ಶಿರಸಿ-ಹಾಸ್ಯ ಬದುಕಿನಲ್ಲಿ ಅಂತರ್ಗತ: ಪ್ರೊ| ಭುವನೇಶ್ವರಿ ಹೆಗಡೆ


Team Udayavani, Jan 1, 2024, 5:43 PM IST

Udayavani Kannada Newspaper

ಶಿರಸಿ: ಹಾಸ್ಯಕ್ಕೆ ಪಕ್ಷವಿಲ್ಲ. ಹಾಸ್ಯಕ್ಕೆ ಪಂಥವೂ ಇಲ್ಲ. ಹಾಸ್ಯ ಸಾಹಿತ್ಯ ಎಲ್ಲವನ್ನೂ ಮೀರಿದ್ದು. ಹಾಸ್ಯವು ನಮ್ಮ ಬದುಕಿನಲ್ಲಿ ಅಂತರ್ಗತವಾಗಿರುತ್ತದೆ ಎಂದು ಪ್ರಸಿದ್ಧ ಹಾಸ್ಯ ಸಾಹಿತಿ, ಪ್ರೊ| ಭುವನೇಶ್ವರಿ ಹೆಗಡೆ ಹೇಳಿದರು.

ಭಾನುವಾರ ಅವರು ನಗರದ ಗಣೇಶ ನೇತ್ರಾಲಯದ ನಯನ ಸಭಾಂಗಣದಲ್ಲಿ ಎಂ. ರಮೇಶ ಪ್ರಶಸ್ತಿ ಸಮಿತಿ ನೀಡುವ ಎಂ. ರಮೇಶ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಹಾಸ್ಯ ಪ್ರಬಂಧವು ನಮ್ಮ ಬದುಕಿನಲ್ಲಿ ನವಿರಾದ ಪ್ರಭಾವ ಬೀರುತ್ತವೆ.

ನವಿರಾದ ಹಾಸ್ಯ ಓದಿ ಮುಗಿಸುವ ತನಕ ಒಂದು ಉಲ್ಲಾಸ ಸಿಗಬೇಕು ಎಂದ ಅವರು, ಹಾಸ್ಯ ಸಾಹಿತ್ಯಕ್ಕೆ ಭವಿಷ್ಯವಿದೆ ಎಂದೇ ನಂಬಿದ್ದೇನೆ ಎಂದರು. ನಾನು ಹಾಸ್ಯ ಸಾಹಿತ್ಯದ ಸಂಪರ್ಕಕ್ಕೆ ಬರಲು ಪ್ರೊ| ಎಂ.ರಮೇಶ ಅವರು ಕಾರಣ. ಹಾಸ್ಯ ಸಾಹಿತ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಲು ರಮೇಶ ಅವರ ಮಾತು ಕಾರಣ. ಸತ್ಯವನ್ನು ನವಿರಾಗಿ ಹೇಳುತ್ತಿದ್ದರು ಎಂದರು.

ಪ್ರಶಸ್ತಿ ಪ್ರದಾನ ನೆರವೇರಿಸಿದ ಕವಿ, ಅನುವಾದಕ ಧರಣೇಂದ್ರ ಕುರಕುರಿ, ಬದುಕನ್ನು ಗಾಢವಾಗಿ ಪ್ರೀತಿಸಿದವರು ರಮೇಶರು. ಶಿಷ್ಯರ, ಸ್ನೇಹಿತರ ಬದುಕನ್ನು ರೂಪಿಸಿದವರರು. ಟಿ. ಸುನಂದಮ್ಮ ಅವರ ಹಾಸ್ಯ ಪರಂಪರೆಯನ್ನು ಮುಂದುವರಿಸಿದವರು ಭುವನೇಶ್ವರಿ ಹೆಗಡೆ ಅವರು. ಅವರಿಗೆ ರಮೇಶ ಅವರ ಪ್ರಶಸ್ತಿ ಲಭಿಸಿದ್ದು ಅತ್ಯಂತ ಖುಷಿಯ ಸಂಗತಿ ಎಂದರು. ಅಧ್ಯಕ್ಷತೆವಹಿಸಿದ್ದ ನಿವೃತ್ತ ಪ್ರಾಚಾರ್ಯೆ ಕುಮುದಾ ಶರ್ಮಾ ಮಾತನಾಡಿ, ನಿತ್ಯ ಬದುಕಿನಲ್ಲಿ ರಮೇಶರು ನೆನಪಾಗುತ್ತದೆ ಎಂದರು. ವೈಶಾಲಿ ವಿ.ಪಿ.ಹೆಗಡೆ, ಪ್ರೊ. ವಿಜಯನಳಿನಿ ರಮೇಶ ಇತರರು ಇದ್ದರು. ಡಾ| ಜಿ.ಎಂ. ಹೆಗಡೆ, ಡಾ| ಶಿವರಾಮ ಕೆ.ವಿ ಅವರು ಸಭಿಕರ ಪರವಾಗಿ ಮಾತನಾಡಿದರು.

ರೋಹಿಣಿ ಹೆಗಡೆ ಪ್ರಾರ್ಥಿಸಿದರು. ಮಧು ಮತ್ತೀಹಳ್ಳಿ ಸ್ವಾಗತಿಸಿದರು. ಪ್ರಜ್ಞಾ ಮತ್ತಿಹಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಸಮ್ಮಾನ ಪತ್ರವನ್ನು ಶೈಲಜಾ ಗೋರ್ನಮನೆ ವಾಚಿಸಿದರು. ವೈಶಾಲಿ ಹೆಗಡೆ ನಿರ್ವಹಿಸಿದರು. ಮಹಿಮಾ ಭಟ್ಟ ವಂದಿಸಿದರು. ಕಾರ್ಯಕ್ರಮಕ್ಕೆ ನಯನ ಫೌಂಡೇಶನ್‌ ಸಹಭಾಗಿತ್ವ ನೀಡಿತ್ತು.

ಗುರುಗಳಾದ ರಮೇಶರ ಸ್ಮರಣೆಯ ಪ್ರಶಸ್ತಿ ಪಡೆಯುತ್ತಿರುವುದು ನನ್ನ ಪುಣ್ಯ. ನತಮಸ್ತಕಳಾಗಿ ಸ್ವೀಕರಿಸಿದ್ದೇನೆ. ಹರ ಮುನಿದರೂ ಗುರು ಕಾಯುವನು ಎಂಬ ಮಾತು ನಳಿನಿ ಮೇಡಂ ಅವರ ಮೂಲಕ ಸತ್ಯವಾಗಿಸಿದೆ.
*ಭುವನೇಶ್ವರಿ ಹೆಗಡೆ, ಪ್ರಸಿದ್ಧ ಹಾಸ್ಯ ಲೇಖಕಿ

ಹಾಸ್ಯ ಸಾಹಿತ್ಯಕ್ಕೆ ಅತ್ಯಂತ ಪ್ರಮುಖ ಸ್ಥಾನ ಇದೆ. ನಿತ್ಯ ಬದುಕಿನಲ್ಲಿ ಅನೇಕ ಹಾಸ್ಯ ಘಟನೆಗಳು ನಡೆಯುತ್ತವೆ.
*ಡಾ| ಧರಣೇಂದ್ರ ಕುರಕುರಿ,
ಹಿರಿಯ ಸಾಹಿತಿ

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.