Hunsur ಕಾಮಗೌಡನಹಳ್ಳಿಯಲ್ಲಿ ಹುಲಿ ಪ್ರತ್ಯಕ್ಷ, ಆತಂಕದಲ್ಲಿ ರೈತರು
Team Udayavani, Jan 1, 2024, 8:33 PM IST
ಹುಣಸೂರು: ಕೆಲವು ದಿನಗಳಿಂದ ಕಾಣೆಯಾಗಿದ್ದ ಹುಲಿರಾಯ ಮತ್ತೆ ತನ್ನ ಇರುವಿಕೆಯನ್ನು ಸಾದರಪಡಿಸಿದ್ದು, ಸೋಮವಾರ ಸಂಜೆ ಕಾಮಗೌಡನಹಳ್ಳಿ ಜಮೀನಿನಲ್ಲಿ ದಿಡೀರ್ ಪ್ರತ್ಯಕ್ಷವಾಗಿ, ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರು ಹಾಗೂ ಜಮೀನಿನಲ್ಲಿ ಮೇವು ಮೇಯುತ್ತಿದ್ದ ರಾಸುಗಳು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಲೂಕಿನ ಹನಗೋಡು ಭಾಗದಲ್ಲಿ ಆಗಾಗ್ಗೆ ಹುಲಿಯು ಕಾಣಿಸಿಕೊಳ್ಳುತ್ತಿತ್ತಲ್ಲದೆ ಜಾನುವಾರು, ಸಾಕು ಪ್ರಾಣಿಗಳನ್ನು ಕೊಂದು ಹಾಕಿತ್ತು ಈ ಸಂಬಂಧ ಸಾಕಷ್ಟು ಬಾರಿ ಅರಣ್ಯ ಇಲಾಖೆಗೆ ಹುಲಿಯನ್ನು ಸೆರೆ ಹಿಡಿಯುವಂತೆ ರೈತರು ಮನವಿ ಮಾಡಿದ್ದರು. ಅರಣ್ಯಾಧಿಕಾರಿಗಳು ಸಹ ಕೂಂಬಿಂಗ್ ನಡೆಸಿದ್ದರಾದರೂ ಮತ್ತೆ ಹುಲಿ ಕಾಣೆಯಾಗಿತ್ತು. ಇದೀಗ ಕಾಮಗೌಡನಹಳ್ಳಿಯಲ್ಲಿ ರೈತರು ಕೃಷಿ ಚಟುವಟಿಕೆ ನಡೆಸುತ್ತಿದ್ದ ವೇಳೆಯೇ ಪ್ರತ್ಯಕ್ಷವಾಗಿದ್ದು, ಜಾನುವಾರುಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ.
ಈ ವೇಳೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು, ರೈತರು ಜೋರಾಗಿ ಕೂಗಿಕೊಂಡಿದ್ದರಿಂದ ಮತ್ತೆ ಕಾಡಿನತ್ತ ಓಡಿಹೋಗಿದೆ.
ವಿಷಯ ತಿಳಿದು ಆರ್.ಎಫ್.ಓ.ನಂದಕುಮಾರ್, ಡಿ.ಆರ್.ಎಫ್.ಓ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್