ನೇಮಕವಾಗದ ನಿರ್ದೇಶಕರ ಹುದ್ದೆ, ಸಾಂಸ್ಕೃತಿಕ ಚಟುವಟಿಕೆ ಸ್ತಬ್ಧ- ರಂಗಾಯಣಗಳ ಅಂಗಳ ಭಣಭಣ


Team Udayavani, Dec 29, 2023, 11:21 PM IST

drama

ಕಾರ್ಕಳ: ನಾಡಿನ ರಂಗ ಸಂಸ್ಕೃತಿಯನ್ನು ಶ್ರೀಮಂತಗೊಳಿಸಲು ರಾಜ್ಯದ 6 ಕಡೆ ಸರಕಾರ ಆರಂಭಿಸಿದ್ದ ರಂಗಾಯಣಗಳಿಗೆ ಇನ್ನೂ ನಿರ್ದೇಶಕರ ನೇಮಕವಾಗಿಲ್ಲ. ಜತೆಗೆ ನಿರೀಕ್ಷಿತ ಅನುದಾನವೂ ಬಿಡುಗಡೆಯಾಗದ ಕಾರಣ ರಂಗಾಯಣಗಳೆಲ್ಲಾ ಭಣಗುಡುತ್ತಿವೆ.

ಮೈಸೂರು, ಧಾರವಾಡ, ಶಿವಮೊಗ್ಗ, ಕಲಬುರ್ಗಿ, ದಾವಣೆಗೆರೆ, ಉಡುಪಿ (ಕಾರ್ಕಳ) ಯಕ್ಷರಂಗಾಯಣ ಸೇರಿ ಆರು ಕಡೆ ರಂಗಾಯಣಗಳು ಕಾರ್ಯ ನಿರತವಾಗಿವೆ. ಹೊಸ ಸರಕಾರ ಬಂದು ಆರು ತಿಂಗಳಾಗುತ್ತಿದ್ದರೂ ಈವರೆಗೂ ನೂತನ ನಿರ್ದೇಶಕರ ನೇಮಕವಾಗಿಲ್ಲ. ಇದರ ಆಡಳಿತ ಮಂಡಳಿಯಂತಿರುವ ರಂಗಸಮಾಜಕ್ಕೂ ಸದಸ್ಯರ ನೇಮಕವಾಗಿಲ್ಲ. ಹಾಗಾಗಿ ಬಹುತೇಕ ರಂಗಾಯಣಗಳು ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ.

ಬಿಜೆಪಿ ಸರಕಾರವಿದ್ದಾಗ ಐದು ಕಡೆ ನಿರ್ದೇಶಕರು ತಮ್ಮ ಅಧಿಕಾರವಧಿ ಮೂರು ವರ್ಷ ಮುಗಿದು ಹೆಚ್ಚುವರಿಯಾಗಿ 5 ತಿಂಗಳು ಕಾರ್ಯ ನಿರ್ವಹಿಸಿದ್ದರು. ಬಳಿಕ ಬಂದ ಹೊಸ ನಿಗಮ ಮಂಡಳಿಗಳ ಅಧ್ಯಕ್ಷರು, ಅಕಾಡೆಮಿ, ರಂಗಾಯಣ ಅಧ್ಯಕ್ಷರು-ನಿರ್ದೇಶಕರ ನೇಮಕಾತಿ ರದ್ದುಗೊಳಿಸಿ ನಿರ್ದೇಶಕರ ನೇಮಕ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಉಡುಪಿ (ಕಾರ್ಕಳ) ಯಕ್ಷರಂಗಾಯಣದ ನಿರ್ದೇಶಕರ ಅವಧಿ ಒಂದೇ ವರ್ಷದಲ್ಲಿ ಕೊನೆಗೊಂಡಿತ್ತು.

