಾಶ್ರಮದ ವರೆಗೆ ಜೋಡಿ ಸಾಲಿನಲ್ಲಿ ಮಹಿಳೆಯರು ಹೆಜ್ಜೆ ಹಾಕುತ್ತಿದ್ದರೆರ, ಆಶ್ರಮ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಹೂಮಳೆಗರೆದು, ಸಂಭ್ರಮವನ್ನು ಇಮ್ಮಡಿಗೊಳಿಸಿದ್ದರು.ಮತ್ತೆ ಕೆಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಸಿಹಿ ತಿನಿಸು, ನೀರು, ಪಾನೀಯ ವಿತರಿಸುವ ಮೂಲಕ ತಮ್ಮ ಸೇವೆ ಸಲ್ಲಿಸುತ್ತಿದ್ದರು.

ವಚನಜ್ಞಾನ ಪಾದಯಾತ್ರೆ ಹಿನ್ನೆಲೆಯಲ್ಲಿ ಸಿದ್ದೇಶ್ವರ ದೇವಸ್ಥಾನದಿಂದ ಜ್ಞಸಾನಯೋಗಾಶ್ರಮದ ವರೆಗೆ ಶೋಭಾಯಾತ್ರೆ ಸಾಗುತ್ತಿದ್ದ ಆಶ್ರಮ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಾಹಗಳು ರಹಿತ ರಸ್ತೆಯಲ್ಲಿ ಶ್ವೇತ ಸೀರೆ ಧರಿಸಿದ ಮಹಿಳೆಯರು ಸಿದ್ಧೇಶ್ವರ ಶ್ರೀಗಳ ಜ್ಞಾನಗ್ರಂಥಗಳನ್ನು ತಲೆಯ ಮೇಲೆ ಹೊತ್ತು ಹೆಜ್ಜೆ ಹಾಕುತ್ತಿದ್ದಾಗ ನೆರೆದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿದ್ದರು.

ಸಿದ್ಧೇಶ್ವರ ಶ್ರೀಗಳ ಭಕ್ತರು ಶಿಸ್ತು ಸಂಯಮಕ್ಕೆ ಹೆಸರಾಗಿದ್ದರೂ, ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಿತ್ತು. ಎನ್.ಸಿ.ಸಿ. ಕೆಡಿಟ್‍ಗಳು ಶೋಭಾಯಾತ್ರೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ನಿಂತು ವಚನಜ್ಞಾನ ಯಾತ್ರೆ ಸುಗಮವಾಗಿ ಸಾಗುವಂತೆ ಮಾಡುವಲ್ಲಿ ತಮ್ಮ ಸೇವೆ ನೀಡುತ್ತಿದ್ದರು.

ನಗರದ ಅಕ್ಕನ ಬಳಗ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಶ್ರೀಗಳ ಜ್ಞಾನಕೃತಿಗಳನ್ನು ಸ್ವಯಂ ಪ್ರೇರಿತವಾಗಿ ತಲೆ ಮೇಲೆ ಹೊತ್ತು ಜ್ಞಾನಪಾದಯಾತ್ರೆ ಮಾಡಿದ್ದಾರೆ. ಶೋಭಾಯಾತ್ರೆಯನ್ನು ಯಶಸ್ಸಿಗೊಳಿಸುವ ಮೂಲಕ ಮಾದರಿ ರೂಪಿಸಿದ್ದಾರೆ.
– ಹರ್ಷಾನಂದ ಶ್ರೀಗಳು ಜ್ಞಾನಯೋಗಾಶ್ರಮ ವಿಜಯಪುರ

ಸಿದ್ದೇಶ್ವರ ಶ್ರೀಗಳು ಜ್ಞಾನಕ್ಕೆ ಮಹತ್ವ ನೀಡುತ್ತಿದ್ದ ಕಾರಣ ಜ್ಞಾನಬುತ್ತಿ ಹೊತ್ತು ಸಾಗುವ ಮಹಿಳೆಯರ ಶೋಭಾಯಾತ್ರೆಯನ್ನು ವಚನ ಜ್ಞಾನ ಯಾತ್ರೆ ಎಂದು ಕರೆದಿದ್ದೇವೆ. ಇದರಿಂದ ಜನರಲ್ಲಿ ಜ್ಞಾನದ ಹಸಿವು ಹೆಚ್ಚುವಂತಾಗಲಿ ಎಂಬ ಆಶಯ ನಮ್ಮದು.
– ರುದ್ರಮುನಿ ಶ್ರೀಗಳು ಆಲಮಟ್ಟಿ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.