ಸದ್ಯಕ್ಕೆ ರಂಗಾಯಣದಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲವಾದ್ದರಿಂದ ರಂಗಶಾಲೆಯ ಕಲಾವಿದರು, ಸಿಬಂದಿಗೆ ಕೆಲಸವಿಲ್ಲದಂತಾಗಿದೆ. ಕೆಲವೆಡೆ ರಂಗಶಾಲೆಯ ಕಲಾವಿದರು ರಂಗಾಯಣದಿಂದ ಹೊರಬರುತ್ತಿದ್ದಾರೆ. ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ರಂಗಾಯಣ ದಲ್ಲಿ ಆಡಳಿತಾಧಿಕಾರಿಗಳಿದ್ದು, ತಿಂಗಳಿಗೆ ಒಂದು ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದೆ.

ಅನುದಾನವೂ ಇಳಿಮುಖ
ಆರಂಭದಲ್ಲಿ ಪ್ರತೀ ವರ್ಷ 1 ಕೋ.ರೂ ಅನುದಾನ ರಂಗಾಯಣಕ್ಕೆ ಸಿಗುತ್ತಿತ್ತು. ಬಳಿಕ ರೂ. 75 ಲಕ್ಷ, ರೂ. 50 ಲಕ್ಷ, ರೂ. 40 ಲಕ್ಷ ರೂ. ಗೆ ಇಳಿಯಿತು. ಪ್ರಸಕ್ತ ಸಾಲಿನಲ್ಲಿ ಅದು 20 ಲಕ್ಷ ರೂ. ಗಳಿಗೆ ಮಿತಿಗೊಂಡಿದೆ. ಈ ಹಣ ಸಿಬಂದಿ ವೇತನ, ಕಲಾವಿದರ ವೇತನ, ತರಬೇತಿ ಇತ್ಯಾದಿಗೇ ಸಾಲುತ್ತಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಧೂಳು ತಿನ್ನುತ್ತಿವೆ ಪರಿಕರ
ಕೇಂದ್ರಗಳು ಚಟುವಟಿಕೆ ನಿಲ್ಲಿಸಿದ್ದರಿಂದ ಲಕ್ಷಾಂತರ ರೂ. ಮೌಲ್ಯದ ರಂಗ ಪರಿಕರಗಳು ಧೂಳು ಹಿಡಿದಿವೆ. ರಂಗಕಲೆಗೆ ಶಕ್ತಿ ತುಂಬಲು ಆರಂಭವಾದ ರಂಗಾಯಣಗಳ ಬಗ್ಗೆ ಸರಕಾರ ಕೂಡಲೇ ಗಮನಹರಿಸಬೇಕು ಎಂಬುದು ರಂಗಾಸಕ್ತರ ಆಗ್ರಹ.

ಅಕಾಡೆಮಿಗಳಿಗೆ ನೇಮಕ
‌ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿ, ಸಂಗೀತ ನೃತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಶಿಲ್ಪಕಲಾ ಅಕಾಡೆಮಿ, ತುಳು ಅಕಾಡೆಮಿ, ಲಲಿತಾಕಲಾ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಕೊಡವ ಅಕಾಡೆಮಿ, ಬ್ಯಾರಿ ಅಕಾಡೆಮಿ, ಬಯಲಾಟ ಅಕಾಡೆಮಿ, ಲಂಬಾಣಿ ಭಾಷಾ ಅಕಾಡೆಮಿಗಳಿಗೆ ನಿರ್ದೇಶಕರ ನೇಮಕವಾಗಬೇಕಿದೆ.

ಈ ಕುರಿತು ಸರಕಾರದ ಮಟ್ಟದಲ್ಲಿ ತೀರ್ಮಾನವಾಗಿದ್ದು, ಒಂದು ತಿಂಗಳೊಳಗೆ ನಿರ್ದೇಶಕರ ಹೆಸರನ್ನು ಪ್ರಕಟಿಸಲಾಗುವುದು. ರಂಗಭೂಮಿ, ಸಾಂಸ್ಕೃತಿಕ ಚಟುವಟಿಕೆ ಕುಂಠಿತವಾಗದಂತೆ ಗಮನ ಹರಿಸಲಾಗುವುದು.
– ಡಾ| ಎಸ್‌. ಮಂಜುಳಾ, ಮುಖ್ಯ ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.